ಕಾರ್ನಾಡಿನ ಮೊದಲ ಶಾಲೆಗೆ ಈಗ 177ರ ಹರೆಯ

ಬಾಸೆಲ್‌ ಮಿಶನ್‌ ಸಂಸ್ಥೆಯಿಂದ ಶಾಲೆ ಆರಂಭ

Team Udayavani, Nov 9, 2019, 5:00 AM IST

SS-27

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1842 ಶಾಲೆ ಆರಂಭ
ಆರಂಭದಲ್ಲಿ 18 ವಿದ್ಯಾರ್ಥಿಗಳಿಗೆ ಶಿಕ್ಷಣ

ಮೂಲ್ಕಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಶೈಕ್ಷಣಿಕ ಮತ್ತು ಆರೋಗ್ಯ ವಿಚಾರಗಳ ಕಾಂತ್ರಿಯಲ್ಲಿ ಮುಂಚೂಣಿಯಲ್ಲಿದ್ದ ಬಾಸೆಲ್‌ ಮಿಶನ್‌ ಸಂಸ್ಥೆಯ ಮುಖಂಡರಲ್ಲಿ ಒಬ್ಬರಾದ ರೆ| ಜೆ.ಜೆ.ಅಮನ್ನಾ ಅವರು 1842ರಲ್ಲಿ ಕಾರ್ನಾಡಿನಲ್ಲಿ ಮೊತ್ತ ಮೊದಲು ಯು.ಬಿ.ಎಂ.ಸಿ. ಹಿರಿಯ ಪ್ರಾಥಮಿಕ ಶಾಲೆಯನ್ನು ಸ್ಥಾಪಿಸಿದರು. 1842ರಿಂದ 1865ರ ತನಕ ನಡೆದ ಈ ಶಾಲೆಯಲ್ಲಿ ಆರಂಭದಲ್ಲಿ 18 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು 1865ರಲ್ಲಿ ಶಾಲೆಯನ್ನು ಮೂಲ್ಕಿ ಮಿಷನ್‌ ಕಾಂಪೌಂಡ್‌ನ‌ಲ್ಲಿ ಇದ್ದ ಬಾಲಿಕಾಶ್ರಮದ ಶಾಲೆಯ ಜತೆಗೆ ವಿಲೀನಗೊಳಿಸಲಾಯಿತು.

1875ರಲ್ಲಿ ಶಾಲೆ ಪುನರಾರಂಭ
ಈ ಶಾಲೆ ಇಲ್ಲದೆ ಹತ್ತು ವರ್ಷ ಪರಿಸರದ ಮಕ್ಕಳಿಗೆ ಉಂಟಾದ ತೊಡಕನ್ನು ಗಮನಿಸಿದ ಮೂಲ್ಕಿಯ ಪ್ರಸಿದ್ಧ ಚೌಟರ ಮನೆಯ ತಿಮ್ಮಪ್ಪ ಶೆಟ್ಟಿಯವರು ಜನರ ಆಪೇಕ್ಷೆಯಂತೆ 1975ರಲ್ಲಿ ಮತ್ತೆ ಅದೇ ಸ್ಥಳದಲ್ಲಿ ಒಂದು ಹುಲ್ಲು ಚಾವಣಿಯ ಕಟ್ಟಡ ನಿರ್ಮಿಸಿ 20 ಮಕ್ಕಳಿಗೆ ಅವಕಾಶ ಕಲ್ಪಿಸಿದರು. 200 ಚದರ ಅಡಿಯ ವಿಸ್ತೀರ್ಣದ ಈ ಶಾಲೆಯ ಮೊದಲ ಅಧ್ಯಾಪಕರು ಕೂಡಾ ಅವರೇ ಆಗಿದ್ದರು.

