ವಿಳಂಬಿಸಲಿದೆ ಎಂಆರ್‌ಪಿಎಲ್‌ ನಾಲ್ಕನೇ ಹಂತ ವಿಸ್ತರಣೆ

ಇನ್ನೂ ಮುಗಿಯದ ಭೂಸ್ವಾಧೀನ; ಹಲವು ಭೂಮಾಲಕರು ನ್ಯಾಯಾಲಯಕ್ಕೆ

Team Udayavani, Mar 4, 2020, 7:40 AM IST

MRPL

ಮಂಗಳೂರು: ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಪೂರ್ಣಗೊಳ್ಳದ್ದರಿಂದ ಎಂಆರ್‌ಪಿಎಲ್‌ನ ನಾಲ್ಕನೇ ಹಂತದ ವಿಸ್ತರಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ. ವಿಸ್ತರಣೆಗೆ ಒಟ್ಟು 1,050 ಎಕರೆ ಭೂಮಿ ಅಗತ್ಯವಿದ್ದು, ಭೂಸ್ವಾ ಧೀನ ಮಾಡಿಕೊಡುವಂತೆ ಎಂಆರ್‌ಪಿಎಲ್‌ ಸರಕಾರವನ್ನು ಕೋರಿತ್ತು. ಪೆರ್ಮುದೆ, ಕುತ್ತೆತ್ತೂರು, ತೆಂಕಎಕ್ಕಾರು, ಮೂಳೂರು ಮತ್ತು ಕಂದಾವರ ಗ್ರಾಮಗಳ 963 ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಕೆಐಎಡಿಬಿಯು ಕಾರ್ಯ ಆರಂಭಿಸಿತ್ತು. ಆದರೆ ಹಲವು ಭೂಮಾಲಕರು ನ್ಯಾಯಾಲಯದ ಮೊರೆ ಹೊಕ್ಕಿರುವುದರಿಂದ ಪ್ರಕ್ರಿಯೆಗೆ ಹಿನ್ನಡೆಯಾಗಿದೆ.

ಮಾರ್ಚ್‌ ಗುರಿ ಅಸಾಧ್ಯ
20 ಸಾವಿರ ಕೋ.ರೂ. ವೆಚ್ಚದಲ್ಲಿ ನಾಲ್ಕನೇ ಯೂನಿಟ್‌ ಆರಂಭಿಸಲು ಎಂಆರ್‌ಪಿಎಲ್‌ 2016ರಲ್ಲಿಯೇ
ನಿರ್ಧರಿಸಿತ್ತು. ಭೂಸ್ವಾಧೀನದ ಬಳಿಕ ಕೇಂದ್ರ ಸರಕಾರದ ಅನುಮೋದನೆ ಪಡೆದು ಹೊಸ ಯೂನಿಟ್‌ ಆರಂಭವಾಗಲಿದೆ. ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಹೊಸ ಯೂನಿಟ್‌ ಕಾರ್ಯಾರಂಭಿಸಲಿದ್ದು, ಇದರಲ್ಲಿ ಹೊಸ ಸೌಲಭ್ಯಗಳ ನಿರ್ಮಾಣ, ಶೇ. 33ರಷ್ಟು ಹಸಿರುವನ ಅಭಿವೃದ್ಧಿ ಮತ್ತು ಪುನರ್ವಸತಿ ಸೌಕರ್ಯ ಇರಲಿದೆ ಎಂದು ಪ್ರಕಟಿಸಲಾಗಿತ್ತು. ಆದರೆ 2020ರ ಮಾರ್ಚ್‌ ಒಳಗೆ ಉದ್ದೇಶಿತ ಗುರಿ ಸಾಧನೆ ಬಹುತೇಕ ಕಷ್ಟಸಾಧ್ಯ ಎಂದು ಮೂಲಗಳು ತಿಳಿಸಿವೆ.

ರೈತರ ವಿರೋಧ
ವಿಸ್ತರಣೆಗೆ ಅಗತ್ಯವಿರುವ ಭೂಮಿ ನೀಡಲು ರೈತರು ವ್ಯಾಪಕ ವಿರೋಧ ವ್ಯಕ್ತಪಡಿಸಿ ಹೋರಾಟ, ಪ್ರತಿಭಟನೆ ನಡೆಸಿದ್ದರು. ಕೆಲವರು ಭೂಮಿ ನೀಡಲು ಸಿದ್ಧವಾಗಿದ್ದರೆ ಇನ್ನು ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅಧಿಸೂಚಿತ 862 ಎಕರೆ ಖಾಸಗಿ ಭೂಮಿಯಲ್ಲಿ 463 ಎಕರೆ ಭೂಸ್ವಾಧೀನ ಪೂರ್ಣಗೊಂಡಿದ್ದು, ಇದರಲ್ಲಿ 246 ಎಕರೆ ಭೂಮಿಯವರಿಗೆ ಪರಿಹಾರ ವಿತರಿಸಲಾಗಿದೆ. ಉಳಿದವರಿಗೆ ಇನ್ನಷ್ಟೇ ಸಿಗಬೇಕಿದೆ. ಕೃಷಿ ಭೂಮಿ ಸಂರಕ್ಷಣ ಸಮಿತಿ ಕಾರ್ಯದರ್ಶಿ ಲಾರೆನ್ಸ್‌ ಡಿ’ಕುನಾನ್ಹ, ಅವರು “ಉದಯವಾಣಿ’ ಜತೆಗೆ ಮಾತನಾಡಿ, ವಿಷಕಾರಕ ಕಂಪೆನಿ ನಮ್ಮ ಕೃಷಿ ಭೂಮಿಗೆ ಬರಲು ಬಿಡಲಾರೆವು’ ಎಂದು ತಿಳಿಸಿದ್ದಾರೆ.

ಎಂಆರ್‌ಪಿಎಲ್‌ನ ನಾಲ್ಕನೇ ಹಂತದ ವಿಸ್ತರಣೆಗೆ 963 ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಪ್ರಕ್ರಿಯೆ ನಡೆಯುತ್ತಿದೆ. ಇಲ್ಲಿಯ ವರೆಗೆ 463 ಎಕರೆ ಭೂಮಿ ಸ್ವಾಧೀನವಾಗಿದೆ. ಪರಿಹಾರ ವಿತರಣೆ ನಡೆಯುತ್ತಿದೆ.
– ಗೋಕುಲ್‌ದಾಸ್‌ ನಾಯಕ್‌, ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ-ದ.ಕ.

– ದಿನೇಶ್‌ ಇರಾ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.