ಹೊಟೇಲ್‌ಗ‌ಳಲ್ಲಿ ಈರುಳ್ಳಿ ದೋಸೆ, ಈರುಳ್ಳಿ ಬಜೆ ಸಿಗಲ್ಲ; ಕುಸಿದ ಈರುಳ್ಳಿ ವ್ಯಾಪಾರ

ಈರುಳ್ಳಿ ತರಿಸಿದೆ ಕಣ್ಣೀರು...

Team Udayavani, Dec 1, 2019, 5:45 AM IST

ss

ವಿಶೇಷ ವರದಿಮಹಾನಗರ: ಎರಡು ವಾರಗಳಿಂದ ಏರುತ್ತಲೇ ಇರುವ ಈರುಳ್ಳಿ ಬೆಲೆ ವ್ಯಾಪಾರಸ್ಥರಿಗೆ ಕಣ್ಣೀರು ತರಿಸಿದರೆ, ಬೆಲೆ ಏರಿಕೆಯಿಂದಾಗಿ ಹೊಟೇಲ್‌ಗ‌ಳಲ್ಲಿ ಈರುಳ್ಳಿ ಖಾದ್ಯ ತಯಾರಿಕೆಯನ್ನೇ ನಿಲುಗಡೆಗೊಳಿಸಲಾಗಿದೆ. ಮೂಟೆ ಮೂಟೆ ಮಾರಾಟವಾಗುತ್ತಿದ್ದ ಈರುಳ್ಳಿ ಪ್ರಸ್ತುತ ಚಿಲ್ಲರೆ ಮಾರಾಟ ಕಾಣುತ್ತಿದೆ.

ನೆರೆಯಿಂದಾಗಿ ಚಿಕ್ಕಮಗಳೂರು, ಉತ್ತ¤ರ ಕರ್ನಾಟಕ, ಹೊರ ರಾಜ್ಯಗಳಲ್ಲಿ ಈರುಳ್ಳಿ ಬೆಳೆ ನಷ್ಟವಾದ ಹಿನ್ನೆಲೆಯಲ್ಲಿ ಕಳೆದೊಂದು ಎರಡು ವಾರದಿಂದ ಈರುಳ್ಳಿ ಬೆಲೆ ಏರಿಕೆಯಾಗುತ್ತಲೇ ಇದೆ. 60 ರೂ.ಗಳಿದ್ದ ದೊಡ್ಡ ಈರುಳ್ಳಿ ಬೆಲೆ ಪ್ರಸ್ತುತ 90-100 ರೂ. ತಲುಪಿದೆ. 40 ರೂ.ಗಳಿದ್ದ ಸಣ್ಣ ಈರುಳ್ಳಿ ಬೆಲೆ 120 ರೂ.ಗಳ ತನಕವೂ ಏರಿಕೆ ಕಂಡಿದೆ. ಇದರಿಂದ ಈರುಳ್ಳಿ ಕೊಳ್ಳುವವರ ಸಂಖ್ಯೆ ಕಡಿಮೆಯಾಗಿದ್ದು, ಇದರಿಂದ ವ್ಯಾಪಾರಸ್ಥರು ನಷ್ಟ ಅನುಭವಿಸುವಂತಾಗಿದೆ. ಮೂಟೆ ಮೂಟೆ ಖರೀದಿಸುತ್ತಿದ್ದ ಹೊಟೇಲ್‌ನವರು ಪ್ರಸ್ತುತ ಕೆಜಿ ಲೆಕ್ಕದಲ್ಲಿ ಖರೀದಿ ಮಾಡುತ್ತಿದ್ದಾರೆ. ಶೇ. 25 ವ್ಯಾಪಾರ ಪ್ರಸ್ತುತ ಇದೆ ಎನ್ನುತ್ತಾರೆ ತರಕಾರಿ ವ್ಯಾಪಾರಸ್ಥ ಡೇವಿಡ್‌.

45ರ ಬದಲು 20 ಟನ್‌ ಈರುಳ್ಳಿ ಪೂರೈಕೆ
ಮಂಗಳೂರಿಗೆ ಚಿಕ್ಕಮಗಳೂರು, ಹುಬ್ಬಳ್ಳಿ, ಬಳ್ಳಾರಿ ಮುಂತಾದೆಡೆಗಳಿಂದ ಈರುಳ್ಳಿ ಪೂರೈಕೆಯಾಗುತ್ತಿತ್ತು. ಪ್ರಸ್ತುತ ಪೂನಾದಿಂದ ಮಾತ್ರ ಈರುಳ್ಳಿ ಸರಬರಾಜಾಗುತ್ತಿದೆ. 40-45 ಟನ್‌ಗಳಷ್ಟು ಪೂರೈಕೆಯಾಗುತ್ತಿದ್ದ ಈರುಳ್ಳಿ ಪ್ರಸ್ತುತ ಅಂದಾಜು 20 ಟನ್‌ಗಳಿಗೆ ಇಳಿದಿದೆ. ಅದನ್ನು ಮಾರಾಟ ಮಾಡಲೂ ಆಗದೇ, ಇರಿಸಿಕೊಳ್ಳಲೂ ಆಗದೆ ಹಾಳಾಗುತ್ತಿದೆ ಎನ್ನುತ್ತಾರೆ ವ್ಯಾಪಾರಸ್ಥರು.