ಮತ್ತೆ ಈ ಶಾಲೆಯನ್ನು 1895ರಲ್ಲಿ ಈ ಶಾಲೆಗೆ ಸರಕಾರದ ಮಂಜೂರಾತಿಯು ದೊರೆತು ತಿಮ್ಮಪ್ಪ ಶೆಟ್ಟಿಯವರು ಈ ಶಾಲೆಯನ್ನು ಮತ್ತೆ ಕೆಲವು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿ ವಿಸ್ತರಿಸಿದರು. ಮಾತ್ರವಲ್ಲ ನಿವೃತ್ತಿಯ ತನಕ ಅವರೇ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಾಸೆಲ್‌ ಮಿಶನ್‌ ಸಂಸ್ಥೆಯ ಸಹಕಾರದಿಂದ ಶಾಲೆಯನ್ನು ಬಾಸೆಲ್‌ ಜರ್ಮನ್‌ ಮಿಶನ್‌ ಕಿರಿಯ ಪ್ರಾಥಮಿಕ ಶಾಲೆಯಾಗಿ ಹೆಸರಿಸಲಾಯಿತು.

1945ರಲ್ಲಿ 6ನೇ ತರಗತಿ 1946ರಲ್ಲಿ 7ನೇ ತರಗತಿ ಆರಂಭವಾಗಿ ಈ ಶಾಲೆಯು ಹಿರಿಯ ಪ್ರಾಥಮಿಕ ಶಾಲೆಯಾಗಿ ಪರಿವರ್ತನೆಯಾಯಿತು.
ಈ ಎಲ್ಲ ಬೆಳವಣಿಗೆಯಲ್ಲಿ ಮೂಲ್ಕಿಯ ಹಿರಿಯ ಸಮಾಜ ಸೇವಾಕರ್ತ ಜಿಲ್ಲಾ ಬೋರ್ಡ್‌ ಸದಸ್ಯ ಮೂಲ್ಕಿ ರಾಮಕೃಷ್ಣ ಪೂಂಜಾ ಮತ್ತು ಬಾಲಿಕಾಶ್ರಮದ ಸಿಸ್ಟರ್‌ ಹನ್ನಅಶಿಮನ್‌ ಅವರ ಸಹಾಯ ಹಸ್ತವೂ ಇದೆ.

ಸೌಲಭ್ಯ
ಈ ಶಾಲೆಯಲ್ಲಿ ಆಟದ ಮೈದಾನ, ಗ್ರಂಥಾಲಯ, ಶೌಚಾಲಯ ಮಾತ್ರವಲ್ಲ ಉತ್ತಮ ಬಸ್‌ ಸೌಕರ್ಯದಿಂದ ಹಿಡಿದು ಅಗತ್ಯ ಇರುವ ಎಲ್ಲ ಸೌಲಭ್ಯಗಳನ್ನು ಶಾಲಾ ಆಡಳಿತ ಮಂಡಳಿ ಮತ್ತು ಜನರು ಒಟ್ಟಾಗಿ ಪೂರೈಸಿದ್ದಾರೆ. ಸಾವಿರಕ್ಕೂ ಮಿಕ್ಕಿದ ವಿದ್ಯಾರ್ಥಿಗಳನ್ನು ಹೊಂದಿದ್ದ ಈ ಶಾಲೆಯ ಕನ್ನಡ ಮಾಧ್ಯಮ ದಲ್ಲಿ 42 ವಿದ್ಯಾರ್ಥಿಗಳನ್ನು ಹೊಂದಿದೆ. ಇಲ್ಲಿ ಆಡಳಿತ ಮಂಡಳಿಯು ಸಿ.ಎಸ್‌.ಐ. ಆಂಗ್ಲಮಾಧ್ಯಮ ಶಾಲೆಯನ್ನು ಆರಂಭಿಸಿದೆ. ಇಲ್ಲಿ ಸುಮಾರು 500ಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.

ಇಲ್ಲಿಯ ಹಳೆ ವಿದ್ಯಾರ್ಥಿಗಳಾದ ಸೆಂಟ್ರಲ್‌ ಯುನಿವರ್ಸಿಟಿಯ ವೈಸ್‌ ಚಾನ್ಸೆಲರ್‌ ಪ್ರೊ| ಎನ್‌.ಆರ್‌ ಶೆಟ್ಟಿ , ಡ್ರಗ್‌ ಕಂಟ್ರೋಲರ್‌ ಆಫ್ ಇಂಡಿಯಾ ಆಗಿರುವ ಪ್ರೇಮಾನಂದ ಶೆಟ್ಟಿ , ಉದ್ಯಮಿ ಅರವಿಂದ ಪೂಜಾರಿ ಸಹಿತ ಹಲವಾರು ಮಂದಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ.

