ಇಂದಿರಾ ಎಂಬ ಜನಪ್ರಿಯತೆಯ ಶಕ್ತಿ 


Team Udayavani, Mar 1, 2018, 12:28 PM IST

1-Mar-8.jpg

ಮಂಗಳೂರು ಕೇಂದ್ರವಾಗಿ ಅವಿಭಜಿತ ದ.ಕ. ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರದ್ದು ವಿಶಿಷ್ಟ ಅಧ್ಯಾಯ. ಈ ಭಾಗವನ್ನು ಬಹುವಾಗಿ ಮೆಚ್ಚಿಕೊಂಡಿದ್ದ ಅವರು ಚುನಾವಣೆ ಸಂದರ್ಭ ಮಾತ್ರವಲ್ಲದೆ ಇತರ ಯೋಜನೆಗಳ ಉದ್ಘಾಟನೆಗೂ ಬಂದವರಾಗಿದ್ದರು.

ಇಂದಿರಾ ಅವರ ಸಾರ್ವಜನಿಕ ಸಭೆಗಳು ವಸ್ತುಶಃ ಬೃಹತ್‌ ಸಮಾವೇಶಗಳೇ ಆಗಿರುತ್ತಿದ್ದವು. ಅವರಿಗೆ ರಾಜಕೀಯ ‘ಪುನರ್ಜನ್ಮ’ ನೀಡಿದ್ದು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ. ಅಲ್ಲಿ ಅವರು ತುರ್ತು ಪರಿಸ್ಥಿತಿಯ ಬಳಿಕದ ಉಪಚುನಾವಣೆಯಲ್ಲಿ ಗೆದ್ದರು. ಬಳಿಕ ಪ್ರಧಾನಿಯೂ ಆದರು. ಆ ಕಾಲಕ್ಕೆ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ಮತ್ತು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಗಳು ಸೇರ್ಪಡೆಯಾಗಿದ್ದವು.

ಇಂದಿರಾ ಅವರ ಕಂಚಿನ ಕಂಠ, ಸಕಾಲಿಕ ವಿಚಾರಗಳ ಮೇಲಿನ ಪರಿಜ್ಞಾನ, ಉಡುಗೆ, ವೇಗದ ನಡಿಗೆ, ವಿಪಕ್ಷಗಳ ಮೇಲಿನ ವಾಗ್ಧಾಳಿ, ಅತ್ಯಂತ ಎಂದು ವರ್ಣಿಸಬಹುದಾದ ಆತ್ಮವಿಶ್ವಾಸಗಳು ಆಕೆಗೆ ರಾಜಕೀಯ-ಆಡಳಿತಾತ್ಮಕ ಹಿಡಿತ ನೀಡಿದ್ದವು. ತಮ್ಮ ಸಂಪುಟದಲ್ಲಿ ಅವರು ಆಗಿನ ಮಂಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಬಿ. ಜನಾರ್ದನ ಪೂಜಾರಿ ಅವರಿಗೆ ವಿತ್ತ ಖಾತೆಯ ಸಹಾಯಕ ಸಚಿವರ ಸ್ಥಾನ ನೀಡಿದ್ದರು. ಆಸ್ಕರ್‌ ಫೆರ್ನಾಂಡಿಸ್‌, ಎಂ. ವೀರಪ್ಪ ಮೊಯಿಲಿ ಅವರಂತಹ ನಾಯಕರನ್ನೂ ಬೆಂಬಲಿಸಿದ್ದರು.

ಇಂದಿರಾ ಅವರದ್ದು ಅಪರೂಪದ ಬ್ಲಿಡ್‌ ಗ್ರೂಪ್‌ ಆಗಿತ್ತು. ಪ್ರಧಾನಿಯಂತಹ ರಾಷ್ಟ್ರೀಯ ನಾಯಕರು ಪ್ರವಾಸ ತೆರಳುವಾಗಲೆಲ್ಲ ಆಯಾಯ ಪ್ರದೇಶದಲ್ಲಿ ಅದೇ ರಕ್ತ ವಿಭಾಗದ ಇಬ್ಬರು ಸ್ಥಳೀಯರನ್ನು ಇಲಾಖೆಗಳವರು ತಮ್ಮ ಜತೆಯಲ್ಲಿ ಕರೆದೊಯ್ಯುತ್ತಿದ್ದರು. ಪ್ರಧಾನಿಯ ಪ್ರವಾಸ ಪೂರ್ತಿ ಅವರು ಜತೆಯಲ್ಲಿ ಇರಬೇಕಾಗಿತ್ತು. ಹಾಗಾಗಿ ಮಂಗಳೂರಿನ ಓರ್ವ ಸಿಹಿತಿಂಡಿ ಉದ್ಯಮಿ (ಈಗ ದಿವಂಗತರು) ಹಾಗೂ ಬಂಟ್ವಾಳ ತಾಲೂಕಿನ ಓರ್ವ ಬ್ಯಾಂಕ್‌ ಉದ್ಯೋಗಿಗೆ (ಈಗ ನಿವೃತ್ತರು) ಇಂದಿರಾ ಪ್ರವಾಸದ ಸಂದರ್ಭದಲ್ಲಿ ಬುಲಾವ್‌ ಬರುತ್ತಿತ್ತು.

ಇಂದಿರಾಗೆ ಮಂಗಳೂರಿನ ಹಲ್ವಾ ಮತ್ತು ಮಸಾಲಾ ಗೇರುಬೀಜ ಅತೀ ಮೆಚ್ಚಿನ ತಿನಿಸು ಆಗಿತ್ತು. ಅವರು ಜನತೆಯ ಬಳಿ ಸಾರಿ ಹಸ್ತಲಾಘವ ಮಾಡುತ್ತಿದ್ದರು; ವಿಪರ್ಯಾಸವೆಂದರೆ 31-10-1984 ಹೊಸದಿಲ್ಲಿಯಲ್ಲಿ ಅಂಗರಕ್ಷಕರಿಂದಲೇ ಅವರು ಹತ್ಯೆಯಾದರು. ಮುಂದೆ ಪ್ರಧಾನಿಗಳಿಗೆ ಗರಿಷ್ಠ ಭದ್ರತೆಯನ್ನು ಒದಗಿಸಲು ಈ ದುರ್ಘ‌ಟನೆ ಕಾರಣವಾಯಿತು.

ಪೆತ್ತಕಂಜಿ…!
ಇಂದಿರಾ ಆಡಳಿತದ ಕೊನೆಯ ಹಂತದಲ್ಲಿ ಕಾಂಗ್ರೆಸ್‌ಗೆ ‘ಕೈ’ ಚಿಹ್ನೆ ಲಭ್ಯವಾಗಿತ್ತು. ಅದಕ್ಕೆ ಮೊದಲು ಕಾಂಗ್ರೆಸ್‌ಗೆ ‘ದನ-ಕರು’ ಚಿಹ್ನೆ ಇತ್ತು. ಆಗಿನ ಕಾಂಗ್ರೆಸ್‌ನ ಜನಪ್ರಿಯ ಘೋಷಣೆ:
ಪೆತ್ತಕಂಜಿ ದುಂಬುದ;
ಅವೆನ್‌ ಎಂಕ್ಲ್ ನಂಬುದ!

ಮನೋಹರ ಪ್ರಸಾದ್‌

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.