ನಿರ್ಲಕ್ಷ್ಯಕ್ಕೆ ಒಳಗಾದ ಜಲಭರಿತ ಬೃಹತ್‌ ಕೆರೆ

ಮುಕ್ಕ ಪಡ್ರೆಯಲ್ಲಿ ನಿಸರ್ಗದತ್ತವಾದ ಜಲಮೂಲ

Team Udayavani, Feb 22, 2020, 4:30 AM IST

kala-37

ಸುರತ್ಕಲ್‌: ಇಲ್ಲಿಗೆ ಸಮೀಪದ ಮುಕ್ಕ ಪಡ್ರೆ ಬಳಿಯ ನಿಸರ್ಗ ದತ್ತವಾದ ಸುಮಾರು 4.50 ಎಕರೆ ಪ್ರದೇಶದಲ್ಲಿ ವಿಸ್ತರಿಸಿಕೊಂಡಿರುವ ಬೃಹತ್‌ ಕೆರೆಯೊಂದು ಅಭಿವೃದ್ಧಿಯಿಂದ ವಂಚಿತವಾಗಿದೆ.

ವರ್ಷದ 365 ದಿನವೂ ನೀರಿನಿಂದ ತುಂಬಿ ಸುತ್ತಲಿನ ಪರಿಸರ ಹಚ್ಚ ಹಸುರಿನಿಂದ ಕಂಗೊಳಿಸುತ್ತಿದ್ದು, ಕೆಲವು ಬಾರಿ ವಲಸೆ ಹಕ್ಕಿಗಳ ಕಲರವ, ಸ್ಥಳೀಯ ಹಕ್ಕಿಗಳ ಮತ್ಸ್ಯ ಬೇಟೆಯ ತಾಣವಾಗಿದೆ. ಮಹಾನಗರ ಪಾಲಿಕೆಯ ಸುರತ್ಕಲ್‌ ಉಪವಿಭಾಗದಲ್ಲಿ ಈ ಕೆರೆಯಿದೆ. ಸುತ್ತಲೂ ಹಚ್ಚ ಹಸುರು, ಗದ್ದೆ, ತೋಟ ಇದರ ನಡುವೆ ಕೆರೆ ಇದೆ. ನಿರ್ವಹಣೆಯ ಕೊರತೆಯಿಂದ ಕೆರೆಯ ಸುತ್ತಲು ಗಿಡಗಂಟಿಗಳು ಬೆಳೆದುನಿಂತಿವೆ.

ಸರಕಾರಿ ಒಡೆತನದ ಭೂಮಿಯಲ್ಲಿ ಈ ಕೆರೆ ಇದ್ದು ಸಮೀಪದಲ್ಲೇ ನಂದಿನಿ ನದಿ ಹರಿಯುತ್ತದೆ. ಈ ಹಿಂದೆ ಕೃಷಿಗೆ ಇಲ್ಲಿನ ನೀರನ್ನು ಬಳಸುತ್ತಿದ್ದರು. ಈ ಬೃಹತ್‌ ಕೆರೆಯನ್ನು ಅಭಿವೃದ್ಧಿಪಡಿಸಿದರೆ ಕೃಷಿ ಸಹಿತ ಬೇರೆ ಬೇರೆ ಉಪಯೋಗಕ್ಕೆ ಬಳಸಬಹುದಾಗಿದೆ. ಪ್ರವಾಸೋದ್ಯಮದ ಅಭಿವೃದ್ಧಿಗೂ ಈ ಕೆರೆ ಕೊಡುಗೆ ನೀಡ ಬಲ್ಲುದು. ಶನಿವಾರ ಸಮೀಪದ ಕಾಲೇಜಿನ ವಿದ್ಯಾರ್ಥಿಗಳು ಆಗಮಿಸಿ ಒಂದಿಷ್ಟು ಹೊತ್ತು ಕಳೆಯುತ್ತಾರೆ.

ಕೆರೆ ಮಲೀನಗೊಳ್ಳುತ್ತಿದೆ ಇತ್ತೀಚೆಗೆ ಆಧುನಿಕರಣದಿಂದ ಈ ಕೆರೆ ಮಾಲಿನ್ಯಕ್ಕೊಳಗಾಗುತ್ತಿದೆ. ಸುತ್ತಲಿನ ಕಟ್ಟಡಗಳ ನೀರು ಈ ಕೆರೆಯನ್ನು ಮಲೀನಗೊಳಿಸುತ್ತಿರುವ ಸಂದೇಹ ವ್ಯಕ್ತವಾಗುತ್ತಿದೆ. ಸುತ್ತಲೂ ಇದೀಗ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಕಾಲಕ್ರಮೇಣ ಈ ಕೆರೆ ಇತಿಹಾಸದ ಪುಟ ಸೇರಿದರೂ ಅಚ್ಚರಿಯಿಲ್ಲ. ಇದರ ಸಮೀಪವೇ ಇನ್ನೆರಡು ಕೆರೆಗಳಿದ್ದು ಅವುಗಳು ತ್ಯಾಜ್ಯದ ಕೊಂಪೆಯಾಗುತ್ತಿವೆೆ. ಸರಕಾರ ಈ ಕೆರೆಯನ್ನು ಅಭಿವೃದ್ಧಿ ಪಡಿಸಿ ಪ್ರವಾಸೋದ್ಯಮಕ್ಕೆ ಅವಕಾಶ ನೀಡಿದಲ್ಲಿ ಸುಂದರ ಪಿಕ್ನಿಕ್‌ ಸ್ಥಳವಾಗಿ ಬದಲಾಗುವುದರಲ್ಲಿ ಅನುಮಾನವಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅ ಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕಿದೆ.

