ಮರೀಚಿಕೆಯಾಗಿ ಉಳಿಯಿತೇ ಮೊಗ್ರ ಸೇತುವೆಯ ಕನಸು


Team Udayavani, Apr 25, 2019, 5:50 AM IST

13

ಮೊಗ್ರ ಹೊಳೆಗೆ ಅಳವಡಿಸಲಾದ ಅಡಿಕೆ ಮರದ ಕಾಲುಸಂಕ.

ಗುತ್ತಿಗಾರು: ಇಲ್ಲಿನ ಮೊಗ್ರ ಏರಣಗುಡ್ಡೆಯ ಹೊಳೆಗೆ ಬಹು ವರ್ಷ ಗಳಿಂದ ಬೇಡಿಕೆಯಾಗಿದ್ದ ಮೊಗ್ರ ಸೇತುವೆ ನಿರ್ಮಾಣ ಕಾಮಗಾರಿ ಮರೀಚಿಕೆಯಾ ಗಿಯೇ ಉಳಿದಿದೆ. ಈ ಮಳೆಗಾಲದಲ್ಲಿಯೂ ಸ್ಥಳೀಯರು ಅಡಿಕೆ ಮರದ ಕಾಲುಸಂಕದ ಲ್ಲಿಯೇ ಹೊಳೆ ದಾಟಬೇಕಾದ ಪರಿಸ್ಥಿರಿ ಇದೆ.

ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಏರಣಗುಡ್ಡೆ ಹಾಗೂ ಮೊಗ್ರಶಾಲೆ, ಅಂಗನವಾಡಿ, ಆರೋಗ್ಯ ಉಪಕೇಂದ್ರಗಳ ನಡುವೆ ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯೆ ಮೊಗ್ರ ಹೊಳೆ ಹರಿಯುತ್ತಿದ್ದು ಈ ಹೊಳೆಗೆ ಸೇತುವೆ ರಚನೆ ಮಾಡುವಂತೆ ಈ ಭಾಗದ ಜನ ಹಲವು ವರ್ಷಗಳಿಂದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಆದರೆ ಇದುವರೆಗೆ ಈ ಹೊಳೆಗೆ ಸೇತುವೆ ನಿರ್ಮಿಸಲು ಯಾವೊಂದು ಅನುದಾನ ಲಭಿಸಿಲ್ಲ.

ಅಡಿಕೆ ಮರದ ಸೇತುವೆ
ಮಳೆಗಾಲದಲ್ಲಿ ತುಂಬಿ ಹರಿಯುವ ಮೊಗ್ರ ಹೊಳೆಯನ್ನು ದಾಟಲು ಗ್ರಾ.ಪಂ. ವತಿಯಿಂದ ತಾತ್ಕಾಲಿಕ ಅಡಿಕೆ ಮರದ ಕಾಲುಸಂಕ ನಿರ್ಮಿಸಲಾಗಿದೆ. ಇದೇ ಕಾಲುಸಂಕದಲ್ಲಿ ಹೊಳೆಯಾಚೆ ಇರುವ ಶಾಲಾ ಮಕ್ಕಳು, ಅಂಗನವಾಡಿ ಪುಟಾಣಿಗಳು ಹಾಗೂ ನಾಗರಿಕರು ಜೀವ ಕೈಯಲ್ಲಿ ಹಿಡಿದು ಸಾಗಬೇಕು. ಸ್ವಲ್ಪ ಆಯತಪ್ಪಿದರೂ ನೀರು ಪಾಲಾಗುವ ಭೀತಿ ಇಲ್ಲಿನ ನಾಗರಿಕರದ್ದು.

ಬೇಡಿಕೆ ಸಲ್ಲಿಕೆ
ಮೊಗ್ರದಲ್ಲಿ ಸೇತುವೆ ನಿರ್ಮಾಣ ಮಾಡಲು ಹಲವು ಬಾರಿ ವಿವಿಧ ಇಲಾಖೆಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಇಲ್ಲಿನ ಜನತೆ ಮನವಿ ಸಲ್ಲಿಸಿದ್ದರು. ಸುಳ್ಯ ಶಾಸಕರು, ದ.ಕ. ಸಂಸದರಿಗೂ ಇಲ್ಲಿನ ಪರಿಸ್ಥಿತಿಯ ಬಗ್ಗೆ ಮಾಧ್ಯಮಗಳು ವಿವರಿಸಿದ್ದರೂ, ಇದುವರೆಗೆ ಯಾವೊಂದು ಪ್ರಯೋಜನವೂ ಆಗಿಲ್ಲ. ಇಲ್ಲಿನ ಏರಣಗುಡ್ಡೆ-ಮೊಗ್ರ ಪರಿಸರದಲ್ಲಿ ಹಲವು ಪ.ಜಾತಿ ಕುಟುಂಬಗಳಿದ್ದು, ಅವರೆಲ್ಲ ಈ ಹೊಳೆಯನ್ನು ಬಳಸಿಯೇ ಬೇರೆ ಊರುಗಳಿಗೆ ಸಾಗಬೇಕು. ಅತ್ಯಂತ ಆವಶ್ಯಕ ಮತ್ತು ಅನಿವಾರ್ಯವೆನಿಸಿರುವ ಈ ಸೇತುವೆಯ ನಿರ್ಮಾಣದ ಕನಸು ನನಸಾಗುವುದೆಂದು?

