ದೇಶದ ಮೊದಲ ಆ್ಯಕ್ಟಿವ್‌ 3ಡಿ 8ಕೆ ತಾರಾಲಯ


Team Udayavani, Dec 22, 2017, 10:04 AM IST

22-19.jpg

ಮಂಗಳೂರು: ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿ ರಾಜ್ಯ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯ ಅನುದಾನದಿಂದ 35.69 ಕೋ.ರೂ. ಅಂದಾಜು ವೆಚ್ಚದಲ್ಲಿ ಸ್ವಾಮಿ ವಿವೇಕಾನಂದ ತಾರಾಲಯ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಫೆಬ್ರವರಿ ಮೊದಲ ವಾರದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಈ ತಾರಾಲಯವು ಆ್ಯಕ್ಟಿವ್‌ 3ಡಿ 8ಕೆ ಪ್ರೊಜೆಕ್ಷನ್‌ ಸಿಸ್ಟಮ್‌ ಒಳಗೊಂಡ ಭಾರತದ ಮೊದಲ ಹಾಗೂ ಜಗತ್ತಿನ 21ನೇ ತಾರಾಲಯ ಎಂಬ ಮನ್ನಣೆ ಪಡೆಯಲಿದೆ.

ಪ್ರಸ್ತುತ ತಾರಾಲಯದಲ್ಲಿ ಕೈಗೊಂಡಿರುವ ಸಿವಿಲ್‌ ಕಾಮಗಾರಿ, ಡೋಮ್‌ ಅಳವಡಿಕೆ, ಪ್ರೊಜೆಕ್ಷನ್‌ ಸಿಸ್ಟಮ್‌ ಹಾಗೂ ಇನ್ನಿತರ ವ್ಯವಸ್ಥೆಗಳ ಬಗ್ಗೆ ಗುರು ವಾರ ಪಿಲಿಕುಳದಲ್ಲಿ ಪರಿಶೀಲನೆ ನಡೆಸಿದ ಬಳಿಕ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಯೋಜನೆ, ಸಾಂಖೀಕ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎಂ.ಆರ್‌. ಸೀತಾರಾಂ ಅವರು, ಪಿಲಿಕುಳದಲ್ಲಿ ನಿರ್ಮಾಣ ವಾಗು ತ್ತಿರುವ 3ಡಿ ತಾರಾಲಯವು ಭಾರತದ ಪ್ರತಿಷ್ಠಿತ ತಾರಾಲಯ ವಾಗ ಲಿದೆ. ಇದು ಕರ್ನಾಟಕದ ಪ್ರವಾ ಸೋ ದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ಹೊಸ ಮೈಲಿಗಲ್ಲು. ಇದರಿಂದ ಮಂಗಳೂರು ವ್ಯಾಪ್ತಿಯಲ್ಲಿ ಪ್ರವಾ ಸೋ ದ್ಯಮಕ್ಕೆ ಹೊಸ ದಿಕ್ಕು ದೊರೆಯಲಿದೆ ಎಂದರು.

18 ಮೀ. ವ್ಯಾಸ, 15 ಡಿಗ್ರಿ ಕೋನದ ಗುಮ್ಮಟ
ತಾರಾಲಯದ ಡೋಮ್‌ನೊಳಗೆ ಅತ್ಯಂತ ಪರಿ ಣಾಮಕಾರಿಯಾದ ನ್ಯಾನೋಸಿಮ್‌ ಫ್ಯಾಬ್ರಿಕೇಶನ್‌ ಮತ್ತು ಅಳವಡಿಕೆ ಶೇ. 80ರಷ್ಟು ಪೂರ್ಣಗೊಂಡಿದೆ. ಇದನ್ನು ಅಮೆರಿಕದಿಂದ ಬಂದಿರುವ ಮೂವರು ಪರಿಣತರೊಂದಿಗೆ ಮಹಾರಾಷ್ಟ್ರದ ನಾಸಿಕ್‌ನ ಹಲ ವಾರು ತಂತ್ರಜ್ಞರು ನಿರ್ವಹಿಸುತ್ತಿದ್ದಾರೆ. ನ್ಯಾನೋಸಿಮ್‌ ಅಳವಡಿಕೆಯಿಂದ ಖಗೋಳ ವಿಜ್ಞಾನ ಪ್ರದರ್ಶನಗಳನ್ನು ಉತ್ಕೃಷ್ಟ ಮಟ್ಟದಲ್ಲಿ ನಡೆಸ ಬಹುದಾಗಿದೆ. ತಾರಾಲಯದ 18 ಮೀ. ವ್ಯಾಸದ, 15 ಡಿಗ್ರಿ ಕೋನದಲ್ಲಿ ಇರಿಸಲ್ಪಟ್ಟ ಡೋಮ್‌ (ಗುಮ್ಮಟ) ಕೂಡ ವಿಶಿಷ್ಟವಾಗಿದ್ದು, ಪ್ರದರ್ಶನಗಳು ವೀಕ್ಷಕರಿಗೆ ನೈಜ ಅನುಭವ ನೀಡಲಿವೆ. ತಾರಾಲಯದ ಹೈಬ್ರಿಡ್‌ ಪ್ರೊಜೆಕ್ಷನ್‌ ಸಿಸ್ಟಮ್‌ಗಳಾದ ಆಪ್ಪೋ-ಮೆಕ್ಯಾನಿಕಲ್‌ ಮತ್ತು ಆ್ಯಕ್ಟಿವ್‌ 3ಡಿ 8ಕೆ ಡಿಜಿಟಲ್‌ ಪ್ರೊಜೆಕ್ಷನ್‌ ಸಿಸ್ಟಮ್‌ಗಳು ಈಗಾಗಲೇ ಪಿಲಿಕುಳಕ್ಕೆ ಬಂದಿವೆ ಎಂದು ಸಚಿವ ಎಂ.ಆರ್‌. ಸೀತಾರಾಂ ವಿವರಿಸಿದರು.

