ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಲು ತೀರ್ಮಾನ: ಶಾಸಕ ಬಾವಾ
Team Udayavani, Mar 14, 2017, 4:18 PM IST
ಮುತ್ತೂರು: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಳವೂರು ಎಂಬಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ 50 ಲಕ್ಷ ರೂಪಾಯಿ ಅನುದಾನ ನಿರ್ಮಾಣವಾಗುವ ಕಿಂಡಿ ಅಣೆ ಕಟ್ಟಿಗೆ ಶಾಸಕ ಬಿ.ಎ. ಮೊದಿನ್ ಬಾವಾ ಶಿಲಾನ್ಯಾಸ ನೆರವೇರಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈಗಾಗಲೇ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಾಂತರ ಭಾಗದಲ್ಲಿ ಹಲವೆಡೆ ಕಿಂಡಿ ಅಣೆಕಟ್ಟು ನಿರ್ಮಿಸಲಾಗುತ್ತಿದೆ. ಇದರಿಂದ ಬಹು ದಿನಗಳ ಸಮಸ್ಯೆ ಬಗೆಹರಿಯಲಿದೆ. ಈ ಭಾಗದಲ್ಲಿ ಕೃಷಿ, ತೋಟಗಾರಿಕೆ ಹೆಚ್ಚಿರುವುದರಿಂದ ಕೃಷಿಗೂ ನೀರಾವರಿ ಯೋಜನೆ ಕೈಗೊಳ್ಳುವಂತಾಗಲು ಸಣ್ಣ ನೀರಾವರಿ ಇಲಾಖೆಯಿಂದ ಹೆಚ್ಚಿನ ಅನುದಾನ ಬಿಡುಗಡೆಗೆ ಶ್ರಮಿಸುವುದಾಗಿ ಅವರು ಹೇಳಿದರು.
ಹಿರಿಯ ಕಾಂಗ್ರೆಸ್ ಮುಖಂಡರಾದ ಕೋಚಣ್ಣ, ಸದಾನಂದ್, ಗಣೇಶ್ ಆಳ್ವ, ಜಿ.ಸನಿಲ್, ರವಿ, ರಾಮಚಂದ್ರ ಸಾಲ್ಯಾನ್, ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗಮ್ಮ, ಗ್ರಾಮ ಪಂಚಾಯತ್ ಸದಸ್ಯರು, ಹರಿಯಪ್ಪ, ಎಂಜಿನಿಯರ್ ಆನಂದ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು