ನಾಲ್ಯಪದವು ಹಿ.ಪ್ರಾ. ಶಾಲೆ: ಮೂಲಸೌಕರ್ಯದ ನಿರೀಕ್ಷೆ

ಪಾಲಿಕೆ ವ್ಯಾಪ್ತಿಯಲ್ಲಿಯೇ ವಿದ್ಯಾರ್ಥಿ ದಾಖಲಾತಿ ಅಧಿಕವಾಗಿರುವ ಶಾಲೆ

Team Udayavani, Sep 4, 2021, 6:06 AM IST

ನಾಲ್ಯಪದವು ಹಿ.ಪ್ರಾ. ಶಾಲೆ: ಮೂಲಸೌಕರ್ಯದ ನಿರೀಕ್ಷೆ

ಸರಕಾರಿ ಶಾಲೆಯ ದಾಖಲಾತಿ ಹೆಚ್ಚಳವಾಗುತ್ತಿರುವುದು ಸಂತಸದ ವಿಚಾರವಾದರೂ ಮೂಲ ಸೌಕರ್ಯಗಳ ಕೊರತೆ ಚಿಂತೆಗೆ ಕಾರಣವಾಗಿದೆ. ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಉದಯವಾಣಿ ಸುದಿನವು “ಮಕ್ಕಳು ಬರುವರು ಶಾಲೆಗೆ – ಸೌಲಭ್ಯ ಕಲ್ಪಿಸಿ’ಅಭಿಯಾನದ ಮೂಲಕ ಬೆಳಕು ಚೆಲ್ಲಲಿದೆ.

ಮಹಾನಗರ: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ ವರ್ಷಕ್ಕಿಂತ ಅಧಿಕ (103) ವಿದ್ಯಾರ್ಥಿಗಳ ದಾಖಲಾತಿಯೊಂದಿಗೆ ಗುರುತಿಸಿಕೊಂಡಿರುವ ಶಕ್ತಿನಗರ ಸಮೀಪದ ನಾಲ್ಯಪದವು ಕುವೆಂಪು ಶತಮಾನೋತ್ಸವ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯು ಮೂಲ ಸೌಕರ್ಯವನ್ನು ಹೊಂದಿದ್ದರೂ ಇನ್ನಷ್ಟು ನೆರವಿನ ನಿರೀಕ್ಷೆಯಲ್ಲಿದೆ.

1962ರಲ್ಲಿ ಆರಂಭವಾದ ಇಲ್ಲಿನ ಶಾಲೆ ಹಿಂದೆ ಮಾದರಿ ಶಾಲೆ ಎಂದೇ ಜನಜನಿತವಾಗಿತ್ತು. ಇಲ್ಲಿ ಕಳೆದ ವರ್ಷ 256 ವಿದ್ಯಾರ್ಥಿಗಳಿದ್ದರೆ, ಈ ವರ್ಷ 360ಕ್ಕೆ ಏರಿಕೆಯಾಗಿದೆ!

ಶಾಲೆಯಲ್ಲಿ 1ರಿಂದ 8ನೇ ತರಗತಿವರೆಗೆ ಇದೆ. ಆಂಗ್ಲಮಾಧ್ಯಮವೂ ಇರುವ ಕಾರಣದಿಂದ 1ನೇ ತರಗತಿಗೆ ಸುಮಾರು 60 ಮಕ್ಕಳ ದಾಖಲಾತಿ ಯಾಗಿದೆ. ಉಳಿದಂತೆ 2ರಿಂದ 8ನೇ ತರಗತಿವರೆಗೆ ಕೂಡ ಮಕ್ಕಳು ಹೊಸ ದಾಖಲಾತಿ ಯಾಗಿದೆ. ಶಕ್ತಿನಗರ, ರಾಜರಾಜೇಶ್ವರಿ ನಗರ, ರಾಜೀವ ನಗರ, ಮೊಗ್ರೋಡಿ, ಕಾರ್ಮಿಕ ಕಾಲನಿ, ಕುಂಟಲ್ಪಾಡಿ, ದತ್ತನಗರ, ಗುಂಡಳಿಕೆ ಸಹಿತ ವಿವಿಧ ಭಾಗಗಳಿಂದ ಶಾಲೆಗೆ ವಿದ್ಯಾರ್ಥಿಗಳು ಬರುತ್ತಾರೆ.

