ಅಪರಾಧಗಳ ಹಿಂದೆ ಮಾದಕ ವಸ್ತು ನಶೆ !

ಆರೋಪಿಗಳಲ್ಲಿ ಶೇ. 10ಕ್ಕೂ ಅಧಿಕ ಮಂದಿಯಿಂದ ಡ್ರಗ್ಸ್‌ ಬಳಕೆ

Team Udayavani, Nov 1, 2021, 6:20 AM IST

ಅಪರಾಧಗಳ ಹಿಂದೆ ಮಾದಕ ವಸ್ತು ನಶೆ !

ಮಂಗಳೂರು: ಮಂಗಳೂರು ನಗರವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳಲ್ಲಿ ಮಾದಕ ದ್ರವ್ಯದ ನಶೆಯ ಪ್ರಭಾವ ಹೆಚ್ಚಾಗಿ ಕಂಡುಬಂದಿದ್ದು, ಪೊಲೀಸರಿಗೆ ಹೊಸ ಸವಾಲಾಗಿದೆ.

ಕೇರಳ, ಆಂಧ್ರಪ್ರದೇಶ, ಗೋವಾ ಮೊದಲಾದ ಭಾಗಗಳಿಂದ ಪೂರೈಕೆಯಾಗಿ ಮಂಗಳೂರು ಕೇಂದ್ರೀಕೃತವಾಗಿ ಮಾದಕದ್ರವ್ಯ ಮಾರಾಟ, ಸಾಗಾಟ ಜಾಲ ಸಕ್ರಿಯವಾಗಿದೆ. ಮುಖ್ಯವಾಗಿ ಗಾಂಜಾ ಯುವಕರ ಕೈಗೆ ಸುಲಭವಾಗಿ ಸಿಗುತ್ತಿದೆ ಎನ್ನಲಾಗಿದ್ದು, ಇದರ ನಶೆಯಲ್ಲಿ ಅನೇಕ ಮಂದಿ ಸಮಾಜಘಾತಕ ಕೃತ್ಯಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಈ ಹಿಂದೆ ಮದ್ಯ ಸೇವಿಸಿ ಕೆಲವರು ದುಷ್ಕೃತ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರೆ ಈಗ ಗಾಂಜಾದಂಥ ಮಾದಕದ್ರವ್ಯಗಳ ಮೊರೆ ಹೋಗುತ್ತಿದ್ದಾರೆ ಎಂಬುದನ್ನು ಪೊಲೀಸರು ಕಂಡುಕೊಂಡಿದ್ದಾರೆ.

ಶೇ. 10ಕ್ಕಿಂತ ಅಧಿಕ ಮಂದಿ ಪಾಸಿಟಿವ್‌!
ಮಂಗಳೂರು ನಗರ ಮತ್ತು ಹೊರವಲಯದಲ್ಲಿ ನಡೆದಿರುವ ಅಪರಾಧ ಪ್ರಕರಣಗಳ ಆರೋಪಿಗಳ ಪೈಕಿ ಶೇ. 10ಕ್ಕಿಂತ ಅಧಿಕ ಮಂದಿ ಮಾದಕದ್ರವ್ಯ ಸೇವನೆ ಮಾಡಿರುವುದು ಗೊತ್ತಾಗಿದೆ. ಮಾದಕದ್ರವ್ಯ ಸೇವನೆ ಮದ್ಯಸೇವನೆಗಿಂತಲೂ ಅಪಾಯಕಾರಿ. ಮದ್ಯಸೇವನೆ ಮಾಡಿದರೆ ಆ ಕ್ಷಣದಲ್ಲಿ ಅಪರಾಧ ಮಾಡಬಹುದು. ಆದರೆ ಗಾಂಜಾದಂಥ ಮಾದಕ ನಶೆಯಿಂದ ಯೋಜಿತವಾಗಿ ಗಂಭೀರ ಅಪರಾಧಗಳನ್ನು ಮಾಡುವ ಅಪಾಯ ಹೆಚ್ಚು. ಇತ್ತೀಚೆಗೆ ಮಂಗಳೂರಿನ ಪೊಲೀಸ್‌ ಮೇಲೆ ನಡೆದ ಹಲ್ಲೆ ಪ್ರಕರಣದ ಬಾಲ ಆರೋಪಿಯೂ ಮಾದಕ ದ್ರವ್ಯ ಸೇವಿಸಿರುವುದು ಪತ್ತೆಯಾಗಿತ್ತು. ಹಾಗಾಗಿ ಮಾದಕದ್ರವ್ಯದ ಬಗ್ಗೆ ಇಡೀ ಸಮಾಜ ಗಂಭೀರವಾಗಿ ಚಿಂತಿಸಿ ಇದರ ವಿರುದ್ಧ ಕಾರ್ಯಾಚರಣೆ ನಿರತವಾಗಿರುವ ಪೊಲೀಸರಿಗೆ ಸಹಕರಿಸಬೇಕು ಎನ್ನುತ್ತಾರೆ ಮಂಗಳೂರು ಡಿಸಿಪಿ ಹರಿರಾಂ ಶಂಕರ್‌.

