ಕೊಕ್ಕರೆ ರೋಗ ಹಾವಳಿ: ಅಪಾಯದಲ್ಲಿ ನಾಟಿ ಕೋಳಿ


Team Udayavani, Jul 22, 2018, 10:20 AM IST

22-july-3.jpg

ಆಲಂಕಾರು: ಕರಾವಳಿಯ ಅತ್ಯಂತ ಜನಪ್ರಿಯ ಆಹಾರವಾದ ನಾಟಿ ಕೋಳಿಗಳಿಗೆ ಗ್ರಾಣಿಕೆಟ್‌ ಎನ್ನುವ ವೈರಸ್‌ ನಿಂದ ಕೊಕ್ಕರೆ ರೋಗ ದಾಳಿಯಾಗಿದ್ದು, ನಾಟಿ ಕೋಳಿ ವಂಶವೇ ವಿನಾಶದ ಅಂಚಿನಲ್ಲಿದೆ. ಇದರಿಂದ ಮನುಷ್ಯರಿಗೆ ಯಾವುದೇ ತೊಂದರೆ ಇಲ್ಲದಿದ್ದರೂ ಕೋಳಿ ಸಾಕಾಣೆದಾರರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ರೋಗ ಮಳೆಗಾಲದ ಅಂತ್ಯಕ್ಕೆ ಹಬ್ಬುತ್ತಿತ್ತು. ಆದರೆ ಈ ವರ್ಷ ಮಳೆಗಾಲದ ಆರಂಭದಲ್ಲೇ ಕಾಣಿಸಿಕೊಂಡಿದೆ.

ರೋಗ ಹೇಗೆ ಹರಡುತ್ತದೆ?
ಕೋಳಿಗಳಿಗೆ ಕೊಕ್ಕರೆ ರೋಗವು ಕೊಕ್ಕರೆಗಳಿಂದಲೇ ಬರುತ್ತದೆ. ಕೊಕ್ಕರೆಗಳು ಬಯಲು ಪ್ರದೇಶಗಳಿಗೆ ನವೆಂಬರ್‌ ಮತ್ತು ಮೇ ತಿಂಗಳಲ್ಲಿ ಹೆಚ್ಚಾಗಿ ವಲಸೆ ಬರುವ ಕಾರಣ ರೋಗವು ಇದೇ ಅವಧಿಯಲ್ಲಿ ಹೆಚ್ಚಾಗಿರುತ್ತದೆ. ರೋಗಕ್ಕೆ ತುತ್ತಾದ ಕೋಳಿಯ ಒಂದು ಚಿಕ್ಕ ಗರಿಯಿಂದಲೂ ವೈರಸ್‌ ಹರಡುವುದರಿಂದ ಸತ್ತ ಕೋಳಿಯನ್ನು ಸಮರ್ಪಕವಾಗಿ ಸಂಸ್ಕಾರ ಮಾಡಬೇಕಾಗುತ್ತದೆ. ಇಲ್ಲವಾದರೆ ಗಾಳಿ‌, ನೀರಿನಿಂದ ರೋಗ ಹರಡುವುದು. ಈ ರೋಗದ ವೈರಸ್‌ ಸಾಮಾನ್ಯ ಬಿಸಿಗೆ ಸಾಯುವುದಿಲ್ಲ. ಆಳವಾದ ಗುಂಡಿಯಲ್ಲಿ ಸತ್ತ ಕೋಳಿಗಳನ್ನು ಹಾಕುವುದರ ಮೂಲಕ ರೋಗ ತಡೆಗಟ್ಟಬಹುದು.

ಸದ್ಯ ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ ಈ ರೋಗ ಕಾಣಿಸಿಕೊಂಡಿದೆ. ಕಡಬ -ಆಲಂಕಾರು ಭಾಗದಲ್ಲಿ ಹಾವಳಿ
ತೀವ್ರವಾಗಿದೆ. ಫಾರಂನ ಕೋಳಿಗಳಿಗೆ ನಿಯಮಿತವಾಗಿ ಔಷಧ ಕೊಡುವುದರಿಂದ ಈ ಬಾಧೆಯಿಂದ ಅವು ಪಾರಾಗಿವೆ.