ಕಳೆದ ವರ್ಷವೂ 100ಕ್ಕಿಂತ ಅಧಿಕ ಮಕ್ಕಳು ಇದೇ ಶಾಲೆಗೆ ಹೆಚ್ಚುವರಿಯಾಗಿ ಸೇರ್ಪಡೆಯಾಗಿದ್ದರು. ಇಲ್ಲಿ ಎಲ್‌ಕೆಜಿ, ಯುಕೆಜಿಯಲ್ಲಿ 80 ಮಕ್ಕಳಿದ್ದಾರೆ. ಜತೆಗೆ 1, 2, 3ನೇ ತರಗತಿ ಆಂಗ್ಲಮಾಧ್ಯಮ ಶಾಲೆ ಇದೆ. ಜತೆಗೆ 6, 7, 8ನೇ ತರಗತಿ ಕೂಡ ಆಂಗ್ಲಮಾಧ್ಯಮವಿದೆ. ಹೀಗಾಗಿ ಸಮೀಪದ ವ್ಯಾಪ್ತಿಯ ಹಲವು ಮಕ್ಕಳು ಇದೇ ಶಾಲೆಯನ್ನು ಅವಲಂಬಿಸಿದ್ದಾರೆ.

ಇದನ್ನೂ ಓದಿ:ಸೋಯಾಬೀನ್‌ ಬೆಳೆಗೆ ರಸ್ಟ್‌ ಫಂಗಸ್‌ ಕಾಟ | ಸೋಯಾ ಬೆಳೆದ ರೈತರೇ ಗಯಾ

ಕೊಠಡಿ ಇದೆಯಾದರೂ ಇನ್ನೂ ಆವಶ್ಯಕತೆಯಿದೆ!
ಶಾಲೆಯಲ್ಲಿ ಹೆಚ್ಚುವರಿ ತರಗತಿ ಕೊಠಡಿಗೆ ಸಮಸ್ಯೆ ಇಲ್ಲ. ಹಾಗಾಗಿ ಸದ್ಯಕ್ಕೆ ಕೊಠಡಿ ಕೊರತೆ ಎದುರಾಗದು ಎಂಬುದು ಶಾಲೆಯ ಆಡಳಿತ ಮಂಡಳಿ ಲೆಕ್ಕಾಚಾರ. “ಹಾಲ್‌’ ಕೂಡ ಇದೆ. ಜತೆಗೆ 10 ಲಕ್ಷ ರೂ.ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ದೊರಕಿದೆ. ಆದರೂ ಮುಂದೆ ಮಕ್ಕಳ ಸಂಖ್ಯೆ ಏರಿಕೆಯಾಗುತ್ತಿರುವ ಕಾಲದಲ್ಲಿ ಹೆಚ್ಚುವರಿ ಕೊಠಡಿ ಒದಗಿಸುವ ಕಾರ್ಯವನ್ನು ಶಿಕ್ಷಣ ಇಲಾಖೆ ಆದ್ಯತೆಯ ನೆಲೆಯಲ್ಲಿ ಮಾಡ ಬೇಕಿದೆ. ಶಾಸಕ ಡಿ. ವೇದವ್ಯಾಸ ಕಾಮತ್‌ ಅವರು ಶಾಲೆಯನ್ನು ದತ್ತು ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಶಾಲೆಗೆ ಬೇಕಾಗುವ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಡುವ ನಿಟ್ಟಿನಲ್ಲಿ ಇತ್ತೀಚೆಗೆ ಸಭೆ ಕೂಡ ನಡೆಸಿದ್ದಾರೆ.

