ಪ್ರದರ್ಶನದಲ್ಲಿ ಕಣ್ಮನ ಸೆಳೆದ ಹಳೆಯ ಸ್ಕೂಟರ್‌ಗಳು

ನಗರದಲ್ಲಿ ಸ್ಕೂಟರ್‌ ದಿನಾಚರಣೆ

Team Udayavani, Sep 23, 2019, 5:10 AM IST

2209MLR13

ಮಹಾನಗರ: ನಗರದ ಕುದ್ರೋಳಿ ಅಳಕೆಯ ಸಿಟಿ ಅರೇನಾ ಫುಟ್‌ಬಾಲ್‌ ಮೈದಾನದ ಸಮೀಪದ ವಾದಿರಾಜ ನಗರದಲ್ಲಿ ರವಿವಾರ ನಡೆದ ಸ್ಕೂಟರ್‌ ಡೇ ಕಾರ್ಯಕ್ರಮವು ನಮ್ಮ ಹಳೆಯ ಸ್ಕೂಟರ್‌ಗಳ ಪ್ರದರ್ಶನಕ್ಕೆ ವೇದಿಕೆಯಾಯಿತು.

ದೇಶದಲ್ಲಿಯೇ ಮೊದಲ ಬಾರಿಗೆ ನಡೆದ ದಕ್ಷಿಣ ಭಾರತ ಮಟ್ಟದ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಕುಂದಾಪುರದಿಂದ ಕೇರಳದ ಕೊಟ್ಟಾಯಂ ವರೆಗಿನ ಪ್ರದೇಶದ 70 ಮಂದಿ ತಮ್ಮ ಹಳೆಯ ಕ್ಲಾಸಿಕ್‌ ಮತ್ತು ರೆಟ್ರೋ 2- ಸ್ಟ್ರೋಕ್‌ ಸ್ಕೂಟರ್‌ಗಳನ್ನು ಪ್ರದರ್ಶಿಸಿದರು.

70-80ರ ದಶಕಗಳಲ್ಲಿದ್ದ ಲ್ಯಾಂಬ್ರೆಟ್ಟಾ, ವೆಸ್ಪಾ, ವಿಜಯ್‌ಸೂಪರ್‌ ಮತ್ತಿತರ ಬ್ರಾಂಡ್‌ಗಳ ಸ್ಕೂಟರ್‌ಗಳನ್ನು ಪ್ರದರ್ಶಿಸಲಾಗಿದ್ದು, ಆಧುನಿಕ ತಲೆ ಮಾರಿನ ಯುವಜನರೂ ಸಹಿತ ಹಲವಾರು ಮಂದಿ ಸಾರ್ವಜನಿಕರು ವೀಕ್ಷಿಸಿದರು. ಸ್ಕೂಟರ್‌ಗಳ ಮಾಲಕರು 30- 40 ವರ್ಷಗಳಷ್ಟು ಹಳೆಯ ಸ್ಕೂಟರ್‌ಗಳನ್ನು ಜೋಪಾನವಾಗಿ ಕಾಪಾಡಿಕೊಂಡು ಬಂದಿರುವ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಮಂಗಳೂರು ಕ್ಲಾಸಿಕ್‌ ಸ್ಕೂಟರ್‌ ಕ್ಲಬ್‌ ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಕರ್ನಾಟಕ ಮತ್ತು ಕೇರಳದ ಸ್ಕೂಟರ್‌ ಮಾಲಕರು ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಮಹಾರಾಷ್ಟ್ರ, ಗೋವಾ ಮತ್ತಿತರ ರಾಜ್ಯಗಳನ್ನು ಸ್ಕೂಟರ್‌ ಮಾಲಕರನ್ನು ಸೇರಿಸಿಕೊಂಡು ದೊಡ್ಡ ಮಟ್ಟದ ಪ್ರದರ್ಶನವನ್ನು ಏರ್ಪಡಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.ಹಳೆಯ ಸ್ಕೂಟರ್‌ಗಳು ನಮ್ಮ ಪರಂಪರೆಯ ಸಂಕೇತ. ಅದನ್ನು ಇಂದಿನ ತಲೆಮಾರಿಗೆ ಪರಿಚಯಿಸುವುದು ಇದರ ಉದ್ದೇಶ ಎಂದವರು ವಿವರಿಸಿದ್ದಾರೆ.

ವಿವಿಧ ಸ್ಪರ್ಧೆಗಳು
ಪ್ರದರ್ಶನದಲ್ಲಿ ಭಾಗವಹಿಸಿದ ಹಳೆಯ ಸ್ಕೂಟರ್‌ಗಳ ಮಾಲಕರಿಗಾಗಿ ನಿಧಾನ ಸ್ಕೂಟರ್‌ ಸ್ಪರ್ಧೆ, ಸ್ಕೂಟರನ್ನು ವೇಗವಾಗಿ ದೂಡಿಕೊಂಡು ಹೋಗುವುದು, ಬಾಯಿಯಲ್ಲಿ ಚಮಚ ಲಿಂಬೆ ಹುಳಿ ಇರಿಸಿ ಸ್ಕೂಟರ್‌ ಚಲಾಯಿಸುವುದು, ಆತ್ಯಂತ ಹಳೆಯ ಸ್ಕೂಟರ್‌, ಅತ್ಯುತ್ತಮವಾಗಿ ನಿರ್ವಹಣೆ ಮಾಡಿಕೊಂಡು ಬಂದಿರುವ ಸ್ಕೂಟರ್‌ ಮತ್ತಿತರ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಐರೋಪ್ಯ ಒಕ್ಕೂಟದ ರಾಷ್ಟ್ರಗಳು ಸೆ. 16ರಿಂದ 22ರ ವರೆಗೆ “ಮೊಬಿಲಿಟಿ ಸಪ್ತಾಹ’ವನ್ನು ಆಚರಿಸುತ್ತಿದ್ದು, ಇದರ ಭಾಗವಾಗಿ ಕೊನೆಯ ದಿನ ಸ್ಕೂಟರ್‌ ದಿನವನ್ನು ಆಚರಿಸಲಾಗುತ್ತಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.