ಅನಾಥ ಭಾವದಲ್ಲಿ ಏಕನಾಥ ಶೆಟ್ಟಿ ಕುಟುಂಬ

ಎಎನ್‌-32 ದುರಂತಕ್ಕೆ 3 ವರ್ಷ

Team Udayavani, Jul 23, 2019, 5:32 AM IST

mmm

ಬೆಳ್ತಂಗಡಿ: ಅದು ಜುಲೈ 22, 2016. ಚೆನ್ನೈಯ ತಾಂಬರಂ ವಾಯುನೆಲೆಯಿಂದ ಅಂಡಮಾನ್‌ ನಿಕೋಬಾರ್‌ನ ಪೋರ್ಟ್‌ ಬ್ಲೇರ್‌ಗೆ ಪ್ರಯಾಣಿಸುತ್ತಿದ್ದ ಎಎನ್‌-32 ಯುದ್ಧ
ವಿಮಾನ ಬಂಗಾಲಕೊಲ್ಲಿ ಸಮುದ್ರದಲ್ಲಿ ಸಂಪರ್ಕ ಕಡಿತಗೊಂಡು ನಿನ್ನೆಗೆ ಮೂರು ವರ್ಷ.

ಯುದ್ಧ ವಿಮಾನದಲ್ಲಿ ಸೇವೆಯ ನಿಮಿತ್ತ ಪ್ರಯಾಣಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ವೀರ ಯೋಧ ಏಕನಾಥ ಶೆಟ್ಟಿ ಸೇರಿ 29 ಜನ ಭಾರತೀಯ ಸೈನಿಕರು ಏನಾದರೆಂಬುದು ಇಂದಿಗೂ ನಿಗೂಢ.

ವಾಯು ಪಡೆ ಇತಿಹಾಸದಲ್ಲೇ ಮೊದಲು
ನಾಪತ್ತೆಯಾದ ವಿಮಾನ ಪತ್ತೆ ಹಚ್ಚಲು ಕೇಂದ್ರ ಸರಕಾರ ಮತ್ತು ಮಿಲಿಟರಿ ತಜ್ಞರು ಸತತ ಮೂರು ತಿಂಗಳು ಎರಡು ಪಿ-8ಎ ವಿಮಾನ, ಮೂರು ಡೋರ್ನಿಯರ್‌ ವಿಮಾನ, ಒಂದು ಜಲಾಂತರ್ಗಾಮಿ, ನೌಕಾ ಸೇನೆಯ 12 ನೌಕೆಗಳ ಮೂಲಕ ಪ್ರಯತ್ನಿಸಿದ್ದವು. ವಿಮಾನವೊಂದು ನಾಪತ್ತೆಯಾಗಿದ್ದರೂ ಕಿಂಚಿತ್ತೂ ಕುರುಹು ಪತ್ತೆಯಾಗದಿರುವುದು ವಾಯುಪಡೆ ಇತಿಹಾಸದಲ್ಲೇ ಮೊದಲ ಕರಾಳ ನೆನಪು.

ಬೆಳಗ್ಗೆ 8.30ಕ್ಕೆ ಹೊರಟಿದ್ದ ಎಎನ್‌-32ನಲ್ಲಿ ಗುರುವಾಯನಕೆರೆಯ ಹೆಮ್ಮೆಯ ಪುತ್ರ ಏಕನಾಥ ಶೆಟ್ಟಿಯವರೂ ಇದ್ದರು. ಬೆಳಗ್ಗೆ 9.12ಕ್ಕೆ ಸಂಪರ್ಕ ಕಡಿತಗೊಂಡಿತ್ತು. 11.45ಕ್ಕೆ ಪೋರ್ಟ್‌ ಬ್ಲೇರ್‌ಗೆ ತಲುಪಬೇಕಿದ್ದ ವಿಮಾನ ತಲುಪದೇ ಇದ್ದಾಗ ಮಧ್ಯಾಹ್ನ 1.50ಕ್ಕೆ ಅದು ಕಣ್ಮರೆ ಕುರಿತು ವಾಯುಸೇನೆ ಮಾಹಿತಿ ಪ್ರಕಟಿಸಿತ್ತು. ಅದಾದ ಬಳಿಕದ ಬಹುದಿನಗಳ ಕಾಲ ಏಕನಾಥ ಶೆಟ್ಟಿ ಅವರ ಬರುವಿಕೆಯ ನಿರೀಕ್ಷೆಯಲ್ಲಿ ಪತ್ನಿ ಜಯಂತಿ ಶೆಟ್ಟಿ, ಮಗ ಅಕ್ಷಯ್‌ ಶೆಟ್ಟಿ, ಪುತ್ರಿ ಆಶಿತಾ ಶೆಟ್ಟಿ ಇದ್ದರು.

