ಹೊಸ ವರ್ಷ ಹೆಸರಿನಲ್ಲಿ ಅಹಿತಕರ ಘಟನೆ ತಡೆಯಲು ಮನವಿ


Team Udayavani, Dec 24, 2017, 3:32 PM IST

24-Dec-17.jpg

ಬೆಳ್ತಂಗಡಿ: ಡಿ. 31ರ ರಾತ್ರಿ ಹೊಸ ವರ್ಷದ ಪಾರ್ಟಿಗಳನ್ನು, ವರ್ಷಾಚರಣೆಯನ್ನು ನಿಷೇಧಿಸುವ ಕುರಿತು ರಾಜ್ಯಾದ್ಯಂತ ಜನಾಂದೋಲನ ನಡೆಸಲಾಗುತ್ತಿದೆ. ಆ ಪ್ರಯುಕ್ತ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬೆಳ್ತಂಗಡಿ ಉಪತಹಶೀಲ್ದಾರರಿಗೆ ಹಾಗೂ ಪೊಲೀಸ್‌ ಇಲಾಖೆಗೆ ಮನವಿ ನೀಡಲಾಯಿತು.

ಮನವಿಯಲ್ಲಿ ಸದ್ಯ ಪಾಶ್ಚಾತ್ಯ ರೂಢಿಗಳ ಪ್ರಭಾವದಿಂದ ಹೊಸ ವರ್ಷದ ಹೆಸರಿನಲ್ಲಿ ಡಿ. 31ರ ಮಧ್ಯರಾತ್ರಿ, ರಾತ್ರಿ ಪೂರ್ತಿ ಪಾರ್ಟಿ ಮಾಡುವ ಕೆಟ್ಟ ರೂಢಿ ಹೆಚ್ಚಾಗಿದೆ. ಈ ರಾತ್ರಿ ಯುವಕ-ಯುವತಿಯರು ಹೊಸ ವರ್ಷವನ್ನು ಆಚರಿಸುವ ನೆಪದಲ್ಲಿ ಮದ್ಯಪಾನ ಮಾಡುವುದು, ಕರ್ಕಶ ಧ್ವನಿವರ್ಧಕ ಹಚ್ಚಿ ಅದರ ತಾಳಕ್ಕೆ ಅಶ್ಲೀಲ ಅಂಗಪ್ರದರ್ಶನ, ಅಮಲು ಪದಾರ್ಥಗಳ ಸೇವನೆ ಮಾಡುವುದು, ಮಹಿಳೆಯರ ಜೊತೆ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ ನೀಡುವುದು ಮುಂತಾದ ಅಹಿತಕರ ಘಟನೆಗಳು ಜರಗುತ್ತವೆ. ಕಳೆದ ವರ್ಷ ಡಿ.31ರ ರಾತ್ರಿ ನಡೆದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಬೆಂಗಳೂರಿನ ಹೆಸರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿರುವುದು ತಮಗೆ ತಿಳಿದೇ ಇದೆ. ಅಷ್ಟೇ ಅಲ್ಲದೇ ಈ ದಿನ ರಾತ್ರಿ ಯುವಕರು ಮದ್ಯಪಾನ ಮಾಡಿ ವೇಗವಾಗಿ ವಾಹನ ಓಡಿಸುವುದರಿಂದ ಅನೇಕ ಅಪಘಾತಗಳೂ ಸಂಭವಿಸುತ್ತಿವೆ. ಕೆಲವೊಂದು ಕಡೆಯಲ್ಲಿ ರಾತ್ರಿಯಿಡೀ ಪಟಾಕಿ ಸಿಡಿಸಿ ಪ್ರದೂಷಣೆ ಮಾಡಲಾಗುತ್ತದೆ. ಯುವತಿಯರನ್ನು ಛೇಡಿಸುವ ಪ್ರಕರಣಗಳೂ ನಡೆದು ಒಟ್ಟಾರೆ ಕಾನೂನು ಮತ್ತು ಸುವ್ಯವಸ್ಥೆಯ ಸಂದರ್ಭದಲ್ಲಿ ಗಂಭೀರ ಸ್ಥಿತಿ ನಿರ್ಮಾಣವಾಗುತ್ತಿದೆ. ಇದನ್ನು ತಡೆಯಬೇಕು ಎಂದು ತಹಶೀಲ್ದಾರ್‌ಗೆ ಮನವಿ ನೀಡಲಾಯಿತು.

ಮನವಿ ನೀಡುವ ವೇಳೆ ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಉಪಾಧ್ಯಕ್ಷ ತಿಮ್ಮಪ್ಪ ಗೌಡ ಬೆಳಾಲು, ನ್ಯಾಯವಾದಿ ಬಿ.ಕೆ. ಉದಯ ಕುಮಾರ್‌ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಕರುಣಾಕರ ಅಭ್ಯಂಕರ್‌, ನಾರಾಯಣ ಗೌಡ, ಸೀತಾರಾಮ ಆಳ್ವ, ಆನಂದ ಗೌಡ, ರಮೇಶ ಮೊದಲಾದವರು ಉಪಸ್ಥಿತರಿದ್ದರು.

ಪೊಲೀಸ್‌ಗೆ ಮನವಿ
ಹೊಸ ವರ್ಷ ಆಚರಣೆ ಹೆಸರಿನಲ್ಲಿ ನಡೆಯುವ ಅನಾಚಾರ ತಡೆಗಟ್ಟಲು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪೊಲೀಸ್‌ ಠಾಣೆಗೆ ಮನವಿ ನೀಡಲಾಯಿತು. ತಪ್ಪು ಪ್ರಕರಣಗಳಿಂದ ಅನೇಕ ನಾಗರಿಕರು, ಸ್ತ್ರೀಯರು, ಯುವತಿಯರಿಗೆ ಮನೆ ಹೊರಗೆ ಹೋಗುವುದು ಕಠಿನವಾಗಿದೆ ಮತ್ತು ರಾಷ್ಟ್ರದ ಯುವ ಪೀಳಿಗೆ ಅವನತಿಯ ಮಾರ್ಗದಲ್ಲಿದೆ. ಇಂತಹ ತಪ್ಪು ಪ್ರಕಾರಗಳನ್ನು ತಡೆಯಲು ಡಿ. 31ರ ರಾತ್ರಿ ನಗರದ ರಸ್ತೆ ಮತ್ತು ಪ್ರಮುಖ ತೀರ್ಥಕ್ಷೇತ್ರಗಳಲ್ಲಿ, ಪ್ರವಾಸಿ ಸ್ಥಳ, ಕೋಟೆಯಂತಹ ಐತಿಹಾಸಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಧೂಮಪಾನ ಹಾಗೂ ಪಾರ್ಟಿಗಳನ್ನು ಮಾಡಲು ನಿಷೇಧಿಸಬೇಕು. ಆರಕ್ಷಕರಿಂದ ಗಸ್ತುದಳ ಪ್ರಾರಂಭಿಸುವುದು, ವೇಗವಾಗಿ ವಾಹನ ಚಲಾಯಿಸುವವರ ಮೇಲೆ ತತ್‌ಕ್ಷಣ ಕ್ರಮಕೈಗೊಳ್ಳುವುದು, ಪಟಾಕಿ ಗಳಿಂದಾಗುವ ಪ್ರದೂಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಇತ್ಯಾದಿ ಕ್ರಮಗಳನ್ನು ಕೈಗೊಳ್ಳಲು ಇಲಾಖೆಗೆ ವಿನಂತಿಸಿದೆ.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.