ಗುರುವನ್ನು ಮರೆಯದ ಸಂಸದ

ಪಾಲ್ತಾಡಿ ಆರ್‌ಎಸ್‌ಎಸ್‌ ಶಾಖೆಯ ಸ್ವಯಂ ಸೇವಕ

Team Udayavani, May 24, 2019, 6:10 AM IST

guruvannu

ಸವಣೂರು: ಮೂರನೇ ಬಾರಿಗೆ ಆಯ್ಕೆಯಾಗಿರುವ ನಳಿನ್‌ ಕುಮಾರ್‌ ಕಟೀಲು ಪ್ರಾಥಮಿಕ ಶಿಕ್ಷಣ ವನ್ನು ಹುಟ್ಟೂರು ಪಾಲ್ತಾಡಿಯ ಕುಂಜಾಡಿ ಸಮೀಪದ ಮುಕ್ಕೂರು ಹಿ.ಪ್ರಾ. ಶಾಲೆಯಲ್ಲಿ ಪೂರೈಸಿದ್ದರು. ಅವರ ತಂದೆ ದಿ| ನಿರಂಜನ ಶೆಟ್ಟಿ, ತಾಯಿ ಸುಶೀಲಾವತಿ.

2ನೇ ತರಗತಿಯಲ್ಲಿ ಕಲಿಯುತ್ತಿದ್ದ ಬಾಲಕ ನಳಿನ್‌ ಅವರನ್ನು ಪಾಲ್ತಾಡಿಯ ಮಂಜುನಾಥನಗರದಲ್ಲಿ ನಡೆಯುತ್ತಿದ್ದ ಆರ್‌ಎಸ್‌ಎಸ್‌ನ ನಿತ್ಯ ಶಾಖೆಗೆ ಕರೆತಂದವರು ಸಂಘದ ಹಿರಿಯ ಕಾರ್ಯಕರ್ತ ಬಿ.ಕೆ. ರಮೇಶ್‌ ಅವರು.

ಬಿ.ಕೆ. ರಮೇಶ್‌ ಅವರು ಹೇಳುವಂತೆ ಬಾಲಕ ನಳಿನ್‌ ಪ್ರತಿದಿನ ತಪ್ಪದೇ ಶಾಖೆಗೆ ಹಾಜರಾ ಗುತ್ತಿ ದ್ದರಲ್ಲದೆ, ಸಂಘದ ವಿಚಾರ ಗಳಿಗೆ ಬಹುಬೇಗನೇ ಆಕರ್ಷಿತ ರಾಗಿ ಮುಂದೆ ಆರ್‌ಎಸ್‌ಎಸ್‌ನ ಪ್ರಚಾರಕರಾಗಿ ಕೆಲಸ ಮಾಡಿದರು.

ರಾಜಕೀಯವಾಗಿ ಎತ್ತರಕ್ಕೆ ಏರಿದರೂ ಸಂಘದ ಸಂಸ್ಕಾರವನ್ನೂ ಇಂದಿಗೂ ಬಿಟ್ಟಿಲ್ಲ. ಇದು ಸಂತಸದ ವಿಚಾರ ಎನ್ನುತ್ತಾರೆ ಬಿ.ಕೆ. ರಮೇಶ್‌.
ಬಿ.ಕೆ. ರಮೇಶ್‌ ಅವರನ್ನು ಇಂದಿಗೂ ಗುರುಗಳೆಂದು ಗೌರವಿಸುವ ನಳಿನ್‌ ಕುಮಾರ್‌ ಊರಿಗೆ ಬಂದಾಗ ಅವರನ್ನು ಮಾತಾಡಿಸದೆ ಹೋಗುವುದು ಅಪರೂಪ. ನಳಿನ್‌ ಕುಮಾರ್‌ ತನ್ನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಬಲ್ಲರು ಎಂದು ಹೆಮ್ಮೆಯಿಂದ ಹೇಳುತ್ತಾರೆ ಬಿ.ಕೆ. ರಮೇಶ್‌.

ಗುರುವಿಗೆ ನಮನ
ತನ್ನ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದ ಬೆಳವಣಿಗೆಯ ಮೂಲ ಬೇರು ಆಗಿರುವ ಗುರು ರಮೇಶ್‌ ಅವರನ್ನು ಗೌರವದಿಂದಲೇ ಕಾಣುವ ನಳಿನ್‌ ಅನುದಾನ ಬಳಕೆಯಲ್ಲಿ ನಂ. 1 ಸಂಸದನಾಗಿ ಹೊರಹೊಮ್ಮಿದಾಗ ಮಂಗಳೂರಿನಲ್ಲಿ ನಡೆದ ಬೃಹತ್‌ ಕಾರ್ಯಕ್ರಮದಲ್ಲಿ ಅವರನ್ನು ಗೌರವಿಸಿದ್ದರು.

3 ಸಲವೂ ಚುನಾವಣೆಯ ಪ್ರಚಾರ ಆರಂಭಿಸುವಾಗ ರಮೇಶ್‌ ಅವರ ಕೈಯಿಂದಲೇ ಪ್ರಚಾರ ಸಭೆಗೆ ಚಾಲನೆ ನೀಡಿದ್ದಾರೆ. ನಳಿನ್‌ ಪ್ರತೀ ವರ್ಷವೂ ತನ್ನೂರಿನ ಸಿದ್ಧಿವಿನಾಯಕ ಸೇವಾ ಸಂಘದ ವತಿಯಿಂದ ನಡೆಯುವ ಸಾರ್ವಜನಿಕ ಗಣೇಶೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.

– ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.