ಚರಂಡಿಗೆ ಬಿದ್ದ ವ್ಯಕ್ತಿಗೆ ಕಡಬ ಪೊಲೀಸರಿಂದ ಉಪಚಾರ
Team Udayavani, Feb 23, 2020, 5:20 AM IST
ಕಡಬ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜದಲ್ಲಿ ಶನಿವಾರ ಚರಂಡಿಗೆ ಬಿದ್ದು ಗಾಯಗೊಂಡಿದ್ದ ರಾಮಕುಂಜ ಗ್ರಾಮದ ಶಾರದಾನಗರ ಕಾಲನಿಯ ನಿವಾಸಿ ರಮೇಶ್ (30) ಅವರನ್ನು ಕಡಬ ಪೊಲೀಸರು ರಕ್ಷಿಸಿದ್ದಾರೆ.
ಆ ಮಾರ್ಗವಾಗಿ ಹೋಗುತ್ತಿದ್ದ ಕಡಬ ಎಸ್ಐ ರುಕ್ಮ ನಾಯ್ಕ, ಸಿಬಂದಿ ಕನಕರಾಜ್ ಮತ್ತು ಭವಿತ್ ರೈ ಅವರು ರಾಮಕುಂಜದ ಆತೂರಿನಲ್ಲಿ ಚರಂಡಿಗೆ ಬಿದ್ದು ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಗಮನಿಸಿದ್ದು, ಕೂಡಲೇ ವಾಹನ ನಿಲ್ಲಿಸಿ ಆತನನ್ನು ಚರಂಡಿಯಿಂದ ಮೇಲಕ್ಕೆತ್ತಿ ಉಪಚರಿಸಿದರು. ಸ್ಥಳೀಯರು ಕೂಡ ಕೈಜೋಡಿಸಿದರು.
ಗಾಯಾಳುವಿಗೆ ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಆ್ಯಂಬುಲೆನ್ಸ್ನಲ್ಲಿ ಪುತ್ತೂರು ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.
ರಮೇಶ ಅಪಸ್ಮಾರ ರೋಗಿಯಾಗಿದ್ದು, ಕುಡಿತದ ಚಟವನ್ನೂ ಹೊಂದಿದ್ದರು ಎನ್ನಲಾಗಿದೆ. ಆತ ಬಿಸಿಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ನಿತ್ರಾಣಗೊಂಡು ಚರಂಡಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಪೊಲೀಸರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