ಕಾರವಾರ-ಯಶವಂತಪುರ ರೈಲು ಪ್ರಯಾಣಿಕರ ಕೊರತೆ; 3 ಬೋಗಿಗಳ ಕಡಿತ


Team Udayavani, Apr 12, 2017, 12:16 PM IST

train.jpg

ಮಂಗಳೂರು: ಪ್ರಯಾಣಿಕರ ಕೊರತೆಯಿಂದಾಗಿ  ಯಶವಂತಪುರ-ಕಾರವಾರ ನಡುವೆ ಸಂಚರಿಸುತ್ತಿರುವ ಹಗಲು ರೈಲಿನ (ನಂ. 16515/16516) ಮೂರು ಬೋಗಿಗಳನ್ನು ಕಡಿತಗೊಳಿಸಲಾಗಿದೆ. ಆ ಮೂಲಕ ಒಟ್ಟು  ಕೋಚ್‌ಗಳ ಸಂಖ್ಯೆಯನ್ನು ಈಗ 18ರಿಂದ 15ಕ್ಕೆ ಇಳಿಸಲಾಗಿದೆ. 

ಹಗಲು ಹೊತ್ತಿನಲ್ಲಿ ವಾರಕ್ಕೆ ಮೂರು ದಿನ ಈ ರೈಲು ಕಾರವಾರದಿಂದ ಮಂಗಳೂರು-ಸುಬ್ರಹ್ಮಣ್ಯ, ಹಾಸನ ಮಾರ್ಗವಾಗಿ ಯಶವಂತಪುರಕ್ಕೆ ಸಂಚರಿಸುತ್ತಿದೆ. ಪ್ರಸ್ತುತ ಈ ರೈಲು ಒಂದು ಎಸಿ ಚೆಯರ್‌ ಕಾರ್‌ ಬೋಗಿ, 9 ದ್ವಿತೀಯ ದರ್ಜೆ ರಿಸರ್ವೇಶನ್‌ ಬೋಗಿ, 6 ಸಾಮಾನ್ಯ ಬೋಗಿ ಹಾಗೂ 2  ಎಸ್‌ಎಲ್‌ಆರ್‌ (ಗಾರ್ಡ್‌) ಬೋಗಿಗಳನ್ನು ಹೊಂದಿವೆ. ಅಲ್ಲದೆ, ಈ ರೈಲಿನ ದ್ವಿತೀಯ ದರ್ಜೆ ರಿಸರ್ವೇಶನ್‌ನಲ್ಲಿ  2 ಬೋಗಿ ಕಡಿತಗೊಳಿಸಿ 7ಕ್ಕೆ ಇಳಿಸಲಾಗಿದೆ. ಸಾಮಾನ್ಯ ಬೋಗಿಗಳ ಪೈಕಿಯೂ 1 ಬೋಗಿ ಕಡಿತಗೊಳಿಸಲಾಗಿದ್ದು, ಆ ಮೂಲಕ ಅದರ ಸಂಖ್ಯೆಯನ್ನು 6ಕ್ಕೆ ಇಳಿಸಲಾಗಿದೆ. ಈ ಬದಲಾವಣೆಯೂ ಎ. 10ರಿಂದಲೇ ಜಾರಿಗೆ ಬಂದಿರುವುದಾಗಿ ನೈಋತ್ಯ ರೈಲ್ವೇ ವಲಯ ತಿಳಿಸಿದೆ.

ಪ್ರಯಾಣಿಕರ ಕೊರತೆ ಕಾರಣ
ಬೋಗಿಗಳನ್ನು ಕಡಿತಗೊಳಿಸಿರುವುದಕ್ಕೆ  ನೈಋತ್ಯ ರೈಲ್ವೇ ಕಾರಣ ನೀಡಿಲ್ಲ. ಆದರೆ  ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ ಆಗಿರುವುದರಿಂದಲೇ ಬೋಗಿಗಳನ್ನು ಕಡಿತಗೊಳಿಸಲು ಕಾರಣ ಎನ್ನಲಾಗಿದೆ. ಈಗ ಈ ರೈಲಿನಲ್ಲಿ ಸುಬ್ರಹ್ಮಣ್ಯದವರೆಗೆ ಮಾತ್ರ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿರುತ್ತಾರೆ.  

ಶ್ರವಣಬೆಳಗೊಳ ಮಾರ್ಗ ಬಳಕೆಗೆ ಆಗ್ರಹ
ಕಾರವಾರ- ಯಶವಂತಪುರ- ಕಾರವಾರ (16515/16516) ರೈಲು ಗಾಡಿಯ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ  ಮೂಲಕ ಶ್ರವಣಬೆಳಗೊಳ ಮಾರ್ಗವಾಗಿ ಓಡಿಸಬೇಕು. ಆಗ ಪ್ರಯಾಣದ ಅವಧಿಯು ಕಡಿಮೆಯಾಗುತ್ತದೆ ಎನ್ನುವುದು ಕರಾವಳಿ ಭಾಗದ ಜನತೆಯ ಒತ್ತಾಸೆಯಾಗಿದೆ.

