ಬಜತ್ತೂರು: ಈ ಮಳೆಗಾಲದಲ್ಲೂ ದಿಗ್ಬಂಧನ?

ಹೆದ್ದಾರಿ ಚರಂಡಿ ತಡೆಗೋಡೆ ಕಿತ್ತುಹೋಗಿ ದ್ವೀಪದಂತಾಗಿದ್ದ ಮನೆ

Team Udayavani, May 7, 2019, 5:50 AM IST

10

ಉಪ್ಪಿನಂಗಡಿ: ಚತುಷ್ಪಥ ರಸ್ತೆ ಕಾಮಗಾರಿಯಿಂದ ಮಳೆಗಾಲದಲ್ಲಿ ದಿಗ್ಬಂಧನಕ್ಕೆ ಒಳಗಾಗಿದ್ದ ಬಜತ್ತೂರು ಗ್ರಾಮದ ನೀರಕಟ್ಟೆ ನಿವಾಸಿ ತಿಮ್ಮಪ್ಪ ಗೌಡ ಅವರ ಮನೆಯವರಿಗೆ ಇನ್ನೂ ಮುಕ್ತಿ ಸಿಕ್ಕಿಲ್ಲ. ಹತ್ತು ತಿಂಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ರಸ್ತೆ ವಿಸ್ತರಣೆ ವೇಳೆ ಬಾವಿ, ಕೃಷಿ, ಮರಗಳು ವಿಸ್ತರಣೆ ಕಾಮಗಾರಿ ಪಾಲಾಗಿದ್ದು, ಒಟ್ಟು ಒಂದು ಲಕ್ಷ ರೂ. ಪರಿಹಾರ ಒದಗಿತ್ತು. ಇದೇ ವೇಳೆ ಕೇವಲ 10 ಸೆಂಟ್ಸ್‌ ಜಾಗದಲ್ಲಿ ವಾಸದ ಮನೆ ಮಾತ್ರ ಉಳಿದುಕೊಂಡಿತ್ತು.

ಆವರಿಸಿತ್ತು ಮಳೆ ನೀರು
ಕಳೆದ ಮಳೆಗಾಲದಲ್ಲಿ ಹೆದ್ದಾರಿ ಚತುಷ್ಪಥ ಕಾಮಗಾರಿಯಲ್ಲಿ ಇದೇ ಮನೆ ಸಮೀಪ ಚರಂಡಿ ನಿರ್ಮಿಸಲು ಲಕ್ಷಾಂತರ ರೂ. ವೆಚ್ಚದಲ್ಲಿ ತಡೆಗೋಡೆ ರಚಿಸಲಾಗಿತ್ತು. ಆದರೆ ಮಲೆನಾಡಿನ ಮಳೆಯ ಪ್ರಮಾಣದ ಅಂದಾಜೇ ಇಲ್ಲದೆ ನಿರ್ಮಿಸಿದ ತಡೆಗೋಡೆ ದಿಢೀರ್‌ ಮಳೆಗೆ ಕೊಚ್ಚಿ ಹೋಗಿ ಮಳೆನೀರು ಇದೇ ಮನೆ ಸಮೀಪ ಆವರಿಸಿತ್ತು. ಮಳೆಗಾಲ ಮುಗಿಯುವ ತನಕವೂ ಈ ಮನೆಯ ಜನರು ಮನೆಯಿಂದ ಹೊರಬರಲು ಅಸಾಧ್ಯವಾದ ಸ್ಥಿತಿ ಇತ್ತು. ಇದನ್ನು ಅರಿತ ತಿಮ್ಮಪ್ಪ ಗೌಡರ ಪುತ್ರ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ ಬೆನ್ನಲ್ಲೇ ಹೆದ್ದಾರಿ ಇಲಾಖೆಯೊಂದಿಗೆ ಮಾತುಕತೆ ಮೂಲಕ ತತ್‌ಕ್ಷಣ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ಬಂದಿತ್ತು.

