ಮದ್ಯ ಮಾರಾಟಗಾರರೇಕೆ ಗ್ರಾಹಕರಿಗೆ ಮಾಹಿತಿ ನೀಡುತ್ತಿಲ್ಲ


Team Udayavani, Apr 16, 2018, 11:29 AM IST

liquor.jpg

ಮಂಗಳೂರು: ಮನೆಯಲ್ಲಿ ನಡೆಯುವ ಕೌಟುಂಬಿಕ ಸಮಾರಂಭಗಳಲ್ಲಿಯೂ ಮದ್ಯ ವಿತರಣೆಗೆ ಇಲಾಖೆಯ ಅನುಮತಿ ಕಡ್ಡಾಯ ಎಂದಾದರೆ ಈ ಬಗ್ಗೆ ಮದ್ಯ ಖರೀದಿಸುವಾಗ ಮಾರಾಟಗಾರರೇಕೆ ಮಾಹಿತಿ ನೀಡುತ್ತಿಲ್ಲ? ಅವರಿಗೂ ಮಾಹಿತಿ ಇಲ್ಲವೇ? ಅವರಿಗೆ ಮಾಹಿತಿ ಇಲ್ಲದಿದ್ದರೆ ಮಾರಾಟ ಮಾಡಲೇ ಬಾರದಲ್ಲವೆ? ಅಧಿಕಾರಿಗಳೇಕೆ ಸಾರ್ವಜನಿಕರಿಗೆ ನೀತಿ ಸಂಹಿತೆ ಕುರಿತು ಸ್ಪಷ್ಟ ಮಾಹಿತಿ ನೀಡುವ ವ್ಯವಸ್ಥೆ ಮಾಡಿಲ್ಲ?
ಇದು ಬಂಟ್ವಾಳ ತಾಲೂಕು ಇರಾ ಗ್ರಾಮದ ಡ್ಯಾನಿಯಲ್‌ ಡಿ’ಸಿಲ್ವಾ ಅವರ ಪ್ರಶ್ನೆ. 

ಶನಿವಾರ ಮಧ್ಯಾಹ್ನ ಡ್ಯಾನಿಯಲ್‌ ಡಿ’ಸಿಲ್ವಾ ಪುತ್ರಿಯ ವಿವಾಹ ನಿಶ್ಚಿತಾರ್ಥ ವೇಳೆ ಅಬಕಾರಿ ಇಲಾಖೆಯ ಬಂಟ್ವಾಳ ಉಪ ಅಧೀಕ್ಷಕರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮದ್ಯ ದಾಸ್ತಾನು ಆರೋಪ ಹೊರಿಸಿ ಡ್ಯಾನಿಯಲ್‌ ಅವರ ಸಹೋದರ ಸ್ಟೀವನ್‌ ಡಿ’ಸಿಲ್ವಾ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಶುಭ ಸಮಾರಂಭ ನಡೆಯುತ್ತಿರುವಾಗಲೇ ನಡೆದ ಈ ದಾಳಿಯಿಂದ ಕುಟುಂಬದವರು ತೀವ್ರವಾಗಿ ನೊಂದಿದ್ದು, ಅಧಿಕಾರಿಗಳ ವರ್ತನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಕ್ತ ಮಾಹಿತಿ ಕೊರತೆಯಿಂದಾಗಿ ತಾವೂ ಎಡವಟ್ಟು ಮಾಡಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ. 

ಸುಮಾರು 11.30ರ ವೇಳೆಗೆ ನಿಶ್ಚಿತಾರ್ಥ ಆರಂಭಿಸಬೇಕೆನ್ನುವಷ್ಟರಲ್ಲಿ ಮಫ್ತಿಯಲ್ಲಿ ಬಂದ ಇಬ್ಬರು ಫ್ರಿಜ್‌ ಪರಿಶೀಲಿಸಿದರು. ಫೋಟೋ ತೆಗೆದರು. ಟಾಯ್ಲೆಟ್‌ಗೆ ಹೋಗಿ ಶೋಧಿಸಿದರು. ಮನೆಯೊಳಗೆ ಹುಡುಕಾಡಿದರು. ಮದ್ಯ ಇರುವುದನ್ನು ಖಾತರಿ ಪಡಿಸಿಕೊಂಡು ಇನ್ನಷ್ಟು ಸಿಬಂದಿಯನ್ನು° ಕರೆಸಿಕೊಂಡರು. ಮದ್ಯ ದಾಸ್ತಾನು ಅಕ್ರಮ ಎಂದು ಹೇಳಿ ವಶಕ್ಕೆ ಪಡೆದರು. ಬಳಿಕ ಸ್ಟೀವನ್‌ ಅವರನ್ನು ವಶಕ್ಕೆ ಪಡೆದು ಬಂಧಿಸಿದರು ಎಂದು ಡ್ಯಾನಿಯಲ್‌ ವಿವರಿಸಿದ್ದಾರೆ.

ಸಮಾರಂಭದಲ್ಲಿ ಮದ್ಯ ವಿತರಿಸುವುದಿಲ್ಲ. ಇಲಾಖೆಯ ಇಬ್ಬರು ಸಿಬಂದಿ ಇಲ್ಲಿಯೇ ಇದ್ದು ಗಮನಿಸಲಿ. ಸಮಾರಂಭ ಮುಗಿಯಲಿ, ಇದು ಓರ್ವ ಹೆಣ್ಣುಮಗಳ ಭವಿಷ್ಯದ ಪ್ರಶ್ನೆ ಎಂದು ಮನವಿ ಮಾಡಿದೆವು. ಆದರೆ ಅವರು ಮನ್ನಿಸಲಿಲ್ಲ

– ಇದು ಡ್ಯಾನಿಯಲ್‌ ಅವರ ನೊಂದ ನುಡಿ.