ರೋಗ ಲಕ್ಷಣಗಳು
ಕೊಕ್ಕರೆ ರೋಗಕ್ಕೆ ತುತ್ತಾದ ಕೋಳಿ ಕೊಕ್ಕರೆಯ ರೀತಿ ಕೂಗಾಡುತ್ತದೆ. ತತ್‌ ಕ್ಷಣದಿಂದ ಆಹಾರ ಸೇವನೆಯನ್ನು ನಿಲ್ಲಿಸಿ ಹೆಚ್ಚಾಗಿ ನೀರನ್ನೇ ಸೇವಿಸುತ್ತದೆ. ತೂಕ ಇಳಿದು ನಿತ್ರಾಣಕ್ಕೊಳಗಾಗುತ್ತದೆ. ಬಿಳಿ ಬಣ್ಣದ ಮಲ ವಿಸರ್ಜಿಸುತ್ತದೆ. ನಿತ್ರಾಣಕ್ಕೊಳಗಾದ ಕೋಳಿ ನಡೆಯಲಾಗದೆ ರೆಕ್ಕೆ ಮತ್ತು ಕಾಲುಗಳನ್ನು ಅಗಲಿಸಿ ಕೊಕ್ಕರೆಯಂತೆ ಮುದುಡಿಕೊಳ್ಳುತ್ತದೆ. ಕೆಲವೊಮ್ಮೆ ಕೋಳಿಗಳ ತಲೆಯಲ್ಲಿ ಕಜ್ಜಿಯಾಗಿ ಬಾಯಲ್ಲಿ ರಕ್ತ ಬರುವ ಸಾಧ್ಯತೆಯೂ ಇರುತ್ತದೆ. ರೋಗಕ್ಕೆ ತುತ್ತಾದ ಕೋಳಿ ಒಂದೇ ವಾರದಲ್ಲಿ ಸಾಯುತ್ತದೆ.

ನಿಯಂತ್ರಣ ಹೇಗೆ ಸಾಧ್ಯ?
ಈ ರೋಗ ಒಂದು ಪ್ರದೇಶದಲ್ಲಿ ಕಾಣಿಸಿಕೊಂಡರೆ ಆ ವ್ಯಾಪ್ತಿಯ ಎಲ್ಲ ಕೋಳಿಗಳನ್ನು ನಾಶ ಮಾಡಿಬಿಡುತ್ತದೆ. ರೋಗ ಬಾರದಂತೆ ಮುಂಜಾಗ್ರತೆ ವಹಿಸಿಕೊಳ್ಳುವುದು ಉತ್ತಮ. ಪ್ರತೀ ಆರು ತಿಂಗಳಿಗೊಮ್ಮೆ ಕೋಳಿಗಳಿಗೆ ರೋಗ ನಿರೋಧಕ ಚುಚ್ಚು ಮದ್ದನ್ನು ನೀಡುವುದರಿಂದ ರೋಗ ಬಾರದಂತೆ ತಡೆಗಟ್ಟಬಹುದು. ಒಂದು ಕೋಳಿಯಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡರೆ ತತ್‌ಕ್ಷಣ ಆ ಕೋಳಿಯನ್ನು ಪ್ರತ್ಯೇಕಿಸಿ ಉಳಿದ ಕೋಳಿಗಳಿಗೆ ರೋಗ ನಿರೋಧಕ ಚುಚ್ಚುಮದ್ದು ನೀಡಬೇಕು. ಒಮ್ಮೆ ರೋಗಕ್ಕೆ ತುತ್ತಾದ ಕೋಳಿಗೆ ಯಾವುದೇ ಔಷಧ ಫಲಿಸುವುದಿಲ್ಲ. ಉತ್ತಮ ಜಾತಿಯ, ಸೇಲಂ, ಈರೋಡ್‌ ಅಥವಾ ಅಂಕದ ಕೋಳಿಗಳ ಸಾಕಾಣೆದಾರರು ಆರು ತಿಂಗಳಿಗೊಮ್ಮೆಯಾದರೂ ರೋಗ ನಿರೋಧಕ ಚುಚ್ಚುಮದ್ದು ನೀಡುತ್ತಾ ಬಂದಲ್ಲಿ ಯಾವುದೇ ರೋಗಗಳು ಬಾರದಂತೆ ತಡೆಗಟ್ಟಬಹುದು.

ಮುಂಜಾಗ್ರತೆಯೇ ಔಷಧ
ಮಳೆಗಾಲದಲ್ಲಿ ಕೊಕ್ಕರೆ ರೋಗ ಕಾಣಿಸಿಕೊಳ್ಳುತ್ತದೆ. ರೋಗ ಕಾಣಿಸಿಕೊಂಡ ಬಳಿಕ ಯಾವ ಔಷಧವೂ ಫಲಪ್ರದವಲ್ಲ.
ಕೋಳಿಗಳಿಗೆ ಆರು ತಿಂಗಳಿಗೊಮ್ಮೆ ರೋಗ ನಿರೋಧಕ ಚುಚ್ಚು ಮದ್ದು ನೀಡುವುದರಿಂದ ಶಾಶ್ವತವಾಗಿ ರೋಗ ಬಾರದಂತೆ ಕ್ರಮ ಕೈಗೊಳ್ಳಬಹುದು. ಪ್ರತೀ ಶನಿವಾರ ಕಡಬ ಪಶು ಆಸ್ಪತ್ರೆಯಲ್ಲಿ ಉಚಿತ ಚುಚ್ಚು ಮದ್ದು ನೀಡಲಾಗುವುದು. ರೋಗ ಬಾಧಿತ ಮನೆಗಳಿಗೆ ತೆರಳಿ ಉಚಿತ ವೈದ್ಯಕೀಯ ಸೇವೆ ನೀಡಲಾಗುವುದು.
– ಡಾ| ಧರ್ಮಪಾಲ್‌,
ಕಡಬ ಪಶು ವೈದ್ಯಾಧಿಕಾರಿ

ಸದಾನಂದ ಆಲಂಕಾರು

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.