ಚೆಂಡೆತಡ್ಕ ಚಾರಿತ್ರಿಕ ಕಳೆಂಜನ ಗುಂಡಿಗೂ ತಟ್ಟಿದ ಬರ!

ಜಾಂಬ್ರಿ ಗುಹಾ ಪ್ರವೇಶ ಸಮೀಪ ಇತಿಹಾಸದಲ್ಲೇ ಮೊದಲ ಸಲ ಬತ್ತಿದೆ ನೀರು

Team Udayavani, May 12, 2019, 6:00 AM IST

24

ಪಾಣಾಜೆ: ಕೇರಳ ಕರ್ನಾಟಕ ಗಡಿ ಭಾಗದ ಆರ್ಲಪದವು ಸನಿಹದ ರಕ್ಷಿತಾರಣ್ಯ ವಲಯದ ಚೆಂಡೆತ್ತಡ್ಕ ಹಲವು ಐತಿಹ್ಯಗಳನ್ನು ಮಡಿಲಲ್ಲಿ ಇಟ್ಟುಕೊಂಡ ಪ್ರದೇಶ. ಸದಾ ನೀರಿನ ಸೆಲೆ ಇರುವ ಇಲ್ಲಿನ ಚಾರಿತ್ರಿಕ ಕಳೆಂಜನ ಗುಂಡಿಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ನೀರು ಬತ್ತಿದೆ!

12 ವರ್ಷಕ್ಕೊಮ್ಮೆ ಲಕ್ಷಾಂತರ ಭಕ್ತರ ಸಮಾಗಮದೊಂದಿಗೆ ನಡೆಯುವ ಐತಿಹಾಸಿಕ ಜಾಂಬ್ರಿ ಗುಹಾ ಪ್ರವೇಶದ ಸನಿಹದಲ್ಲಿ ಕಳೆಂಜನ ಗುಂಡಿ ಇದೆ. ಮುಳಿಹುಲ್ಲು ಆವರಿಸಿರುವ ಇಲ್ಲಿ ಜಾನುವಾರು ಮೇವಿಗೆಂದು ಬರುತ್ತಿದ್ದವರ ಬಾಯಾರಿಕೆ ತಣಿಸಲು ಈ ಹೊಂಡ ಆಶ್ರಯಿಸಿದ್ದರು. ಕಾಡು ಪ್ರಾಣಿ, ಜಾನುವಾರುವಿನ ದಾಹವನ್ನೂ ನೀಗಿಸುತಿತ್ತು. ಪ್ರತಿ ವರ್ಷ ಮಳೆ ಸುರಿದು ಜಾಂಬ್ರಿ ಕೆರೆ ತುಂಬಿ ಕಳೆಂಜನ ಗುಂಡಿ ಭರ್ತಿ ಆಗುತಿತ್ತು. ವರ್ಷವಿಡಿ ಒರೆತೆ ತುಂಬಿ ಜಲಚರಗಳ ದಾಹ ತಣಿಸುತ್ತಿತ್ತು.

ಕಳೆಂಜನ ಗುಂಡಿಯ ಐತಿಹ್ಯ
ಈ ಕಳೆಂಜನ ಗುಂಡಿಗೆ ಒಂದು ಇತಿಹಾಸ ಇದೆ. ತುಳುನಾಡಿನ ಕರ್ಕಾಟಕ ಮಾಸ ಮನೆಗಳಿಗೆ ತೆರಳಿ ಕಷ್ಟಗಳನ್ನು ಕಳೆಯುವ ಆಟಿ ಕಳೆಂಜ ದಾನ ಧರ್ಮಗಳನ್ನು ಪಡೆಯುವ ತಿಂಗಳು. ಆದರೆ ಆಟಿ ಕಳೆಂಜನೋರ್ವ ಆಟಿ ತಿಂಗಳು ಕಳೆದು ಸಿಂಹ ಸಂಕ್ರಾಂತಿ ಬಂದರೂ ಯಾತ್ರೆ ಮುಂದುವರಿಸುತ್ತಾನೆ. ಸಿಂಹ ಮಾಸದಲ್ಲಿ ಧರ್ಮ ಬೇಡುವುದು ನಿಷಿದ್ಧವಾದರೂ ಕಟ್ಟಳೆಯನ್ನು ಮೀರಿ ಸಿಂಹ ಮಾಸದ ಮೊದಲ ದಿನ ಚೆಂಡೆತ್ತಡ್ಕ ಜಾಂಬ್ರಿ ಗುಹೆ ಸಮೀಪ ಬಂದಾಗ ಅದೃಶ್ಯನಾಗುತ್ತಾನೆ. ಈ ಪ್ರದೇಶ ಕಳೆಂಜನ ಗುಂಡಿ ಎಂದು ಜನಜನಿತವಾಗಿದೆ ಎನ್ನುತ್ತದೆ ಇತಿಹಾಸ.
ಇದೇ ಹೊಂಡ ಹತ್ತಿರ ಕಳೆಂಜ ತನ್ನ ಒಲಿಯ ಕೊಡೆಯನ್ನು ಊರಿದ ಸ್ಥಳ ವೆಂದು ಹೇಳಲಾಗುವ ಚಿಕ್ಕ ರಂಧ್ರವಿದೆ.

