ವ್ಯಾಟ್ಸಪ್ ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’; ಲಿಂಕ್ ಒತ್ತಿದರೆ ನಿಮ್ಮ ಬ್ಯಾಂಕ್ ಹಣಕ್ಕೆ ಕನ್ನ!


Team Udayavani, Mar 19, 2022, 11:45 AM IST

ವ್ಯಾಟ್ಸಪ್ ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’; ಲಿಂಕ್ ಒತ್ತಿದರೆ ನಿಮ್ಮ ಬ್ಯಾಂಕ್ ಹಣಕ್ಕೆ ಕನ್ನ!

ಮಂಗಳೂರು: ಭಾರೀ ಸದ್ದು ಮಾಡುತ್ತಿರುವ “ದಿ ಕಾಶ್ಮೀರ್‌ ಫೈಲ್ಸ್‌’ ಚಿತ್ರವನ್ನು ಉಚಿತವಾಗಿ ತೋರಿಸುವ ನೆಪದಲ್ಲಿ ಮೊಬೈಲ್‌ಗೆ ಲಿಂಕ್‌ ಕಳುಹಿಸಿ ವಂಚನೆ ನಡೆಯುವ ಬಗ್ಗೆ ಸೈಬರ್‌ ಭದ್ರತ ತಜ್ಞರು ಎಚ್ಚರಿಸಿದ್ದಾರೆ.

ವಂಚಕರು ಮೊಬೈಲ್‌ಗೆ ಲಿಂಕ್‌ ಒಂದನ್ನು ಕಳುಹಿಸುತ್ತಾರೆ. ಅದರ ಜತೆಗೆ “ದಿ ಕಾಶ್ಮೀರ್‌ ಫೈಲ್ಸ್‌’ ಸಿನೆಮಾವನ್ನು ಉಚಿತವಾಗಿ ವೀಕ್ಷಿಸಬಹುದು ಎಂಬ ಸಂದೇಶ ಕೂಡ ಇರುತ್ತದೆ. ಈ ಲಿಂಕ್‌ನ್ನು ಕ್ಲಿಕ್‌ ಮಾಡಿದಾಗ ಮೊಬೈಲ್‌ ಫೋನ್‌ಗೆ ವೈರಸ್‌ ಕೂಡ ಡೌನ್‌ಲೋಡ್‌ ಆಗುತ್ತದೆ. ಇದೊಂದು ಮಾಲ್‌ವೇರ್‌. ಈ ಮಾಲ್‌ವೇರ್‌ (ವೈರಸ್‌) ಮೂಲಕ ಮೊಬೈಲ್‌ ಸಂಖ್ಯೆಗೆ ಲಿಂಕ್‌ ಆಗಿರುವ ಬ್ಯಾಂಕ್‌ ಖಾತೆಯ ವಿವರಗಳನ್ನು ಕದಿಯುತ್ತಾರೆ. ಅನಂತರ ಖಾತೆಯಿಂದ ಹಣವನ್ನು ದೋಚುತ್ತಾರೆ.

ಇಂತಹ ಘಟನೆಗಳು ಉತ್ತರ ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಂಗಳೂರಿನಲ್ಲಿಯೂ ಕೆಲವರು ಈಗಾಗಲೇ ಇಂತಹ ಲಿಂಕ್‌ನ್ನು ಒತ್ತಿರುವ ಮಾಹಿತಿ ಲಭಿಸಿದೆ ಎಂದು ಸೈಬರ್‌ ಭದ್ರತ ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ:ಮದುವೆ ವಿಚಾರಕ್ಕೆ ಜಗಳ; ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪ್ರಿಯಕರ?

ಪ್ರಚಲಿತ ವಿಚಾರಗಳ ಆಯ್ಕೆ ಈ ರೀತಿಯ ವಂಚನೆ ಮಾಡುವಾಗ ಸೈಬರ್‌ ವಂಚಕರು ಪ್ರಚಲಿತ ಭಾರೀ ಸುದ್ದಿಯಲ್ಲಿರುವ ಮತ್ತು ಜನರು ಸ್ವಲ್ಪವೂ ಯೋಚಿಸದೆ ತತ್‌ಕ್ಷಣ ಡೌನ್‌ಲೋಡ್‌ ಮಾಡಿಕೊಳ್ಳಬಹುದಾದ ವಿಚಾರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸದ್ಯ “ಕಾಶ್ಮೀರ್‌ ಫೈಲ್ಸ್‌’ ಸಿನೆಮಾ ಹೆಚ್ಚು ಸದ್ದು ಮಾಡುತ್ತಿರುವುದರಿಂದ ಅದನ್ನು ಆಯ್ದುಕೊಂಡಿದ್ದಾರೆ.

ವಿಭಿನ್ನ ಲಿಂಕ್‌

ವಂಚಕರು ಎಲ್ಲರಿಗೂ ಒಂದೇ ರೀತಿಯ ಲಿಂಕ್‌ ಕಳುಹಿಸದೆ ವಿಭಿನ್ನ ಲಿಂಕ್‌ ಕಳುಹಿಸುತ್ತಾರೆ. ಈ ಲಿಂಕ್‌ ಗಳಲ್ಲಿ ಸಿನೆಮಾವೂ ಇರಬಹುದು. ಆದರೆ ಅದರ ಜತೆಗೆ ವೈರಸ್‌ ಕೂಡ ಇರುತ್ತದೆ. ಕೆಲವು ವಂಚಕರು ಉದ್ದೇಶಪೂರ್ವಕವಾಗಿಯೇ ಇಂತಹ ಪೈರೇಟೆಡ್‌ ಸಿನೆಮಾಗಳ ಲಿಂಕ್‌ ಕಳುಹಿಸುತ್ತಾರೆ ಎನ್ನುವುದು ಸೈಬರ್‌ ಭದ್ರತ ತಜ್ಞರ ಕಿವಿಮಾತು.

ಇಂತಹ ಲಿಂಕ್‌ ಬಂದ ಕೂಡಲೇ ಒತ್ತಬಾರದು. ಅದನ್ನು ತೀರಾ ಪರಿಚಿತರು ಕಳುಹಿಸಿದ್ದರೂ ಅದರ ಕುರಿತು ವಿಚಾರಿಸಬೇಕು. ಇಂತಹ ಲಿಂಕ್‌ಗಳ ಮೂಲಕ ಮೊಬೈಲ್‌ಗೆ “ಶಾರ್ಕ್‌ಬೋಟ್‌’ ರೀತಿಯ ಬ್ಯಾಂಕಿಂಗ್‌ ಟ್ರೋಜನ್‌ ವೈರಸ್‌ನ್ನು ಗೊತ್ತಿಲ್ಲದಂತೆಯೇ ಇನ್‌ಸ್ಟಾಲ್‌ ಮಾಡಿಸಲಾಗುತ್ತದೆ. ಈ ರೀತಿಯ ಲಿಂಕ್‌ಗಳನ್ನು ಒತ್ತದಿರುವುದೇ ಉತ್ತಮ. – ಡಾ| ಅನಂತ ಪ್ರಭು ಜಿ. ಸೈಬರ್‌ ಭದ್ರತಾ ತಜ್ಞ

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.