ನಾಪತ್ತೆಯಾದ ವಿದ್ಯಾರ್ಥಿನಿಯ ಶವ ಪತ್ತೆ! ಸಹೋದರನಿಂದಲೇ ತಂಗಿಯ ಕೊಲೆ


Team Udayavani, Oct 26, 2019, 11:24 PM IST

crime

ಉಳ್ಳಾಲ : ಪಜೀರು ಗ್ರಾಮದ ಕಂಬಳಪದವಿನ ಮನೆಯಿಂದ 18 ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಫಿಯೋನಾ ಸ್ವೀಡಲ್‌ ಕುಟಿನ್ಹಾ (16) ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮನೆಯ ಹಿಂಭಾಗದ ಕಾಡಿನಲ್ಲಿ ಪತ್ತೆಯಾಗಿದೆ. ಆಕೆಯನ್ನು ಸಹೋದರನೇ ಕೊಂದು ಕಾಡಿಗೆ ಎಸೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪಜೀರು ಗ್ರಾಮದ ಫ್ರಾನ್ಸಿಸ್‌ ಕುಟಿನ್ಹೊ ಅವರ ಪುತ್ರಿಯಾಗಿದ್ದ ಫಿಯೋನಾ ಸಂತ ಆಗ್ನೆಸ್‌ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಈಕೆಯನ್ನು ಅಣ್ಣ ಸ್ಯಾಮ್ಸನ್‌ (18) ಕೊಲೆ ಮಾಡಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ.

ಘಟನೆಯ ವಿವರ
ಅ.8ರಂದು ಫಿಯೋನಾ ಮಂಗಳೂರಿಗೆಂದು ಹೋದವಳು ನಾಪತ್ತೆಯಾಗಿದ್ದಾಳೆಂದು ಮನೆಯವರು ಕೊಣಾಜೆ ಠಾಣೆಯಲ್ಲಿ ಅ.9 ರಂದು ದೂರು ದಾಖಲಿಸಿದ್ದರು. 15 ದಿನಗಳು ಕಳೆದರೂ ಆಕೆ ಪತ್ತೆಯಾಗದ ಹಿನ್ನೆಲೆಯಲ್ಲಿ ಮುಡಿಪು ನಾಗರಿಕರು ಆಕೆಯನ್ನು ಶೀಘ್ರ ಪತ್ತೆ ಹಚ್ಚುವಂತೆ ಆಗ್ರಹಿಸಿ ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು. ಪೊಲೀಸ್‌ ಆಯುಕ್ತರು ಪ್ರಕರಣದ ತನಿಖೆ ನಡೆಸುವಂತೆ ಸಹಾಯಕ ಆಯುಕ್ತರಿಗೆ ನಿರ್ದೇಶಿಸಿದ್ದರು.

ಸಾಕಷ್ಟು ತನಿಖೆ ನಡೆಸಿದಾಗ ವಿದ್ಯಾರ್ಥಿನಿಯ ಮೊಬೈಲ್‌ನ ಕೊನೆಯ ನೆಟ್‌ವರ್ಕ್‌ ಮುಡಿಪು ಭಾಗದಲ್ಲೇ ತೋರಿಸುತ್ತಿತ್ತು. ಅದರ ಆಧಾರದಡಿ ಪೊಲೀಸರು ಮನೆಮಂದಿಯನ್ನೇ ಹೆಚ್ಚಿನ ವಿಚಾರಣೆ ನಡೆಸಿದ್ದರು. ಶನಿವಾರ ಸಹೋದರ ಸ್ಯಾಮ್ಸನ್‌ ಅನ್ನು ವಿಚಾರಣೆ ನಡೆಸಿದಾಗ ಫಿಯೋನಾಳನ್ನು ಕೊಂದು ಮೃತದೇಹವನ್ನು ಮನೆಯ ಹಿಂದಿನ ಕಾಡಿನಲ್ಲಿ ಎಸೆದಿರುವುದಾಗಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹದ ಕುರುಹುಗಳು ಪತ್ತೆ: ಸಾಮ್ಸನ್‌ ನೀಡಿದ ಸುಳಿವಿನಂತೆ ಪೊಲೀಸರು ಮನೆಯ ಹಿಂಬಾಗದಲ್ಲಿರುವ ಕಾಡಿನಲ್ಲಿ ಶನಿವಾರ ರಾತ್ರಿ ಪರಿಶೀಲನೆ ನಡೆಸಿದಾಗ ಮೃತದೇಹದ ಕೂದಲು, ಹಲ್ಲು, ಮೊಬೈಲ್‌ ಮತ್ತು ಅಸ್ತಿಪಂಜರದ ಕೆಲವು ಭಾಗಗಳು ಪತ್ತೆಯಾಗಿದ್ದು ತಡರಾತ್ರಿಯಾಗಿರುವುದರಿಂದ ರವಿವಾರಕ್ಕೆ ತನಿಖೆಯನ್ನು ಮುಂದುವರೆಸಿದ್ದಾರೆ. ಸ್ಥಳದಲ್ಲಿ ಸ್ಥಳೀಯರು ಸೇರಿದ್ದು ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

ಕೊಲೆಗೆ ಬಳಸಿದ್ದ ಸುತ್ತಿಗೆ ವಶ
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಸಹೋದರ-ಸಹೋದರಿ ನಡುವೆ ಗಲಾಟೆ ನಡೆದು ಸುತ್ತಿಗೆಯಿಂದ ತಲೆಗೆ ಬಡಿದು ಹತ್ಯೆ ನಡೆಸಿರುವುದಾಗಿ ಆರೋಪಿ ಪೊಲೀಸರು ತಪ್ಪೊಪ್ಪಿಕೊಂಡಿದ್ದು, ಸುತ್ತಿಗೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಎಂಜಿನಿಯರಿಂಗ್‌ ವಿದ್ಯಾರ್ಥಿ

ಸ್ಯಾಮ್ಸನ್‌  ಎಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದು, ಪರೀಕ್ಷೆ ಪಾಸಾಗದೆ ಮನೆಯಲ್ಲೇ ಉಳಿದುಕೊಂಡಿದ್ದ. ಮೊಬೈಲ್‌ ಗೀಳು ಹೆಚ್ಚಿಸಿಕೊಂಡಿದ್ದ ಈತ ತನಗೆ ಮನೆಯಲ್ಲಿ ಪ್ರೀತಿ ನೀಡುತ್ತಿಲ್ಲ. ತಂದೆ ಮತ್ತು ತಾಯಿ ಸಹೋದರಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಾರೆ ಎಂದು ಭಾವಿಸಿ ಕೊಲೆ ನಡೆಸಿರುವ ಸಾಧ್ಯತೆ ಇದೆ ಎಂದು ಪೊಲೀಸ್‌ ಮೂಲಗಳು ತಿಳಿಸಿದ್ದು, ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.