ಊರಲ್ಲೂ ನೀರಿಗೆ ಬರ
ಚೆಂಡೆತ್ತಡ್ಕ ಸನಿಹದ ಪುತ್ತೂರು ತಾಲೂಕಿಗೆ ಸೇರಿರುವ ಗಿಳಿಯಾಲು ಪರಿಸರದಲ್ಲಿಯು ನೀರಿನ ಸಮಸ್ಯೆ ಉಂಟಾಗಿದೆ. ಕೃಷಿ ತೋಟಕ್ಕೆ ನೀರಿಲ್ಲದೆ ಜನರು ಸಮಸ್ಯೆಗೆ ಒಳಗಾಗಿದ್ದಾರೆ. ಪರಿಸ್ಥಿತಿ ಈ ತೆರನಾಗಿ ಮುಂದುವರಿದರೆ ಕುಡಿಯುವ ನೀರಿಗೂ ಬರ ಬಂದೊಗುವ ಸಾಧ್ಯತೆ ಇದೆ ಅನ್ನುತ್ತಾರೆ ಸ್ಥಳೀಯ ನಿವಾಸಿಗಳು.

ಬರಗಾಲದ ಆತಂಕ
ಎರಡು ವರ್ಷ ಹಿಂದೆ ನಡೆದ ಜಾಂಬ್ರಿ ಮಹೋತ್ಸವ ಸಂದರ್ಭ ಕಳೆಂಜನ ಗುಂಡಿ ನೀರಿನಿಂದ ತುಂಬಿತ್ತು. ಇತಿಹಾಸದಲ್ಲಿ ಪ್ರಥಮ ಬಾರಿ ಎಂಬಂತೆ ಬತ್ತಿರುವುದು ಪ್ರಕೃತಿ ನೀಡುವ ಬರಗಾಲದ ಸೂಚನೆ. ಎಲ್ಲೆಂದರಲ್ಲಿ ಕೊಳವೆ ಬಾವಿ ನಿರ್ಮಾಣ ಕಳೆಂಜನ ಗುಂಡಿ ಒರತೆ ನಿಲ್ಲಲು ಕಾರಣವಾಗಿರಬಹುದು ಅನ್ನುತ್ತಾರೆ ಸ್ಥಳೀಯ ನಿವಾಸಿಗಳು.

ನೀರಿಲ್ಲದೆ ಬತ್ತಿದೆ
ಬೇಸಗೆಯಲ್ಲಿಯೂ ಈ ಹೊಂಡದಲ್ಲಿ ನೀರಿರುತ್ತಿತ್ತು. ಕೈಯಲ್ಲೇ ತೆಗೆದು ಕುಡಿಯಲು ಸಾಧ್ಯವಿರು ವಷ್ಟರ ಮಟ್ಟಿಗೆ ಮೇಲ್ಭಾಗದಲ್ಲಿ ನೀರು ಕಾಣುತಿತ್ತು. ಈ ಬಾರಿ ಬತ್ತಿದೆ. ಇದಕ್ಕೆ ಬರಗಾಲವೂ ಕಾರಣ. ಹೊಂಡ ತುಂಬಲು ಮಳೆ ಬರಬೇಕಷ್ಟೆ.
– ನಾರಾಯಣ ಪ್ರಕಾಶ, ಸ್ಥಳೀಯ ನಿವಾಸಿ

ಮಾಧವ ನಾಯಕ್‌ ಕೆ.

ಟಾಪ್ ನ್ಯೂಸ್

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.