ಇದರ ಜತೆಗೆ ಖಗೋಳ ಹಾಗೂ ಬಾಹ್ಯಾಕಾಶ ವಿಜ್ಞಾನಕ್ಕೆ ಸಂಬಂಧಿಸಿದ ಒಂದು ತಾತ್ಕಾಲಿಕ ಗ್ಯಾಲರಿ ಯನ್ನೂ ನಿರ್ಮಿಸಲಾಗುತ್ತದೆ. ಇದಕ್ಕೆ ಅನು ಕೂಲ ವಾಗುವಂತೆ ಸುಮಾರು 5,200 ಚದರ ಅಡಿ ವಿಸ್ತೀರ್ಣದ ಕಟ್ಟಡ ನಿರ್ಮಾಣಗೊಂಡಿದ್ದು, ಖಗೋಳ ವಿಜ್ಞಾನದ ವಿನೂತನ ಮಾದರಿಗಳನ್ನು ಇಲ್ಲಿ ಅಳವಡಿಸಲಾಗುತ್ತದೆ ಎಂದು ಅವರು ಹೇಳಿದರು. 

ಶಾಸಕ ಜೆ.ಆರ್‌. ಲೋಬೋ, ವಿಜ್ಞಾನ, ತಂತ್ರಜ್ಞಾನ ಇಲಾಖೆ ನಿರ್ದೇ ಶಕರಾದ ಹೊನ್ನೇಗೌಡ, ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌, ಅಪರ ಜಿಲ್ಲಾಧಿಕಾರಿ ಕುಮಾರ್‌, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ವಿ. ಪ್ರಸನ್ನ, ಡಾ| ಕೆ.ವಿ. ರಾವ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ಸಿಸ್ಟಮ್‌ ಅಳವಡಿಕೆಗೆ ಅಮೆರಿಕ-ಜಪಾನ್‌ನ ಪರಿಣತರು!
ಪಿಲಿಕುಳ ತಾರಾಲಯಕ್ಕಾಗಿ ಆಪ್ಪೋ- ಮೆಕ್ಯಾನಿಕಲ್‌ ಸಿಸ್ಟಮ್‌ ಜಪಾನಿನ ಟೋಕಿಯೋ  ದಿಂದ ಹಾಗೂ ಆಕ್ಟಿವ್‌ 3ಡಿ 8ಕೆ ಡಿಜಿಟಲ್‌ ಪ್ರೊಜೆಕ್ಷನ್‌ ಸಿಸ್ಟಮ್‌ ಅಮೆರಿಕದ ಸಾಲ್ಟ್ಲೇಕ್‌ ಸಿಟಿಯಿಂದ ಬಂದಿವೆ. ಈ 2 ಪ್ರೊಜೆಕ್ಷನ್‌ ಸಿಸ್ಟಮ್‌ ಮತ್ತು ನ್ಯಾನೋಸಿಮ್‌ ಡೋಮ್‌ ನಿರ್ಮಾಣಕ್ಕೆ ಸುಮಾರು 21.50 ಕೋ.ರೂ. ವ್ಯಯ  ವಾಗಿದೆ. ತಾರಾಲಯದಲ್ಲಿ ಜನವರಿ ಮೊದಲ ವಾರ ಈ ಸಿಸ್ಟಮ್‌ಗಳ ಅಳವಡಿಕೆ ಆರಂಭಿಸ ಲಾಗುವುದು. ಇದಕ್ಕಾಗಿ ಜಪಾನ್‌ ಹಾಗೂ ಅಮೆರಿಕದಿಂದ ಪರಿಣತರು ಆಗ ಮಿಸ ಲಿದ್ದಾರೆ ಎಂದು ಸಚಿವ ಸೀತಾರಾಂ ತಿಳಿಸಿದರು. 

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ- ಶೀಘ್ರ ಸಂಪುಟ ಒಪ್ಪಿಗೆ
ಪಿಲಿಕುಳದ ಸಮಗ್ರ ಅಭಿವೃದ್ಧಿಯನ್ನು ಗಮನ ದಲ್ಲಿಟ್ಟುಕೊಂಡು ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ನಿರ್ಮಾಣ ಮಾಡಬೇಕು ಎಂಬ ಆಗ್ರಹದ ಈಡೇರಿಕೆಗೆ ಮೊದಲ ಹಂತದ ಪ್ರಕ್ರಿಯೆ ನಡೆಸಲಾಗಿದೆ. ಶೀಘ್ರದಲ್ಲಿ ಇದು ಸಚಿವ ಸಂಪುಟ ಸಭೆ ಮೂಲಕ ಅಂಗೀಕಾರ ಪಡೆದು ಪ್ರಾಧಿಕಾರ ಕಾರ್ಯಾರಂಭಿಸಲಿದೆ. ಆ ಬಳಿಕ ತಾರಾಲಯ ಸೇರಿದಂತೆ ಪಿಲಿಕುಳದ ಸಮಗ್ರ ಅಭಿವೃದ್ಧಿಯನ್ನು ಪ್ರಾಧಿ ಕಾರವು ನಿರ್ವಹಿಸಲಿದೆ. ಪಿಲಿಕುಳ ವಿವಿಧ ಇಲಾಖೆಗಳ ವ್ಯಾಪ್ತಿಗೆ ಸೇರುವ ಕಾರಣ ಈ ಎಲ್ಲ ಇಲಾಖೆಗಳನ್ನು ಇದರಲ್ಲಿ ಸೇರ್ಪಡೆ ಗೊಳಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಸೀತಾರಾಂ ಹೇಳಿದರು.

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.