ಇತ್ತ ಈ ಸಲದ ಮಳೆಗಾಲ ಆರಂಭವಾಗಲು ಕೇವಲ ಒಂದು ತಿಂಗಳು ಬಾಕಿ ಉಳಿದಿದ್ದರೂ ಆ ಮನೆಯವರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಪ್ರಯತ್ನ ನಡೆದೇ ಇಲ್ಲ. ಬದಲಿ ವ್ಯವಸ್ಥೆ ಆಗದಿದ್ದರೆ ಈ ಬಾರಿ ಮಳೆಗಾಲವನ್ನು ಕಳೆಯುವುದೇ ಹೇಗೆ ಎಂಬ ಚಿಂತೆ ಮನೆಯವರನ್ನು ಕಾಡುತ್ತಿದೆ.

ಮೂರು ಮನೆಗಳಿಗೆ ಅಪಾಯ
ಚರಂಡಿ ನಿರ್ಮಾಣಕ್ಕಾಗಿ ರಚಿಸಿದ ತಡೆಗೋಡೆಯನ್ನು ಸಂಪೂರ್ಣ ನೆಲಸಮ ಮಾಡಿದ್ದು, ಹೊಸದಾಗಿ ತಡೆಗೋಡೆ ರಚಿಸಬೇಕಷ್ಟೇ. ಆದರೆ, ಭಾರೀ ಗಾತ್ರದ ಚರಂಡಿ ಬಾಯಿ ತೆರೆದು ನಿಂತಿದೆ. ಈ ಬಾರಿ ಮಳೆ ಆರಂಭಗೊಂಡರೆ ತಿಮ್ಮಪ್ಪ ಗೌಡರ ಮನೆ ಸಹಿತ ಅಕ್ಕ-ಪಕ್ಕದ ಮೂರು ಮನೆಗಳು ಮುಳುಗಡೆಯಾಗುವುದರಲ್ಲಿ ಸಂಶಯವಿಲ್ಲ. ಹೀಗಾಗಿ, ಹೆದ್ದಾರಿ ಇಲಾಖೆ ತತ್‌ಕ್ಷಣ ಎಚ್ಚೆತ್ತು ತುರ್ತು ಪರಿಹಾರ ಕಾಮಗಾರಿ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

 ಗುತ್ತಿಗೆದಾರರೇ ಹೊಣೆ
ಕಳೆದ ವರ್ಷ ಮಳೆ ಪ್ರಮಾಣದಿಂದ ತಿಮ್ಮಪ್ಪ ಗೌಡರ ಮನೆ ಮಂದಿ ದಿಗ್ಬಂಧನಕ್ಕೆ ಒಳಗಾಗಿದ್ದರು. ಇದು ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ರಸ್ತೆಯ ಕಾಮಗಾರಿ ವಹಿಸಿಕೊಂಡಿದ್ದ ಗುತ್ತಿಗೆದಾರರಿಗೂ ತಿಳಿದಿದೆ. ಮನೆಯ ಮಾಲಕರಿಗೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದರೂ ಭರವಸೆ ಮಾತ್ರ ಈಡೇರಿಲ್ಲ. ಒಂದೊಮ್ಮೆ ಮಳೆಯಿಂದಾಗಿ ಮನೆ ಅಥವಾ ಜನರಿಗೆ ಹಾನಿ, ಅಪಾಯಗಳು ಸಂಭವಿಸಿದರೆ ಗುತ್ತಿಗೆದಾರರನ್ನೇ ಹೊಣೆ ಮಾಡುವ ಅನಿವಾರ್ಯತೆ ಇದೆ.
– ಸಂತೋಷ್‌ ಕುಮಾರ್‌, ಬಜತ್ತೂರು ಗ್ರಾ.ಪಂ. ಅಧ್ಯಕ್ಷ

ಟಾಪ್ ನ್ಯೂಸ್

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.