ಶಿಕ್ಷಕರ ನೇಮಕ ಅಗತ್ಯ
ಮುಖ್ಯಶಿಕ್ಷಕರು, ದೈಹಿಕ ಶಿಕ್ಷಕರು ಸಹಿತ 8 ಶಿಕ್ಷಕರು ಇದ್ದಾರೆ. ಆದರೆ ಮಕ್ಕಳ ಸಂಖ್ಯೆ ಏರಿಕೆಯಾಗಿರುವ ಕಾರಣದಿಂದ ಹೆಚ್ಚುವರಿಯಾಗಿ ಕನಿಷ್ಠ 5 ಶಿಕ್ಷಕರನ್ನು ಸರಕಾರ ಇಲ್ಲಿಗೆ ನಿಯೋಜಿಸಬೇಕಿದೆ. ಬಹುಮುಖ್ಯವಾಗಿ 1, 2, 3ನೇ ತರಗತಿಯಲ್ಲಿ 150ಕ್ಕೂ ಅಧಿಕ ಮಕ್ಕಳು ಇರುವ ಕಾರಣದಿಂದ ಸರಕಾರದ ವತಿಯಿಂದ ಶಿಕ್ಷಕರ ನೇಮಕ ಆಗಲೇಬೇಕಿದೆ ಅಥವಾ ಅತಿಥಿ ಶಿಕ್ಷಕರ ನಿಯೋಜನೆ ಮಾಡಬೇಕಾಗಿದೆ. ಸದ್ಯ ಶಾಲೆಯ ಹಳೆ ವಿದ್ಯಾರ್ಥಿ ಸಂಘ, ಶಾಲಾಭಿವೃದ್ಧಿ ಸಮಿತಿಯು ಶಾಲೆಗೆ ಗೌರವ ಶಿಕ್ಷಕರ ನಿಯೋಜನೆಗೆ ನೆರವಾಗಿದ್ದಾರೆ.

ಸರ್ವ ವ್ಯವಸ್ಥೆಗೆ ಆದ್ಯತೆ
ಶಾಲೆಯಲ್ಲಿ ಈ ಬಾರಿಯೂ ವಿದ್ಯಾರ್ಥಿ ಗಳ ದಾಖಲಾತಿ ಏರಿಕೆಯಾಗಿದೆ. ಪೀಠೊಪಕರಣ ವನ್ನು ಸ್ಥಳೀಯ ದಾನಿಗಳು ಶಾಲೆಗೆ ನೀಡಿದ್ದರೂ ಮಕ್ಕಳ ಸಂಖ್ಯೆ ಏರಿಕೆಯಾಗಿರುವ ಕಾರಣದಿಂದ ಇನ್ನಷ್ಟು ಪೀಠೊಪಕರಣದ ಅಗತ್ಯವಿದೆ. ಭೌತಿಕ ತರಗತಿ ಶುರುವಾಗುವ ಸಮಯದಲ್ಲಿ ಮಕ್ಕಳಿಗೆ ಅನುಕೂಲವಾಗಲು ಶಿಕ್ಷಕರ ನೇಮಕ, ಕೊಠಡಿ, ನೀರಿನ ವ್ಯವಸ್ಥೆಗಳನ್ನು ಮಾಡಲು ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣ ಇಲಾಖೆಯು ಈ ನಿಟ್ಟಿನಲ್ಲಿ ವಿಶೇಷ ಆದ್ಯತೆ ನೀಡಲಿದೆ.
-ಬಿ. ಸುರೇಶ್‌ ರಾವ್‌, ಮುಖ್ಯ ಶಿಕ್ಷಕರು,
ಕುವೆಂಪು ಶತಮಾನೋತ್ಸವ ಉನ್ನತೀಕರಿಸಿದ ಹಿ.ಪ್ರಾ. ಶಾಲೆ-ನಾಲ್ಯಪದವು

-ದಿನೇಶ್‌ ಇರಾ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.