ಶಂಕಾಸ್ಪದ ಆರೋಪಿಗಳ ಪರೀಕ್ಷೆ
ಈಗ ಹೆಚ್ಚಿನ ಪ್ರಕರಣಗಳಲ್ಲಿ ಮಾದಕವಸ್ತು ಸೇವನೆಯ ಪ್ರಭಾವ ಕಂಡುಬರುತ್ತಿರುವುದರಿಂದ ಹೆಚ್ಚಿನ ಆರೋಪಿಗಳನ್ನು ಪೊಲೀಸರು ಮಾದಕ ದ್ರವ್ಯ ಸೇವನೆ ಪತ್ತೆಗಾಗಿ ವೈದ್ಯಕೀಯ ಪರೀಕ್ಷೆಗೆb ಒಳಪಡಿಸುತ್ತಿದ್ದಾರೆ. ಮಾದಕವಸ್ತು ಸೇವನೆ ದೃಢಪಟ್ಟರೆ ಮಾದಕ ದ್ರವ್ಯ ನಿಷೇಧ ಕಾಯಿದೆಯಡಿಯೂ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ಜಮ್ಮು- ಕಾಶ್ಮೀರ: 3 ವಾರದಲ್ಲಿ 25 ಶಂಕಿತರ ಬಂಧನ: ಎನ್‌ಐಎ

276 ಕೆ.ಜಿ. ಗಾಂಜಾ ವಶ
ಮಾದಕ ದ್ರವ್ಯ ಸೇವನೆ ಮತ್ತು ಅಪರಾಧ ಚಟುವಟಿಕೆಗಳಿಗೆ ನಿಕಟ ಸಂಬಂಧವಿದೆ. ಹಾಗಾಗಿ ಡ್ರಗ್ಸ್‌ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಈ ವರ್ಷ ಆರಂಭದಿಂದ ಇದುವರೆಗೆ 230ಕ್ಕೂ ಅಧಿಕ ಪ್ರಕರಣಗಳಲ್ಲಿ ಒಟ್ಟು 276 ಕೆ.ಜಿ.ಗೂ ಅಧಿಕ ಗಾಂಜಾ ಮತ್ತಿತರ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವರ್ಷ ಡ್ರಗ್ಸ್‌ ಸೇವನೆಗೆ ಸಂಬಂಧಿಸಿ ಇದುವರೆಗೆ 378ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

ಡ್ರಗ್ಸ್‌ ಚಟಕ್ಕೆ ಬಿದ್ದವರಿಗೆ ಅಪರಾಧ ಚಟುವಟಿಕೆಯಲ್ಲಿ ತೊಡಗಿಕೊಂಡವರ ಪರಿಚಯವಾಗುವುದು ಹೆಚ್ಚು. ಅನೇಕ ಬಾರಿ ಮಾದಕ ದ್ರವ್ಯ ವ್ಯಸನಿಗಳನ್ನು ಅಪರಾಧ ಚಟುವಟಿಕೆಗಳಲ್ಲಿ ಬಳಸುವವರೂ ಇದ್ದಾರೆ. ಅಲ್ಲದೆ ಡ್ರಗ್ಸ್‌ ವ್ಯಸನಿಗಳಿಗೆ ಹಣದ ಅಗತ್ಯವಿರುವುದರಿಂದ ಇದಕ್ಕಾಗಿಯೂ ಅಪರಾಧ ಚಟುವಟಿಕೆ ಮಾಡುವ ಅಪಾಯ ಹೆಚ್ಚು. ಮಿದುಳಿನ ಮೇಲೆಯೂ ಡ್ರಗ್ಸ್‌ ದುಷ್ಪರಿಣಾಮ ಬೀರುವುದರಿಂದ ಅದು ಅಪರಾಧ ಚಟುವಟಿಕೆಗಳತ್ತ ಸೆಳೆಯುತ್ತದೆ.
– ಗುರುಪ್ರಸಾದ್‌,
ಆಪ್ತ ಸಮಾಲೋಚಕರು,
“ಬಾರ್ಕ್‌’ ಸೆಂಟರ್‌, ಮಂಗಳೂರು

ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ 6 ತಿಂಗಳಲ್ಲಿ ನಡೆದಿರುವ ಅಪರಾಧ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಆರೋಪಿಗಳ ಪೈಕಿ 12 ಮಂದಿ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ. ಇದಲ್ಲದೆ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ 7 ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
– ಹೃಷಿಕೇಶ್‌ ಸೋನಾವಣೆ,
ಎಸ್‌ಪಿ, ದಕ್ಷಿಣ ಕನ್ನಡ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.