ಮಾಹಿತಿ ಬೇಕಾದರೆ ಆನ್‌ಲೈನ್‌ ನೋಡಿ ಇಂತಹ ಕಟ್ಟುನಿಟ್ಟಿನ ನಿಯಮಗಳ ಬಗ್ಗೆ ನಮಗೆ ತಿಳಿವಳಿಕೆ ಇಲ್ಲ ಎಂದು ಹೇಳಿದಾಗ “ಆನ್‌ಲೈನ್‌ ನಲ್ಲಿ ನೋಡಿ, ಅಲ್ಲಿ ವಿವರವಾಗಿ ಇದೆ’ ಎಂದರು. ಹಳ್ಳಿಗಳಲ್ಲಿ ಆನ್‌ಲೈನ್‌ ಮಾಹಿತಿ ಯಾರು ನೋಡುತ್ತಾರೆ ಸ್ವಾಮಿ? ನೀತಿ ಸಂಹಿತೆ ಬಗ್ಗೆ ಸ್ಥಳೀಯ ಗ್ರಾ.ಪಂ. ಅಧ್ಯಕ್ಷರಿಗೂ ಮಾಹಿತಿ ಇಲ್ಲ; ಅವರಿಗೂ ಮಾಹಿತಿ ನೀಡುವ ಕೆಲಸವನ್ನು ಮಾಡಿಲ್ಲವೇಕೆ? ಇದು ಡ್ಯಾನಿಯಲ್‌ ಅವರ ಪ್ರಶ್ನೆ. 

ನಾವು ಮದ್ಯವನ್ನು ಕದ್ದು ತಂದಿಲ್ಲ ಅಥವಾ ಮಾರಾಟ ಮಾಡಲು ತಂದದ್ದಲ್ಲ. ಪರವಾನಿಗೆ ಬೇಕಿದ್ದರೆ ಪಡೆಯುತ್ತಿದ್ದೆವು. ಮಾರಾಟ ಮಾಡಿದವರು ಪರವಾನಿಗೆ ಅಗತ್ಯವಿಲ್ಲ ಎಂದದ್ದೇಕೆ ಎಂದು ಡ್ಯಾನಿಯಲ್‌ ಪ್ರಶ್ನಿಸಿದರು.

ತಪ್ಪಾಗಿದೆ, ಕ್ಷಮಿಸಿ ಎಂದರೂ ಕೇಳಲಿಲ್ಲ ಯಾವುದೇ ಅವ್ಯವಹಾರ, ಅನ್ಯಾಯ ಎಸಗಿಲ್ಲ. ನಮ್ಮಿಂದ ತಪ್ಪಾಗಿದೆ, ಕ್ಷಮಿಸಿ ಎಂದು ವಿನಂತಿಸಿದರೂ ಕೇಳಲಿಲ್ಲ. ಅಧಿಕಾರಿಗಳ ನಡವಳಿಕೆಯಿಂದ ನಮಗೆ ಅವಮಾನವಾಗಿದೆ. ನಮ್ಮ ಸಮಾರಂಭಕ್ಕೆ ಕಪ್ಪು ಚುಕ್ಕೆ ಬರುವಂತೆ ಮಾಡಿದ್ದಾರೆ. ಮಾನಸಿಕ ಹಿಂಸೆಯಾಗಿದೆ, ಯಾರಿಗೂ ಹೀಗಾಗಬಾರದು ಎಂದು ಡ್ಯಾನಿಯಲ್‌ ಕುಟುಂಬದ ಸದಸ್ಯೆ ಲೀನಾ ಡಿ’ಸೋಜಾ ತಿಳಿಸಿದರು.

ನ್ಯಾಯಾಲಯಕ್ಕೆ ಎರಡು ದಿನ ರಜೆ ಶನಿವಾರ (ಎ. 14) ಅಂಬೇಡ್ಕರ್‌ ಜಯಂತಿ ಪ್ರಯುಕ್ತ ನ್ಯಾಯಾಲಯಕ್ಕೆ ರಜೆ, ರವಿವಾರ ರಜೆ. ಹಾಗಾಗಿ ಅಬಕಾರಿ ಕಾಯ್ದೆಯಡಿ ಬಂಧಿತರಾದ ಸ್ಟೀವನ್‌ ಡಿ’ಸಿಲ್ವಾ ಅವರಿಗೆ ಜಾಮೀನು ಪಡೆಯಲು ಈ ಎರಡೂ ದಿನ ಸಾಧ್ಯವಾಗದೆ ಜೈಲು ಅನಿವಾರ್ಯವಾಗಿತ್ತು. ಸೋಮವಾರ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಕುಟುಂಬದವರು ನಿರ್ಧರಿಸಿದ್ದಾರೆ. 

ವೈರಲ್‌ ಆದ ವೀಡಿಯೋ
ನಿಶ್ಚಿತಾರ್ಥ ನಡೆಯುತ್ತಿದ್ದಾಗ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಮನೆಯೊಡೆಯ ಸ್ಟೀವನ್‌ ಅವರನ್ನು ಜೈಲಿಗೆ ಕಳುಹಿಸಿರುವ ಘಟನೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿರುವ ವಿಚಾರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.