ಮರುನಾಮಕರಣ
1952ರಲ್ಲಿ ಈ ಶಾಲೆಯು ಯು.ಬಿ.ಎಂ.ಸಿ. ಶಾಲೆಯಾಗಿ ಮರುನಾಮಕರಣಗೊಂಡು ಅಭಿವೃದ್ದಿಯ ಪಥದಲ್ಲಿ ಮುಂದುವರಿಯಿತು. 1975ರಲ್ಲಿ ಶಾಲೆಯು ವಜ್ರ ಮಹೋತ್ಸವ ಆಚರಿಸಿ ಹೊಸ ತರಗತಿಗಳ ಕಟ್ಟಡವನ್ನು ಹೊಂದಿ ಮೂಲ್ಕಿ ಪರಿಸರದ ಸಾವಿರಾರು ಆರ್ಥಿಕವಾಗಿ ಹಿಂದುಳಿದಿರುವ ಮಕ್ಕಳ ಶಿಕ್ಷಣಕ್ಕೆ ಪ್ರಮುಖ ತಾಣವಾಯಿತು.

ಈ ಶಾಲೆಯ ವಾತಾವರಣ ಬಾಲ್ಯದ ನೆನಪುಗಳನ್ನು ಈಗಲೂ ಹಚ್ಚ ಹಸುರಾಗಿರಿಸಿದೆ ಮಾತ್ರವಲ್ಲ.ಇಲ್ಲಿಯ ಶಿಕ್ಷಣ ಕ್ರಮದ ಗುಣ ಮಟ್ಟ ಮತ್ತು ಶಿಕ್ಷಕರ ಶ್ರಮ ನನ್ನನ್ನು ಈ ವರೆಗೆ ಬೆಳೆಸಿದೆ.
-ಡಾ| ಹಂಸರಾಜ ಶೆಟ್ಟಿ ಜಿ.ಎಂ., ಹಳೆ ವಿದ್ಯಾರ್ಥಿ,
ಮುಖ್ಯಸ್ಥರು ವೇಲ್ಸ್‌ ಯುನಿವರ್ಸಿಟಿ ಲಂಡನ್‌

ಇತಿಹಾಸ ಇರುವ ಶಾಲೆಯಲ್ಲಿ ಕಲಿತ ವಿಧ್ಯಾರ್ಥಿಗಳು ಶಾಲೆಗೆ ಬೇಟಿಯಿತ್ತು ತಮ್ಮ ವಿದ್ಯಾರ್ಥಿ ಬದುಕನ್ನು ನೆನಪಿಸಿಕೊಂಡು ಹೆಮ್ಮೆ ಪಡುತ್ತಾರೆ.ಇಲ್ಲಿಯ ಆಡಳಿತ ಮಂಡಳಿ ಮತ್ತು ಹೆತ್ತವರು ಶಿಕ್ಷಣ ವ್ಯವಸ್ಥೆಯಲ್ಲಿ ಸಂಪೂರ್ಣವಾಗಿ ಸಹಕರಿಸುವ ಮೂಲಕ ಮುಖ್ಯ ಶಿಕ್ಷಕಿಯಾಗಿ ದುಡಿಯಲು ಉತ್ಸಾಹ ತುಂಬುತ್ತದೆ.
-ಪ್ರೀತಿ ಸುನೀತಾ,
ಮುಖ್ಯ ಶಿಕ್ಷಕಿ ಯು.ಬಿ.ಎಂ.ಸಿ. ಕನ್ನಡ ಮಾಧ್ಯಮ ಶಾಲೆ ಕಾರ್ನಾಡು ಮೂಲ್ಕಿ

- ಸರ್ವೋತ್ತಮ ಅಂಚನ್‌

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.