ಪುತ್ರಿ ಉದ್ಯೋಗದ ನಿರೀಕ್ಷೆಯಲ್ಲಿ ಮಗಳು ಆಶಿತಾ ಶೆಟ್ಟಿಗೆ ಆಳ್ವಾಸ್‌ ಕಾಲೇಜು ಉಚಿತ ಶಿಕ್ಷಣ ಒದಗಿಸಿತ್ತು. ಆಕೆ ಎಂಎಚ್‌ಆರ್‌ಡಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿ ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ಮಗ ಅಕ್ಷಯ್‌ ಶೆಟ್ಟಿ ಮಂಗಳೂರು ಸಹ್ಯಾದ್ರಿ ಕಾಲೇಜಿನಲ್ಲಿ ಮೊದಲ ವರ್ಷದ ಎಂಜಿನಿಯರಿಂಗ್‌ಗೆ ಸೇರ್ಪಡೆಗೊಂಡಿದ್ದು, ತಂದೆಯಂತೆ ಸಾಧನೆ ಮಾಡುವ ತವಕದಲ್ಲಿದ್ದಾರೆ.

ಹುಸಿಯಾಗದಿರಲಿ ನಿರೀಕ್ಷೆ ಯಾವುದೇ ಅವಶೇಷ ಪತ್ತೆ ಯಾಗದೇ ಇರುವುದರಿಂದ ವಿಮಾನ ಕಕ್ಷೆ ಬಿಟ್ಟು ಹೋಗುವ ಸಾಧ್ಯತೆ ಇಲ್ಲ ವಾದರೂ ಅಂಥ ಕೌತುಕವೇನಾ ದರೂ ನಡೆದಿರಬಹುದಾದ ಸಾಧ್ಯತೆ ಕುರಿತು ತಜ್ಞರು ಉಲ್ಲೇಖೀಸಿದ್ದಾರೆ. ಇವೆಲ್ಲ ಪವಾಡಸದೃಶ ಸಾಧ್ಯಾ ಸಾಧ್ಯತೆಯಾದರೂ ಆಶಾವಾದದ ಬೆಳ್ಳಿಕಿರಣವನ್ನು ಊರವರು ಹಾಗೂ ಕುಟುಂಬ ಸದಸ್ಯರು ಇಂದಿಗೂ ಕಳೆದುಕೊಂಡಿಲ್ಲ.

ಪತಿಯ ಸಮವಸ್ತ್ರ ನಮ್ಮ ಕೈಸೇರಿ ಮೂರು ವರ್ಷಗಳು ಸಂದಿವೆ. ಅವರು ಇಂದಲ್ಲ ನಾಳೆ ನಮ್ಮನ್ನು ಸೇರುವರೆಂಬ ವಿಶ್ವಾಸದಲ್ಲಿ ನೋವು ಮರೆತು ಮಕ್ಕಳ ಭವಿಷ್ಯ ರೂಪಿಸುತ್ತಿದ್ದೇನೆ.
-ಜಯಂತಿ ಶೆಟ್ಟಿ
ಯೋಧ ಏಕನಾಥ ಶೆಟ್ಟಿ ಅವರ ಪತ್ನಿ

-ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.