ಪಠ್ಯದಿಂದ ತೆಗೆದಾಕ್ಷಣ ಟಿಪ್ಪು ಇತಿಹಾಸ ಬದಲಾಗದು: ಯು.ಟಿ. ಖಾದರ್
Team Udayavani, Oct 31, 2019, 4:54 AM IST
ಮಂಗಳೂರು: ನೆರೆಯಿಂದ ತತ್ತರಿಸಿದವರಿಗೆ ಸೂಕ್ತ ಪರಿಹಾರ ನೀಡಲು ಸಾಧ್ಯವಾಗದ ಬಿಜೆಪಿ ಸರಕಾರವು ವೈಫಲ್ಯ ಮರೆಮಾಚಲು ಪಠ್ಯ ಪುಸ್ತಕದಿಂದ ಟಿಪ್ಪು ಪಾಠ ಹಿಂದೆಗೆತದ ವಿಚಾರವನ್ನು ಮುನ್ನೆಲೆಗೆ ತಂದಿದೆ. ಪಠ್ಯ ದಿಂದ ತೆಗೆದಾಕ್ಷಣ ಟಿಪ್ಪು ಸುಲ್ತಾನನ ಇತಿಹಾಸ ಬದಲಾಗದು ಎಂದು ಶಾಸಕ ಯು.ಟಿ. ಖಾದರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ಟಿಪ್ಪು ಇತಿಹಾಸ ಕರ್ನಾಟಕಕ್ಕೆ ಮಾತ್ರ ಸೀಮಿತವಲ್ಲ, ದೇಶ ಮತ್ತು ಜಗತ್ತಿನ ಹಲವೆಡೆ ಇದೆ. ಕರ್ನಾಟಕದ ಪಠ್ಯದಿಂದ ತೆಗೆದರೆ ಟಿಪ್ಪುವಿನ ಆಡಳಿತವನ್ನು ಅರಿತುಕೊಳ್ಳು ವುದರಿಂದ ಇಲ್ಲಿನ ಮಕ್ಕಳು ವಂಚಿತರಾಗಬಹುದು; ಆತನ ಆಡಳಿತ ಮತ್ತು ಹೋರಾಟವನ್ನು ಅಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಬಿಜೆಪಿಯಿಂದ ನೇಮಿಸಲ್ಪಟ್ಟ ರಾಷ್ಟ್ರಪತಿಗಳೇ ಟಿಪ್ಪುವಿನ ಗುಣಗಾನ ಮಾಡಿದ್ದಾರೆ. ನಿತ್ಯ ಸಂಜೆ ಕೊಲ್ಲೂರು ದೇವಸ್ಥಾನದಲ್ಲಿ ಟಿಪ್ಪು ಸಲಾಂ ಎಂಬ ಪೂಜೆ ಇದೆ. ಶೃಂಗೇರಿ ಮಠಕ್ಕೆ ಟಿಪ್ಪು ಕೊಟ್ಟ ಕೊಡುಗೆ ಶಾಶ್ವತವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