ಸದ್ವಿಚಾರ ಅನುಷ್ಠಾನಗೊಳಿಸುವುದೇ ವ್ರತಾಚರಣೆ : ಮಾಣಿಲ ಶ್ರೀ
Team Udayavani, Jul 24, 2017, 6:10 AM IST
ವಿಟ್ಲ : ನಿಸ್ವಾರ್ಥ ಮನೋಭಾವದ ಪೂಜೆಗೆ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ. ಸದ್ವಿಚಾರಗಳನ್ನು ಅನುಷ್ಠಾನ
ಗೊಳಿಸುವುದೇ ಪರಿಪೂರ್ಣ ವ್ರತಾಚರಣೆಯಾಗಿದೆ. ಮಾನವೀಯ ಮೌಲ್ಯವನ್ನು ಉಳಿಸುವ ಕಾರ್ಯ ನಡೆಯಬೇಕು. ಪ್ರತಿಯೊಬ್ಬರೂ ಶಾಂತಿ ಕಾಪಾಡಿದರೆ ಸಮಾಜದಲ್ಲಿ ಅಶಾಂತಿಯಿಲ್ಲ ಎಂದು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಅವರು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ರವಿವಾರ 48 ದಿನಗಳ ಸಾಮೂಹಿಕ ಲಕ್ಷ್ಮೀ ಪೂಜೆಯ ಅಂಗವಾಗಿ ವೈದಿಕ, ಧಾರ್ಮಿಕ ಕಾರ್ಯಕ್ರಮಗಳ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಕ್ಷೇತ್ರದ ಟ್ರಸ್ಟಿ ತಾರಾನಾಥ ಕೊಟ್ಟಾರಿ ಮಾತನಾಡಿ ನಮ್ಮನ್ನು ನಾವು ಧಾರ್ಮಿಕತೆಯಲ್ಲಿ ತೊಡಗಿಸಿಕೊಂಡಾಗ ಜೀವನಕ್ಕೆ ಅರ್ಥ ಬರುತ್ತದೆ. ಶ್ರೀಧಾಮ ಮಾಣಿಲದಲ್ಲಿ ಸುಸಂಸ್ಕೃತ ಸಮಾಜ ನಿರ್ಮಾಣಗೊಂಡಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