ಅಹಿತಕರ ಘಟನೆಗಳಿಗೆ ಉಸ್ತುವಾರಿ ಸಚಿವರು ಕಾರಣ: ನಳಿನ್
Team Udayavani, Jul 13, 2017, 3:25 AM IST
ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿ ರುವ ಎಲ್ಲ ರೀತಿಯ ಅಹಿತರ ಘಟನೆಗಳಿಗೆ ಉಸ್ತುವಾರಿಸಚಿವರ ಹಾಗೂ ಸರಕಾರದ ವೈಫಲ್ಯವೇ ಕಾರಣ ಎಂದು ಸಂಸದ ನಳಿನ್ ಕುಮಾರ್ ಕಟೀಲು ಪತ್ರಿಕಾ ಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ನಡೆದ ಹಲವು ಪ್ರಕರಣಗಳ ಆರೋಪಿ ಗಳಿನ್ನೂ ಪತ್ತೆಯಾಗಿಲ್ಲ. ಪಂಜಿಮೊಗರು ಜೋಡಿಕೊಲೆ ಪ್ರಕರಣ, ಉಪ್ಪಿನಂಗಡಿ ಶಿಕ್ಷಕಿ ಕೊಲೆ ಪ್ರಕರಣ ಮಾತ್ರವಲ್ಲದೇ ಸಚಿವರಾದ ಯು.ಟಿ. ಖಾದರ್ ಹಾಗೂ ಬಿ. ರಮಾನಾಥ ರೈ ಅವರ ಕ್ಷೇತ್ರದಲ್ಲಿ ನಡೆದ ವಿವಿಧ ಕೊಲೆ ಹಾಗೂ ಕೊಲೆಯತ್ನ ಪ್ರಕರಣಗಳ ನೈಜ ಆರೋಪಿಗಳ ಬಂಧನ ಇನ್ನೂ ನಡೆದಿಲ್ಲ. ಈ ಪ್ರಕರಣಗಳಲ್ಲಿ ಇನ್ನೂ ನ್ಯಾಯ ಸಿಗದಿರುವುದಕ್ಕೆ ಪೊಲೀಸ್ ವೈಫಲ್ಯ ಕಾರಣ. ಅಲ್ಲದೇ ಪೊಲೀಸರನ್ನು ರಾಜಕೀಯದವರ ಕೈಗೊಂಬೆಯನ್ನಾಗಿಸಲಾಗಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