ಆರೋಗ್ಯ ಸಹಾಯಕಿ ನೇಮಕಕ್ಕೆ ಆಗ್ರಹ, ನಿರ್ಣಯ


Team Udayavani, Jul 11, 2017, 2:50 AM IST

0707nld.jpg

ನೆಲ್ಯಾಡಿ : ಗೋಳಿತ್ತೂಟ್ಟು ಗ್ರಾಮಕ್ಕೆ ಹಿರಿಯ ಆರೋಗ್ಯ ಸಹಾಯಕಿಯನ್ನು ನೇಮಕಗೊಳಿಸುವಂತೆ ಗೋಳಿತ್ತೂಟ್ಟು ಗ್ರಾ.ಪಂ. ಮಹಿಳಾ ಗ್ರಾಮಸಭೆಯಲ್ಲಿ ಒತ್ತಾಯಿಸಲಾಗಿದ್ದು  ಈ ಬಗ್ಗೆ  ಸಂಬಂಧಪಟ್ಟ ಇಲಾಖೆಗೆ ಮನವಿ ನೀಡಲು ನಿರ್ಣಯ ಕೈಗೊಳ್ಳಲಾಯಿತು.

ಸಭೆ ಗೋಳಿತ್ತೂಟ್ಟು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ.ಅಧ್ಯಕ್ಷೆ ಶಾಲಿನಿ ಶೇಖರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. 

ಸಭೆಯಲ್ಲಿ ಮಾತನಾಡಿದ ಆಶಾ ಕಾರ್ಯಕರ್ತೆ ಜಯಮಾಲಾ, ಗೋಳಿತ್ತೂಟ್ಟು ಗ್ರಾ.ಪಂ. ವ್ಯಾಪ್ತಿಗೆ ಸಂಬಂಧಪಟ್ಟಂತೆ ಆರೋಗ್ಯ ಕಾರ್ಯಕರ್ತೆ ಇಲ್ಲ. ಗೋಳಿತ್ತೂಟ್ಟು ಗ್ರಾ.ಪಂ.ವ್ಯಾಪ್ತಿಗೆ ಆರೋಗ್ಯ ಕಾರ್ಯಕರ್ತೆಯೊಬ್ಬರ ನೇಮಕ ಮಾಡಬೇಕೆಂದು ಹೇಳಿದರು. ಇದಕ್ಕೆ ಪೂರಕವಾಗಿ ಮಾತನಾಡಿದ ಅಧ್ಯಕ್ಷೆ ಶಾಲಿನಿ, ಉಪಾಧ್ಯಕ್ಷ ಪ್ರಸಾದ್‌ ಆರ್‌.ಕೆ. ಅವರು, ಗೋಳಿತ್ತೂಟ್ಟು ಗ್ರಾ.ಪಂ.ಗೆ ಸಂಬಂಧಪಟ್ಟ ಆರೋಗ್ಯ ಸಹಾಯಕಿ ವರ್ಗಾವಣೆಗೊಂಡು ಎರಡು ವರ್ಷಗಳು ಕಳೆದಿವೆ. ನೆಲ್ಯಾಡಿ ಗ್ರಾ.ಪಂ.ವ್ಯಾಪ್ತಿಗೆ ಒಳಪಟ್ಟ ಆರೋಗ್ಯ ಕಾರ್ಯಕರ್ತೆಯೇ ಗೋಳಿತ್ತೂಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲೂ ಪ್ರಭಾರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಆಶಾ ಕಾರ್ಯಕರ್ತೆಯರ ಮೇಲೆ ಹೊರೆ ಜಾಸ್ತಿಯಾಗಿದೆ. ಗ್ರಾಮಸಭೆ, ಸಾಮಾನ್ಯ ಸಭೆಗಳಲ್ಲೂ ನಿರ್ಣಯ ಕೈಗೊಂಡು ಆರೋಗ್ಯ ಸಹಾಯಕಿ ನೇಮಕಗೊಳಿಸುವಂತೆ ಕೇಳಿಕೊಳ್ಳಲಾಗಿದೆ. ಆದರೆ ಇನ್ನೂ ನೇಮಕವಾಗಿಲ್ಲ ಎಂದರು. 