ಪರ್ಯಾಯ ಜಲ ಮೂಲವಾಗಿ ಕೆರೆಗಳು
ಪಾಲಿಕೆಗೆ ಇದೀಗ ಮುಖ್ಯವಾಗಿ ನೇತ್ರಾವತಿಗೆ ಅಡ್ಡಲಾಗಿ ಕಟ್ಟಲಾಗಿರುವ ತುಂಬೆ ವೆಂಟೆಡ್‌ ಡ್ಯಾಂ, ಮಳವೂರಿನ ಗುರುಪುರ ನದಿಗೆ ಕಟ್ಟಲಾದ ಕಿರು ಅಣೆಕಟ್ಟುಗಳಿಂದ ಕುಡಿಯುವ ನೀರಿನ ಸರಬರಾಜಾಗುತ್ತಿದೆ. ಆದರೆ ಕಳೆದ ಬಾರಿಯ ಮೇಘ ಸ್ಫೋಟದ ಪರಿಣಾಮ ಈಗಾಗಲೇ ನದಿ ಮೂಲಗಳು ಬತ್ತಿ ಹೋಗಿವೆ. ಸಂಗ್ರಹಿಸಿಡಲಾದ ನೀರನ್ನು ಮಾತ್ರ ಉಪಯೋಗಿಸಬೇಕಾಗುತ್ತದೆ. ಹೀಗಾಗಿ ಜಲ ಸಂಪನ್ಮೂಲ ಹೊಂದಿರುವ ಪಡ್ರೆ ಕೆರೆಯನ್ನು ಅಭಿವೃದ್ಧಿಪಡಿಸಿದಲ್ಲಿ ಅತಿಕ್ರಮಣದಿಂದ ರಕ್ಷಿಸಬಹುದು ಮಾತ್ರ ವಲ್ಲ, ಅಂತರ್ಜಲ ಹೆಚ್ಚಳ ಮತ್ತು ವಿವಿಧ ಚಟುವಟಿಕೆಗಳಿಗೆ ನೀರು ಬಳಸಿಕೊಳ್ಳುವ ಕುರಿತು ಯೋಜನೆ ರೂಪಿಸಬಹುದಾಗಿದೆ.

10 ಕೋಟಿ ರೂ. ಮೀಸಲು
ಈಗಾಗಲೇ ಸ್ಮಾರ್ಟ್‌ ಸಿಟಿ ಯೋಜನೆಯಡಿ ಕಾವೂರು ಮತ್ತು ಗುಜ್ಜರ ಕೆರೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ. ಸುಮಾರು 10 ಕೋಟಿ ರೂ. ಮೀಸಲಿಡಲಾಗಿದೆ. ಹೀಗಾಗಿ ಎಲ್ಲ ಕೆರೆಗಳ ಅಭಿವೃದ್ಧಿ ಸ್ಮಾರ್ಟ್‌ ಯೋಜನೆಯಲ್ಲಿ ಸಾಧ್ಯವಾಗದು. ಮಂಗಳೂರು ನಗರಾಭಿವೃದ್ಧಿಯಲ್ಲಿ ಕೆರೆ ಅಭಿವೃದ್ಧಿಗೆ ಯೋಜನೆ ರೂಪಿಸಬಹುದಾಗಿದೆ.
 -ಮಹಮ್ಮದ್‌ ನಝೀರ್‌, ನಿರ್ದೇಶಕರು ಸ್ಮಾರ್ಟ್‌ ಸಿಟಿ ಯೋಜನೆ

ಸರಕಾರಿ ಬಾವಿ, ಕೆರೆಗಳ ರಕ್ಷಣೆಗೆ ಆದ್ಯತೆ
ಸಮೀಪದಲ್ಲೇ ಇರುವ ನೀರಿನ ಮೂಲಗಳನ್ನು ಉಳಿಸಿಕೊಂಡರೆ ಅಂತರ್ಜಲ ರಕ್ಷಣೆ ಸಾಧ್ಯ. ನೀರು ಹಿಡಿದಿಟ್ಟುಕೊಳ್ಳುವ ಕೆರೆ, ಬಾವಿಗಳನ್ನು ಪುನರುಜ್ಜೀವನಗೊಳಿಸುವ ಬಗ್ಗೆ ಈಗಾಗಲೇ ಆಸಕ್ತನಾಗಿದ್ದು, ವಿವಿಧೆಡೆ ಇರುವ ಸರಕಾರಿ ಬಾವಿ, ಕೆರೆಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಸರಕಾರಿ ಕೆರೆ, ಬಾವಿಗಳು ಅತಿಕ್ರಮಣವಾಗದಂತೆ ರಕ್ಷಿಸಲು ಆದ್ಯತೆ ನೀಡಲಾಗುವುದು.
– ಡಾ| ಭರತ್‌ ಶೆಟ್ಟಿ ವೈ., ಶಾಸಕರು, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ

– ಲಕ್ಷ್ಮೀನಾರಾಯಣ ರಾವ್‌

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.