ವೇಣೂರು ನವೀಕೃತ ಕ್ರಿಸ್ತರಾಜ ದೇವಾಲಯದ ಉದ್ಘಾಟನೆ 


Team Udayavani, Nov 25, 2017, 2:53 PM IST

25-Nov-13.jpg

ವೇಣೂರು: ನವೀಕರಣಗೊಂಡ ವೇಣೂರು ಕ್ರಿಸ್ತರಾಜ ದೇವಾಲಯದ ಉದ್ಘಾಟನೆ, ಆಶೀರ್ವಚನ , ಅಭಿನಂದನ ಕಾರ್ಯಕ್ರಮವು ಶುಕ್ರವಾರ ವೇಣೂರು ಚರ್ಚ್‌ ಸಭಾಂಗಣದಲ್ಲಿ ನಡೆಯಿತು.

ನವೀಕರಣಗೊಂಡ ದೇವಾಲಯದ ಉದ್ಘಾಟನೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ| ಡಾ| ಎಲೋಸಿಯಸ್‌ ಪೌಲ್‌ ಡಿ’ಸೋಜ ನೆರವೇರಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ವೇಣೂರು ಚರ್ಚ್‌ನ ಧರ್ಮಗುರುಗಳ ಕಾರ್ಯಸಾಧನೆ, ಚರ್ಚ್‌ ಪಾಲನಾ ಪರಿಷತ್‌ ಪದಾಧಿಕಾರಿಗಳ ಶ್ರಮ, ದಾನಿಗಳ ಸೇವೆಯನ್ನು ಶ್ಲಾಘಿಸಿದರು.

ಬೆಳ್ತಂಗಡಿ ವಲಯದ ಧರ್ಮಾಧ್ಯಕ್ಷ ಡಾ| ಲಾರೆನ್ಸ್‌ ಮುಕ್ಕುಯಿ ಆಗಮಿಸಿದ್ದರು. ಬೆಳ್ತಂಗಡಿ ವಲಯದ ಪ್ರಧಾನ ಧರ್ಮಗುರು ವಂ| ಬೊನ್‌ವೆಂಚರ್‌ ನಜ್ರತ್‌ ಮುಖ್ಯ ಅತಿಥಿಗಳಾಗಿ ಸಂದೇಶ ನೀಡಿದರು. ಮೂಲ್ಕಿ-ಮೂಡಬಿದಿರೆ ಕ್ಷೇತ್ರದ ಶಾಸಕ ಕೆ. ಅಭಯಚಂದ್ರ ಜೈನ್‌, ನಾರಾವಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್‌, ವೇಣೂರು ತಾ.ಪಂ. ಸದಸ್ಯ ಕೆ. ವಿಜಯ ಗೌಡ ಮಾತನಾಡಿದರು. ಜುಲಿಯಾನ ಪಿರೇರಾ, ವೇಣೂರು ಗ್ರಾ.ಪಂ. ಅಧ್ಯಕ್ಷೆ ಮೋಹಿನಿ ವಿ. ಶೆಟ್ಟಿ, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭಾಸ್ಕರ ಬಲ್ಯಾಯ, ವೇಣೂರು ಶ್ರೀ ದಿಗಂಬರ ಜೈನತೀರ್ಥ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಎಂ. ವಿಜಯರಾಜ ಅಧಿಕಾರಿ, ವೇಣೂರು ಚರ್ಚ್‌ ಪಾಲನ ಪರಿಷತ್‌ ಉಪಾಧ್ಯಕ್ಷ ರೊನಾಲ್ಡ್‌ ಡಿ’ಸೋಜ, ಕಾರ್ಯದರ್ಶಿ ಸ್ಟೀವನ್‌ ಡಿಕುನ್ಹಾ ಉಪಸ್ಥಿತರಿದ್ದರು. ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಿಲಿಯಂ ಮಿನೇಜಸ್‌ ಉಪಸ್ಥಿತರಿದ್ದರು.