ವೇಳಾಪಟ್ಟಿ  ಸಮಸ್ಯೆ
ಈ ರೈಲು ಕಾರವಾರದಿಂದ ಬೆಳಗ್ಗೆ  5.30ಕ್ಕೆ  ಹೊರಟು 10.55ಕ್ಕೆ ಮಂಗಳೂರಿನ ಕಂಕನಾಡಿ ಜಂಕ್ಷನ್‌ ತಲುಪುತ್ತದೆ. ಅನಂತರ 11.10ಕ್ಕೆ ಅಲ್ಲಿಂದ ನಿರ್ಗಮಿಸಿ  ರಾತ್ರಿ 10 ಗಂಟೆಗೆ ಯಶವಂತಪುರ ತಲುಪುತ್ತದೆ.  ಮಂಗಳವಾರ, ಗುರುವಾರ ಶನಿವಾರ ಸಂಚರಿಸುತ್ತದೆ. 

ಅದೇ ರೀತಿ, ಯಶವಂತ ಪುರದಿಂದ ಮತ್ತೂಂದು ರೈಲು ಮುಂಜಾನೆ 6.30ಕ್ಕೆ  ಹೊರಟು ಸಂಜೆ 5.40ಕ್ಕೆ ಕಂಕನಾಡಿ ತಲುಪುತ್ತ¤ದೆ. ಅಲ್ಲಿಂದ ಅದು 6 ಗಂಟೆಗೆ ಹೊರಟು ರಾತ್ರಿ 11 ಗಂಟೆಗೆ ಕಾರವಾರ ತಲುಪುತ್ತದೆ. ವಾರದಲ್ಲಿ ಈ ರೈಲು ಸೋಮವಾರ, ಬುಧವಾರ ಹಾಗೂ ಶುಕ್ರವಾರ ಸಂಚರಿಸುತ್ತದೆ.

ಈ ವೇಳಾಪಟ್ಟಿ ಕರಾವಳಿ  ಪ್ರಯಾಣಿಕರಿಗೆ ಹೊಂದಾಣಿಕೆಯಾಗುತ್ತಿಲ್ಲ ಎಂಬ ಬಗ್ಗೆ ದೂರುಗಳು ಹಲವು ತಿಂಗಳಿಂದ ಕೇಳಿಬರುತ್ತಿವೆ.  ಕಾರವಾರದಿಂದ ಬೆಳಗ್ಗೆ  5.30ಕ್ಕೆ  ಹೊರಟರೆ ಯಶವಂತಪುರಕ್ಕೆ  ತಲುಪುವಾಗ  ರಾತ್ರಿ 10 ಗಂಟೆಯಾಗುತ್ತದೆ. ಅಲ್ಲಿಂದ ಮತ್ತೆ  ಬಸ್‌ನಲ್ಲಿ ಅಥವಾ ಇತರ ವಾಹನಗಳಲ್ಲಿ ಬೇರೆ ಕಡೆಗಳಿಗೆ ಹೋಗುವುದಕ್ಕೆ ತೊಂದರೆಯಾಗುತ್ತದೆ. ಇದೇ ರೀತಿ ಬೆಂಗಳೂರಿನಿಂದ ಬೆಳಗ್ಗೆ 6.30ಕ್ಕೆ ಹೊರಟು ಕಂಕನಾಡಿ ಜಂಕ್ಷನ್‌ಗೆ ಬರುವಾಗ ಸಂಜೆ 5.30 ಆಗುತ್ತದೆ. ಮತ್ತೆ ಅದು ಕಾರವಾರ ತಲುಪುವಾಗಲೂ ರಾತ್ರಿ 11 ಗಂಟೆಯಾಗುತ್ತದೆ. ಅಲ್ಲಿಂದಲೂ ಬೇರೆ ಊರುಗಳಿಗೆ  ಪ್ರಯಾಣಿಸುವುದಕ್ಕೆ ಸೂಕ್ತ ಬಸ್‌ ಸೌಲಭ್ಯಗಳಿಲ್ಲ. 

ಮಂಗಳೂರಿನಿಂದ ಬೆಂಗಳೂರಿಗೆ ಹೋಗುವ ಪ್ರಯಾಣಿಕರಿಗೂ ಈ ರೀತಿಯ ವೇಳಾಪಟ್ಟಿ  ಹೊಂದಿಕೆಯಾಗುತ್ತಿಲ್ಲ. ಅದರಲ್ಲಿಯೂ ಈ ರೈಲು ಅರಸೀಕೆರೆ ಮಾರ್ಗವಾಗಿ ಸುತ್ತಿ ಬಳಸಿಕೊಂಡು ಯಶವಂತಪುರ ತಲುಪಲು ಸುಮಾರು 11 ತಾಸುಗಳು ಬೇಕಾಗುತ್ತವೆ. 

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.