ಈರುಳ್ಳಿ ದೋಸೆ, ಈರುಳ್ಳಿ ಬಜೆ ಸಿಗಲ್ಲ!
ಹೊಟೇಲ್‌ಗ‌ಳಲ್ಲಿ ಈರುಳ್ಳಿಯಿಂದ ಮಾಡುವ ತಿಂಡಿಗಳನ್ನು ಸದ್ಯ ತಯಾರು ಮಾಡುತ್ತಿಲ್ಲ. ಬಹುತೇಕ ಹೊಟೇಲ್‌ಗ‌ಳಲ್ಲಿ ಈರುಳ್ಳಿ ದೋಸೆ, ಈರುಳ್ಳಿ ಬಜೆ ಮತ್ತಿತರ ಈರುಳ್ಳಿ ಖಾದ್ಯಗಳನ್ನು ನಿಲ್ಲಿಸಲಾಗಿದೆ. ಪದಾರ್ಥಕ್ಕೂ ಈರುಳ್ಳಿ ಹಾಕುವುದನ್ನು ನಿಲ್ಲಿಸಲಾಗಿದೆ ಎನ್ನುತ್ತಾರೆ ಹೊಟೇಲ್‌ ಮಾಲಕರ ಸಂಘದ ಪ್ರಮುಖರು.

ಈಜಿಪ್ಟ್ ಈರುಳ್ಳಿಗಿಲ್ಲ ಬೇಡಿಕೆ!
ಕಳೆದೊಂದು ವಾರದ ಹಿಂದೆ ನಗರಕ್ಕೆ ಈಜಿಪ್ಟ್ ಈರುಳ್ಳಿಯನ್ನು ಪರಿಚಯಿಸಲಾಗಿದ್ದರೂ ಜನ ಈಜಿಪ್ಟ್ ಈರುಳ್ಳಿ ಖರೀದಿಯಿಂದ ದೂರವೇ ಉಳಿದಿದ್ದಾರೆ. ದೇಶೀಯ ಈರುಳ್ಳಿಯಷ್ಟು ರುಚಿ ಇಲ್ಲದಿರುವುದು, ದೊಡ್ಡ ಗಾತ್ರ ಮತ್ತು ಗಟ್ಟಿಯಾಗಿರುವುದರಿಂದ ಜನ ಅದರ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ ಎನ್ನುತ್ತಾರೆ ವ್ಯಾಪಾರಸ್ಥರು.

ಪೂರೈಕೆ, ಬೇಡಿಕೆ ಕಡಿಮೆ
ಈರುಳ್ಳಿಯ ಪೂರೈಕೆ ಮತ್ತು ಬೇಡಿಕೆ ಪ್ರಸ್ತುತ ಕಡಿಮೆಯಾಗಿದೆ. ಇರುವ ಈರುಳ್ಳಿ ಬೇಡಿಕೆ ಕಳೆದು ಕೊಂಡಿರುವುದರಿಂದ ವ್ಯಾಪಾ ರಸ್ಥರಲ್ಲೇ ಬಾಕಿಯಾಗಿ ಹಾಳಾ ಗುತ್ತಿದೆ. ವ್ಯಾಪಾರಸ್ಥರಿಗೆ ನಷ್ಟವಾಗುತ್ತಿದೆ.
 - ಮುತ್ತಪ್ಪ, ಸೆಂಟ್ರಲ್‌ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ

ಪದಾರ್ಥಕ್ಕೂ ಈರುಳ್ಳಿ ಬಳಸುತ್ತಿಲ್ಲ
ಸಸ್ಯಾಹಾರಿ ಹೊಟೇಲ್‌ಗ‌ಳಿಗಿಂತ ಮಾಂಸಾಹಾರಿ ಹೊಟೇಲ್‌ಗ‌ಳಲ್ಲಿ ಈರುಳ್ಳಿ ಹೆಚ್ಚು ಬೇಕಾಗುತ್ತದೆ. ಸದ್ಯ ಈರುಳ್ಳಿ ಬೆಲೆ ಏರಿಕೆಯಾಗಿರುವುದರಿಂದ ಈರುಳ್ಳಿಯಿಂದ ಮಾಡಲಾಗುವ ತಿಂಡಿಗಳನ್ನು ನಿಲ್ಲಿಸಲಾಗಿದೆ. ಪದಾರ್ಥಕ್ಕೂ ಈರುಳ್ಳಿ ಬಳಕೆ ಮಾಡುತ್ತಿಲ್ಲ.
 - ಕುಡಿ³ ಜಗದೀಶ ಶೆಣೈ, ಅಧ್ಯಕ್ಷರು,
ದ.ಕ. ಹೊಟೇಲ್‌ ಮಾಲಕರ ಸಂಘ

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.