ಸಮ್ಮಾನ
ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್‌ ಡಾ| ಎಲೋಸಿಯಸ್‌ ಪೌಲ್‌ ಡಿ’ಸೋಜಾ , ಬೆಳ್ತಂಗಡಿ ವಲಯದ ಪ್ರಧಾನ ಧರ್ಮಗುರು ವಂ| ಬೋರ್‌ ವೆಂಚರ್‌ ನಜರತ್‌, ವೇಣೂರು ಚರ್ಚ್‌ನ ಧರ್ಮಗುರು ವಂ| ಆ್ಯಂಟನಿ ವಿ. ಲೂವಿಸ್‌, ಚರ್ಚ್‌ ಪಾಲನ ಪರಿಷತ್‌ ಉಪಾಧ್ಯಕ್ಷ ರೊನಾಲ್ಡ್‌ ಡಿ’ಸೊಜಾ, ಕಾರ್ಯದರ್ಶಿ ಸ್ಟೀವನ್‌ ಡಿಕುನ್ಹಾ, ಎಂಜಿನಿಯರ್‌ ಲಾರೆನ್ಸ್‌ ಕುಟಿನ್ಹೊ ಮಂಗಳೂರು, ಮಡಂತ್ಯಾರು ಕೊರೆಯಾ ಕನ್‌ಸ್ಟ್ರಕ್ಷನ್‌ನ ಮ್ಯಾಕ್ಸಿಂ ಕೊರೆಯಾ, ವೇಣೂರು ಚರ್ಚ್‌ನಲ್ಲಿ ಸೇವೆ ನೀಡಿದ ಧರ್ಮಗುರುಗಳನ್ನು, ಮಾಜಿ, ಹಾಲಿ ಚರ್ಚ್‌ ಪಾಲನ ಪರಿಷತ್‌ ಪದಾಧಿಕಾರಿಗಳನ್ನು, ದಾನಿಗಳನ್ನು, ವೇಣೂರು ಐಸಿವೈಎಂ ಪದಾಧಿಕಾರಿಗಳನ್ನು ಹಾಗೂ ವಿವಿಧ ರೀತಿಯಲ್ಲಿ ಸಹಕಾರ , ಸೇವೆ ನೀಡಿದವರನ್ನು ಸಮ್ಮಾನಿಸಿ ಗೌರವಿಸಲಾಯಿತು.

ಸ್ಮರಣಸಂಚಿಕೆ ಬಿಡುಗಡೆ: 
ನವೀಕೃತ ಚರ್ಚ್‌ನ ಉದ್ಘಾಟನಾ ಸಮಾರಂಭದ ಸವಿನೆನಪಿಗಾಗಿ ಹೊರತಂದ ‘ಕ್ರೀಸ್ತಿ ಸುವಾದ್‌ ಸ್ಮರಣಸಂಚಿಕೆಯನ್ನು ಧರ್ಮಾಧ್ಯಕ್ಷ ವಂ| ಡಾ| ಎಲೋಶಿಯಸ್‌ ಪೌಲ್‌ ಡಿ’ಸೋಜ ಅನಾವರಣಗೊಳಿಸಿದರು.

ವೇಣೂರು ಚರ್ಚ್‌ನ ಧರ್ಮಗುರು ವಂ| ಆ್ಯಂಟನಿ ವಿ. ಲೂವಿಸ್‌ ಸ್ವಾಗತಿಸಿದರು. ಚರ್ಚ್‌ ನವೀಕರಣ ಸಮಿತಿ ಸದಸ್ಯ ಅನೂಪ್‌ ಜೆ. ಪಾಯಸ್‌ ಮತ್ತು ಪದವೀಧರ ಶಿಕ್ಷಕ ವಿನೋದ್‌ ಮೊನೀಸ್‌ ಕಾರ್ಯಕ್ರಮ ನಿರೂಪಿಸಿ, ವೇಣೂರು ಚರ್ಚ್‌ ಪಾಲನ ಪರಿಷತ್‌ ಉಪಾಧ್ಯಕ್ಷ ರೊನಾಲ್ಡ್‌ ಡಿ’ಸೋಜಾ ವಂದಿಸಿದರು.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.