ಇಂದಿರಾ ಕ್ಯಾಂಟೀನ್ ಹೋಬಳಿ ಮಟ್ಟಕ್ಕೂ ವಿಸ್ತರಣೆ
Team Udayavani, Mar 2, 2019, 12:30 AM IST
ಪುತ್ತೂರು: ಸಿದ್ದರಾಮಯ್ಯ ಸರಕಾರ ಆರಂಭಿಸಿದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಹೋಬಳಿ ಮಟ್ಟಕ್ಕೂ ವಿಸ್ತರಿಸುವ ಇರಾದೆ ಇದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಪುತ್ತೂರಿನಲ್ಲಿ ಶುಕ್ರವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಅವರು, ನಗರಸಭೆ ಮತ್ತು ಕೆಯುಐಡಿಎಫ್ಸಿ ಜಂಟಿ ಸಹಯೋಗದಲ್ಲಿ ಎಡಿಬಿ ಯೋಜನೆಯಡಿ ಪುತ್ತೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಯ ಶಿಲಾನ್ಯಾಸದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದಲ್ಲಿ ನ್ಯಾಯಬೆಲೆ ಅಂಗಡಿ ಯನ್ನು ತಂದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಆಹಾರ ಧಾನ್ಯ ವಿತರಿಸಿದವರು ಇಂದಿರಾ ಗಾಂಧಿ. ಅವರ ಈ ಕನಸಿನ ಯೋಜನೆಯಡಿ ಆಹಾರಧಾನ್ಯ ಮಾತ್ರವಲ್ಲದೆ ಇಂದು ಅನ್ನವನ್ನೂ ನೀಡುತ್ತಿದ್ದೇವೆ. ಆರ್ಥಿಕ ವಾಗಿ ಬಲಾಡ್ಯರಲ್ಲದ ರಿಕ್ಷಾ ಚಾಲಕರು, ಕೂಲಿ ಕೆಲಸಗಾರರು, ಖಾಸಗಿ ಉದ್ಯೋಗಿಗಳು, ಶಾಲಾ -ಕಾಲೇಜು ಮಕ್ಕಳಿಗೆ ಪ್ರಯೋಜನ ವಾಗುವ ದೃಷ್ಟಿ ಯಿಂದ ಈ ವಿಶೇಷ ಯೋಜನೆಯನ್ನು ಜಾರಿಗೊಳಿಸಿದ ಖುಷಿ ಇದೆ ಎಂದರು.
ನೀರಿನ ಜವಾಬ್ದಾರಿ
ಜನರಿಗೆ ಸಮರ್ಪಕ ನೀರು ಪೂರೈಸುವ ಜವಾಬ್ದಾರಿಯನ್ನು ಸರಕಾರ ಮಾಡುತ್ತಿದೆ ಎಂದ ಅವರು, ಮುಂದೆ ಮನೆ ಕಟ್ಟಿ ಲೈಸನ್ಸ್ ಪಡೆಯುವ ಸಂದರ್ಭದಲ್ಲೇ ನೀರಿನ ಸಂಪರ್ಕಕ್ಕೂ ಅರ್ಜಿ ಸಲ್ಲಿಸಿ ಪಡೆಯುವ ವ್ಯವಸ್ಥೆ ಜಾರಿಗೆ ತರಲಿದೆ ಎಂದು ಎಂದರು.
20 ಲಕ್ಷ ಮಂದಿಗೆ ಬಿಪಿಎಲ್
ಆಧಾರ್ ಕಾರ್ಡ್ ದಾಖಲೆ ಮೂಲಕ ಮಾಸಿಕ 1.20 ಲಕ್ಷ ರೂ. ಒಳಗಿನ ಆದಾಯ ಹೊಂದಿದವರಿಗೆ ಬಿಪಿಎಲ್ ಪಡಿತರ ಚೀಟಿ ನೀಡುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರಿಂದ ಸುಮಾರು 20 ಲಕ್ಷ ಮಂದಿ ಬಿಪಿಎಲ್ ಕಾರ್ಡ್ ಹೊಂದುವಂತಾಗಿದೆ ಎಂದರು.
ಶಕುಂತಳಾ ಟಿ. ಶೆಟ್ಟಿ, ಪುತ್ತೂರು ಎಸಿ ಎಚ್.ಕೆ. ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ನಿರ್ದೇಶಕ ಪ್ರಸನ್ನ ಕುಮಾರ್, ಎಡಿಬಿ ಕಾಂಟ್ರಾಕ್ಟರ್ ನಿಕೋಲಸ್, ಕೆಯುಐಡಿಎಫ್ಸಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಸೂರಜ್, ನಗರಸಭಾ ಸದಸ್ಯರಾದ ರಿಯಾಝ್, ವಿದ್ಯಾಗೌರಿ, ಪದ್ಮನಾಭ, ಶಕ್ತಿ ಸಿನ್ಹಾ, ಫೌಝಿಯಾ ಉಪಸ್ಥಿತರಿದ್ದರು. ರೂಪಾ ಟಿ. ಶೆಟ್ಟಿ ಸ್ವಾಗತಿಸಿ, ಬಾಲಕೃಷ್ಣ ಪೊರ್ದಾಳ್ ನಿರ್ವಹಿಸಿದರು.
“ಸೈನಿಕರ ಸೇವೆಯಲ್ಲಿ ರಾಜಕೀಯ ಬೇಡ’
ಯೋಧರ ತ್ಯಾಗ ಮತ್ತು ಸೇವೆಯನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ತಪ್ಪು. ಇಂತಹ ಹೇಳಿಕೆಗಳು ರಾಜ್ಯಕ್ಕೆ ಕಪ್ಪು ಚುಕ್ಕೆಯಾಗುತ್ತವೆ ಎಂದು ಸಚಿವ ಯು.ಟಿ. ಖಾದರ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಪುತ್ತೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಖಾದರ್, ಇಡೀ ದೇಶದ ಜನತೆ ಸೈನಿಕರ ಪರವಾಗಿ ಮತ್ತು ಅವರ ಕುಟುಂಬದ ಪರವಾಗಿ ಇರಬೇಕು. ಆದರೆ ಈ ಸಂದರ್ಭದಲ್ಲಿ ಇದನ್ನೇ ರಾಜಕೀಯವಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