ಅರಣ್ಯ ಇಲಾಖಾ ಸಿಬಂದಿ ವಿರುದ್ಧ ಆಕ್ರೋಶ
Team Udayavani, Apr 1, 2017, 12:40 PM IST
ಸುಳ್ಯ : ಅರಂತೋಡು ಗ್ರಾಮದ ಬಾಜಿನಡ್ಕ, ಮರ್ಕಂಜ ಗ್ರಾಮದ ಅಜ್ಜಿಕಲ್ಲು, ಕಟ್ಟಕೋಡಿ ಪ್ರದೇಶದ ಜನರು ಸುಮಾರು 15 ವರ್ಷಗಳಿಂದ ಮೈರಾಜೆ ಅರಣ್ಯ ಪ್ರದೇಶದ ಹೊಂಡಗಳಲ್ಲಿ ತುಂಬುವ ನೀರನ್ನು ಪೈಪ್ಗ್ಳ ಮೂಲಕ ಮನೆ ಬಳಿಗೆ ಹರಿಸಿ ನಿತ್ಯ ಬಳಸುತ್ತಿದ್ದು, ಈ ಪೈಪ್ಗ್ಳನ್ನು ಅರಣ್ಯ ಇಲಾಖೆ ಸಿಬಂದಿ ತುಂಡರಿಸಿದ ಘಟನೆ ನಡೆದಿದೆ. ಈ ಬಗ್ಗೆ ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈರಾಜೆ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅದನ್ನು ನಂದಿಸುವಲ್ಲಿ ಈ ಸ್ಥಳೀಯರು ಸಹಕರಿಸಿದ್ದರು. ಈ ವೇಳೆ ಅಲ್ಲಿಗೆ ಬಂದ ಅರಣ್ಯ ಇಲಾಖಾ ಸಿಬಂದಿ ಕಾಡ್ಗಿಚ್ಚಿಗೆ ಇವರೇ ಕಾರಣ ಎಂದು ನೆಪವೊಡ್ಡಿ ಈ ಪೈಪ್ಗ್ಳನ್ನು ತುಂಡರಿಸಿದ್ದಾರೆ.
ಪ್ರತಿಭಟನೆಯ ಎಚ್ಚರಿಕೆ
ಇದರಿಂದಾಗಿ ಸುಮಾರು 15ಕ್ಕೂ ಹೆಚ್ಚು ಕುಟುಂಬಸ್ಥರು ಹನಿ ನೀರಿಲ್ಲದೆ ಪರದಾಡುತ್ತಿದ್ದಾರೆ. ಸೋಮವಾರದೊಳಗೆ ಇದನ್ನು ಸರಿಪಡಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ. ಅರಣ್ಯದಂಚಿನಲ್ಲಿ ವಾಸಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಡ ಮತ್ತು ಮಧ್ಯಮ ವರ್ಗದ ಜನರೇ ಹೆಚ್ಚಾಗಿದ್ದು ಅವರಿಗೆ ಈ ಪೈಪ್ ಲೈನ್ ನೀರೇ ಆಸರೆಯಾಗಿತ್ತು. ಸುಮಾರು ಒಂದುವರೆ ಕಿ.ಮೀ. ದೂರಕ್ಕೆ ಪೈಪ್ ಅಳವಡಿಸಲು ಒಂದೊಂದು ಕುಟುಂಬಕ್ಕೂ 15 ಸಾವಿರ ರೂ.ಗಿಂತಲೂ ಹೆಚ್ಚು ಖರ್ಚಾಗಿತ್ತು. ತುಂಡರಿಸಿದ ಪೈಪ್ಗ್ಳನ್ನು ಸರಿಪಡಿಸಲು 1 ಲಕ್ಷಕ್ಕಿಂತಲೂ ಹೆಚ್ಚು ಖರ್ಚಾಗುವುದರಿಂದ ಪುನಃ ನಮಗೆ ಅಷ್ಟು ಖರ್ಚು ಮಾಡಲು ಸಾಧ್ಯವಿಲ್ಲ. ಅರಣ್ಯ ಇಲಾಖೆಯವರು ಪೈಪ್ ಸರಿಮಾಡಿಕೊಡದಿದ್ದರೆ ಮಹಿಳೆಯರು, ಮಕ್ಕಳು ಸೇರಿ ಎಲ್ಲರೂ ಅರಣ್ಯ ಇಲಾಖಾ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಸಿದ್ದಾರೆ. ಅರಣ್ಯ ಇಲಾಖೆ ಸರಿಪಡಿಸಿಕೊಡುವ ಭರವಸೆ ನೀಡಿದ್ದು, ಹೊಸ ಪೈಪ್ಗ್ಳನ್ನು ತಂದು ಹಾಕಲಾಗಿದೆ.
ಪ್ರತಿಭಟನೆಗೆ ಬೆಂಬಲ
ಸೋಮವಾರದೊಳಗೆ ಹೊಸ ಪೈಪ್ಲೈನ್ ಹಾಕಿ ನೀರಿನ ಪೈಪ್ನ್ನು ಅರಣ್ಯ ಇಲಾಖೆಯವರು ಸರಿಪಡಿಸಿಕೊಡಬೇಕು. ಇಲ್ಲವಾದರೆ ಪ್ರತಿಭಟನೆ ನಡೆಸಲು ಅವರಿಗೆ ಬೆಂಬಲ ನೀಡುವುದಾಗಿ ಮೊಗೇರ ಸಂಘದ ತಾಲೂಕು ಅಧ್ಯಕ್ಷ ಪ್ರಕಾಶ್ ಬಂಗ್ಲೆಗುಡ್ಡೆ ಮತ್ತು ಮಾಜಿ ಅಧ್ಯಕ್ಷ ದೇವಪ್ಪ ಹೈದಂಗೂರು ಎಚ್ಚರಿಸಿದ್ದಾರೆ. ಅಲ್ಲದೆ ತಪ್ಪಿತಸ್ಥ ಗಾರ್ಡ್ಗಳ ವಿರುದ್ಧ ಕ್ರಮ ಜರಗಿಸಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