ನಿರ್ಣಯ 
ಆಶಾ ಕಾರ್ಯಕರ್ತೆ ತುಲಾವತಿ ಮಾತನಾಡಿ, ಈಗಿರುವ ಆರೋಗ್ಯ ಕಾರ್ಯಕರ್ತೆಗೆ ಗೋಳಿತ್ತೂಟ್ಟು, ಆಲಂತಾಯ,  
ಕೊಣಾಲು, ನೆಲ್ಯಾಡಿ ಗ್ರಾಮಗಳಿವೆ. ಇದರಿಂದ ಗ್ರಾಮಸ್ಥರಿಗೆ  ತೊಂದರೆಯಾಗುತ್ತಿದೆ  ಎಂದರು. ಬಳಿಕ ಗೋಳಿತ್ತೂಟ್ಟು ಗ್ರಾ.ಪಂ.ವ್ಯಾಪ್ತಿಗೆ ಸಂಬಂಧಪಟ್ಟಂತೆ ಆರೋಗ್ಯ ಸಹಾಯಕಿಯೊಬ್ಬರನ್ನು ತುರ್ತಾಗಿ ನೇಮಕಗೊಳಿಸುವಂತೆ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಸ್ವತ್ಛತೆಗೆ ಆದ್ಯತೆ 
ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ.ಅಧ್ಯಕ್ಷೆ ಶಾಲಿನಿ ಶೇಖರ ಪೂಜಾರಿ ಮಾತನಾಡಿ, ಗ್ರಾಮಸ್ಥರು ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ಗ್ರಾ.ಪಂ.ಕಚೇರಿಗೆ ಬಂದು ವಿಚಾರಿಸಿ ಬಗೆಹರಿಸಿಕೊಳ್ಳಬಹುದು. ಪ್ರತಿಯೊಬ್ಬರೂ ತಮ್ಮ ಮನೆಯ ಪರಿಸರದಲ್ಲಿ ಸ್ವತ್ಛತೆಗೆ ಆದ್ಯತೆ ನೀಡಬೇಕು.  ಇದನ್ನು ಕಾಪಾಡಿಕೊಂಡು ಬಂದಲ್ಲಿ ಮಲೇರಿಯಾ, ಡೆಂಗ್ಯೂ ಸೇರಿದಂತೆ ಯಾವುದೇ ರೋಗಗಳೂ ನಮಗೆ ಬರುವುದಿಲ್ಲ ಎಂದರು. ನರೇಗಾ ಯೋಜನೆಯಡಿ ಗೋಳಿತ್ತೂಟ್ಟಿನಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣಗೊಳ್ಳಲಿದೆ ಎಂದು ಅವರು ಹೇಳಿದರು. ಉಪಾಧ್ಯಕ್ಷ ಪ್ರಸಾದ್‌ ಕೆ.ಪಿ.ಮಾತನಾಡಿ, ಮಹಿಳೆಯರಿಗೆ ಸರಕಾರದಿಂದ ಹಲವು ಸವಲತ್ತುಗಳು ಸಿಗುತ್ತಿವೆ. ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದರು. 

ಅಂಗನವಾಡಿ ಮೇಲ್ವಿಚಾರಕಿ ಉಮಾವತಿ ಅವರು ಮಹಿಳಾ ಗ್ರಾಮಸಭೆಯ ಕುರಿತಂತೆ ಮಾಹಿತಿ ನೀಡಿದರು. ಪಿಡಿಒ ನಯನಕುಮಾರಿ ಉದ್ಯೋಗಖಾತ್ರಿ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಬಿಎಲ್‌ಒ ಪ್ರಮೀಳಾ ಮತದಾರರ ಚೀಟಿಯಲ್ಲಿ ಹೆಸರು ನೋಂದಾವಣೆ ಕುರಿತಂತೆ ಮಾಹಿತಿ ನೀಡಿದರು.

ಗ್ರಾ.ಪಂ.ಸದಸ್ಯರಾದ ಗಾಯತ್ರಿರಾಜು, ಭವ್ಯಕುಮೇರು, ರೇಖಾ ಪಿ.ರೈ., ತುಳಸಿ, ವಾಣಿಶೆಟ್ಟಿ, ಪುರುಷೋತ್ತಮ, ಮುತ್ತಪ್ಪ ಗೌಡ, ಸುನೀತಾ ಅವರುಉಪಸ್ಥಿತರಿದ್ದರು. ಸಿಬಂದಿ ಬಾಬು ನಾಯ್ಕ ವಂದಿಸಿದರು. ಸಿಬಂದಿಗಳಾದ ಪುಷ್ಪಾ, ದಿನೇಶ್‌, ಯಶವಂತ ಅವರು ಸಹಕರಿಸಿದರು.

ಸ್ವತ್ಛತೆ, ದುರಸ್ತಿಗೆ ಬೇಡಿಕೆ
ಗೋಳಿತ್ತೂಟ್ಟು  ಜನತಾ ಕಾಲನಿ ವ್ಯಾಪ್ತಿಯಲ್ಲಿ ಆಡುಗಳನ್ನು ಬೇಕಾಬಿಟ್ಟಿ ಬಿಡಲಾಗುತ್ತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ಇಲ್ಲಿ  ಸ್ವತ್ಛತೆಗೆ ಆದ್ಯತೆ ಕೊಡುವಂತೆ ಹಾಗೂ ನೀರಿನ ಸಮಸ್ಯೆ ಪರಿಹರಿಸುವಂತೆ ಕಾಲನಿ ನಿವಾಸಿಗಳು ಆಗ್ರಹಿಸಿದರು. ಎಣ್ಣೆತ್ತೋಡಿಯಲ್ಲಿ ರಸ್ತೆ ದುರಸ್ತಿ, ಪೆರ್ಲ ದೇವಸ್ಥಾನದ ಸಮೀಪ ಕಾಲುದಾರಿ ದುರಸ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮಹಿಳೆಯರು ಸಭೆಯಲ್ಲಿ ಮಂಡಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.