ಸುತ್ತುಬಳಸಿ ಪಯಣ
ಮೊಗ್ರ ಹಿ.ಪ್ರಾ. ಶಾಲೆ, ಆರೋಗ್ಯ ಉಪಕೇಂದ್ರ ಹಾಗೂ ಅಂಗನವಾಡಿಗೆ ಹತ್ತಿರದ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬರುವ ಮೊಗ್ರ ಹೊಳೆಗೆ ಸೇತುವೆ ರಚನೆ ಮಾಡಿದರೆ ಅತ್ಯಂತ ಹತ್ತಿರದ ಸಂಪರ್ಕ ಕೊಂಡಿಯಾಗುತ್ತದೆ. ಇಲ್ಲವಾದಲ್ಲಿ ಮಕ್ಕಳು ಸುತ್ತುಬಳಸಿ ಶಾಲೆಯನ್ನು ತಲುಪಬೇಕು. ಆದ್ದರಿಂದ ಇಲ್ಲಿನ ಶಾಲೆಗೆ ಮಕ್ಕಳನ್ನು ಕಳುಹಿಸಲು ಹಿಂಜರಿಯುತ್ತಿದ್ದು, ಸ್ಥಳೀಯ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕ್ಷೀಣಿಸಿದೆ.

1 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ
ಮೊಗ್ರದಲ್ಲಿ ಸೇತುವೆ ನಿರ್ಮಾಣಕ್ಕಾಗಿ 1 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಶಾಸಕ ಎಸ್‌. ಅಂಗಾರ ಅವರ ಸೂಚನೆಯಂತೆ ಕಳುಹಿಸಲಾಗಿದ್ದು, ಇನ್ನಷ್ಟೇ ಅನುದಾನ ಮಂಜೂರಾಗಬೇಕಿದೆ. ನಬಾರ್ಡ್‌ ಮೂಲಕ ಅನುದಾನ ಮಂಜೂರಾದಲ್ಲಿ ಸುಸಜ್ಜಿತ ಸೇತುವೆ ಇಲ್ಲಿ ನಿರ್ಮಾಣವಾಗಲಿದೆ.

ಅನುದಾನದ ನಿರೀಕ್ಷೆ
ಮೊಗ್ರದಲ್ಲಿ ಸೇತುವೆ ರಚನೆಗೆ ಪ್ರಸ್ತಾವನೆಯನ್ನು ಶಾಸಕರ ಮೂಲಕ ಕಳುಹಿಸಲಾಗಿದೆ. ಅನುದಾನ ಬರುವ ನಿರೀಕ್ಷೆಯಿದ್ದು, ಶೀಘ್ರವೇ ಗ್ರಾಮಸ್ಥರ ಬೇಡಿಕೆ ಈಡೇರಲಿದ್ದು, ಸೇತುವೆ ನಿರ್ಮಾಣ ಆಗಲಿದೆ.
– ಜಯಪ್ರಕಾಶ್‌ ಮೊಗ್ರ, ಸದಸ್ಯರು, ಗುತ್ತಿಗಾರು ಗ್ರಾ.ಪಂ.

ಶಾಲೆಯೂ ಮುಚ್ಚುವ ಭೀತಿ
ಜನಪ್ರತಿನಿಧಿಗಳು ಸೇತುವೆ ನಿರ್ಮಾಣದ ಭರವಸೆ ನೀಡುತ್ತಾರೆ ಅಷ್ಟೆ. ಸೇತುವೆ ರಚನೆ ಕಡತಗಳು ಪಾಳು ಬಿದ್ದಿವೆ. ಹೊಳೆಯಿಂದಾಗಿ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಲು ಭಯಪಡುತ್ತಿದ್ದು, ಶಾಲೆ ಮುಚ್ಚುವ ಭೀತಿಯಲ್ಲಿದೆ.
– ಬಿಟ್ಟಿ ಬಿ. ನೆಡುನಿಲಂ, ಸ್ಥಳೀಯರು

ಕೃಷ್ಣಪ್ರಸಾದ್‌ ಕೋಲ್ಚಾರ್‌

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.