ಜೋಡಿ ಕೊಲೆ: ಆರೋಪಿಗಳಿಗೆ ಜೀವಾವಧಿ ಸಜೆ


Team Udayavani, Feb 26, 2017, 12:11 PM IST

shikshe.jpg

ಪುತ್ತೂರು: ನಾಲ್ಕೂವರೆ ವರ್ಷಗಳ ಹಿಂದೆ ಕೋಡಿಂಬಾಳ ಉಂಡಿಲ ನಿವಾಸಿಗಳಾದ ಬೇಬಿ ಥಾಮಸ್‌ ಮತ್ತು ಅವರ ಪತ್ನಿ ಮೇರಿ ಥಾಮಸ್‌ ದಂಪತಿಯನ್ನು ಬರ್ಬರವಾಗಿ ಕೊಲೆಗೈದ ಪ್ರಕರಣದ ಇಬ್ಬರು ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಪೀಠ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಸೋಮವಾರಪೇಟೆ ತಾಲೂಕಿನ ಮಹಮ್ಮದ್‌ ರಫೀಕ್‌ ಅಲಿಯಾಸ್‌ ರಫೀಕ್‌ ಮತ್ತು ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ನುರಿಯಾಳು ನಿವಾಸಿ ಮಹಮ್ಮದ್‌ ಕಮಲುದ್ದೀನ್‌ ಯಾನೆ ಸೈದು ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು.
2012ರ  ಸೆ. 25ರಂದು ರಾತ್ರಿ ಆರೋಪಿಗಳು ಉಂಡಿಲದ ಬೇಬಿ ಥಾಮಸ್‌ ಅವರ ಮನೆ ಮುಂಭಾಗಕ್ಕೆ ಬಂದು ಬೈಕ್‌ ಹಾಳಾಗಿದ್ದು, ಪತ್ನಿಯ ಮನೆಗೆ ಹೋಗಬೇಕಾಗಿರುವುದಾಗಿ ಹೇಳಿದ್ದರು. ಬೇಬಿ ಥಾಮಸ್‌ ಅವರು ತನ್ನ ಇಂಡಿಕಾ ಕಾರಿನಲ್ಲಿ ಈ ಇಬ್ಬರನ್ನು ಕರೆದುಕೊಂಡು ಹೋಗಿದ್ದರು. ಬೊಳ್ಳೂರು ಕ್ರಾಸ್‌ ಸಮೀಪ ಕಾರಿನೊಳಗೆ ಬೇಬಿ ಥಾಮಸ್‌ ಅವರನ್ನು ಮತ್ತು ಉಂಡಿಲದ ಮನೆಯಲ್ಲಿ ಬೇಬಿ ಥಾಮಸ್‌ ಅವರ ಪತ್ನಿ ಮೇರಿ ಥಾಮಸ್‌ ಅವರ ಕುತ್ತಿಗೆ ಇರಿದು ಕೊಲೆ ಮಾಡಿದ್ದರು. 

ಅನಂತರ ಆರೋಪಿಗಳು 90,800 ರೂ. ಮೌಲ್ಯದ ಚೈನ್‌, ಬೆಂಡೋಲೆ ಮನೆಯ ಕಪಾಟಿ ನಲ್ಲಿದ್ದ ನಗದು, ಮೊಬೈಲ್‌ ಅನ್ನು ಎಗರಿಸಿ ಪರಾರಿ ಆಗಿದ್ದರು. ಒಂದು ತಿಂಗಳ ಅನಂತರ ಆರೋಪಿಗಳು ಕೊಲೆಯಾದ ಮನೆಯಿಂದ ಕದ್ದೊಯ್ದ ಮೊಬೈಲ್‌ ಸಂಖ್ಯೆಯ ಜಾಡು ಹಿಡಿದು ಬಂಧಿಸಲಾಗಿತ್ತು. ಫೆ. .22 ರಂದು ಆರೋಪಿಗಳಿಬ್ಬರು ಅಪರಾಧಿಗಳು ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ಫೆ. 25ರಂದು ಶಿಕ್ಷೆ ಪ್ರಕಟಿಸಿದೆ.

ಶಿಕ್ಷೆಯ ಪ್ರಮಾಣ
ದರೋಡೆ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ದಂಡ ಸಂಹಿತೆ 302 ರ ಪ್ರಕಾರ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

3,000 ರೂ. ದಂಡ, ದಂಡ ಪಾವತಿಗೆ ವಿಳಂಬವಾದರೆ 3 ತಿಂಗಳು ಹೆಚ್ಚುವರಿ ಜೈಲು,  449 ಕಲಂ ಅಡಿ 10 ವರ್ಷ ಕಠಿನ ಶಿಕ್ಷೆ, 5 ಸಾವಿರ ದಂಡ, ದಂಡ ಪಾವತಿಸಿಸಲು ವಿಳಂಬವಾದರೆ 5 ತಿಂಗಳು ಹೆಚ್ಚುವರಿ ಜೈಲುವಾಸ, 392 ಕಲಂ ಅಡಿ 10 ವರ್ಷ ಕಠಿನ ಶಿಕ್ಷೆ, 5 ಸಾವಿರ ರೂ. ದಂಡ, ದಂಡ ಪಾವತಿಗೆ ವಿಳಂಬವಾದರೆ 5 ತಿಂಗಳು ಹೆಚ್ಚುವರಿ ಜೈಲು 
ಶಿಕ್ಷೆ ವಿಧಿಸಿದೆ. ಸರಕಾರದ ಪರ  ಸರಕಾರಿ ಅಭಿಯೋಜಕ ಎಂ. ಉದಯಕುಮಾರ್‌ ಅವರು ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.