ವಿಟ್ಲ ಸುತ್ತಮುತ್ತ ಬಿಗಡಾಯಿಸುತ್ತಿದೆ ಕುಡಿಯುವ ನೀರಿನ ಸಮಸ್ಯೆ

ಬರಿದಾಗಿವೆ ಜಲಮೂಲಗಳು

Team Udayavani, May 20, 2019, 6:00 AM IST

b-7

ಒಕ್ಕೆತ್ತೂರು ಹೊಳೆ ಸಂಪೂರ್ಣ ಬತ್ತಿಹೋಗಿದೆ.

ವಿಟ್ಲ ಪ. ಪಂ. ಅಥವಾ ವಿಟ್ಲ ಹೋಬಳಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದೆ. ಬಿಸಿಲಿನ ಬೇಗೆಗೆ ಇರುವ ಅಲ್ಪಸ್ವಲ್ಪ ನೀರು ಆವಿಯಾಗುತ್ತಿದೆ. ಈ ಬಾರಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ‌. ಮುಂದಿನ ದಿನಗಳಲ್ಲಿ ಮಳೆ ಬಾರದೇ ಇದ್ದಲ್ಲಿ ಟ್ಯಾಂಕರ್‌ ನೀರನ್ನು ಆಶ್ರಯಿಸಬೇಕಾದ ನೂರಾರು ಮನೆಗಳಿವೆ. ಇದು ಜೀವಜಲ ಕ್ಷಾಮದ ಬಗ್ಗೆ ಉದಯವಾಣಿ ಕಂಡುಕೊಂಡ ಸತ್ಯ.

ವಿಟ್ಲ: ವಿಟ್ಲ ಪ.ಪಂ.ಮತ್ತು ಸುತ್ತಮುತ್ತಲ ಗ್ರಾ.ಪಂ.ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿ ಟ್ಯಾಂಕರ್‌ ಮೂಲಕ ಅಧಿಕೃತವಾಗಿ ನೀರು ಪೂರೈಕೆ ಆರಂಭವಾಗಿಲ್ಲ. ಆದರೆ ಮಳೆ ಇನ್ನೂ ಕೆಲವು ದಿನಗಳ ಕಾಲ ಬಾರದಿದ್ದಲ್ಲಿ ಟ್ಯಾಂಕರ್‌ ನೀರು ವಿಟ್ಲ ಪ.ಪಂ.ವ್ಯಾಪ್ತಿಯಲ್ಲಿ ಮಾತ್ರವಲ್ಲ ಸುತ್ತಮುತ್ತಲ ಗ್ರಾ.ಪಂ.ಗಳಿಗೂ ಅನಿವಾರ್ಯವಾಗಬಹುದು.

ವಿಟ್ಲ ಪ.ಪಂ.
ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿ ನಿರ್ಮಿಸಲಾಗಿದ್ದ 8 ಅಣೆಕಟ್ಟೆಗಳು ಬರಿದಾಗಿವೆ. ವಿಟ್ಲ ದೇವಸ್ಥಾನ ರಸ್ತೆ, ಮೇಗಿನಪೇಟೆ, ಶಿವಾಜಿನಗರ, ಪಳಿಕೆ, ಪುಚ್ಚೆಗುತ್ತು, ದರ್ಬೆ ಇತ್ಯಾದಿ ಕಡೆಗಳಲ್ಲಿ ನೀರಿಗೆ ತತ್ವಾರ ಆರಂಭವಾಗಿದೆ. ಬಾವಿಗಳಲ್ಲಿ ನೀರು ಆರಿದೆ. ಕೆಲವು ಕಡೆಗಳಲ್ಲಿ ಪಂ. ನೀರು 2ದಿನಗಳಿಗೊಮ್ಮೆ ತಲುಪುತ್ತಿದೆ. ನೀರು ಬಿಡುವ ಅವಧಿಯನ್ನೂ ಕಡಿತಗೊಳಿಸ ಲಾಗುತ್ತಿದೆ. ಸೇರಾಜೆಯಲ್ಲಿ ಶಾಫಿ ಅವರು ತನ್ನ ಕೊಳವೆಬಾವಿಯಿಂದ ಪೈಪ್‌ಲೈನ್‌ಗೆ ನೀರು ಒದಗಿಸುತ್ತಿರುವುದು ಜನತೆಗೆ ಅನುಕೂಲವಾಗಿದೆ.

ಕನ್ಯಾನ – ಕರೋಪಾಡಿ
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಇರುವ ಕನ್ಯಾನ ಮತ್ತು ಕರೋಪಾಡಿ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬಿಗಡಾಯಿಸಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವಿದ್ಯುತ್‌ ಸಮಸ್ಯೆಯೇ ಪ್ರಮುಖವಾಗಿದ್ದು, ಫಲಾನುಭವಿಗಳಿಗೆ ನೀರು ತಲುಪುತ್ತಿಲ್ಲ. ಶಿರಂಕಲ್ಲು ಇಚ್ಛೆ, ವಿವಿಧ ಕಾಲನಿಗಳು ನೀರಿಲ್ಲದೇ ಕಂಗಾಲಾಗಿವೆ. ಕೆಲವು ಕಡೆಗಳಲ್ಲಿ ಅರ್ಧ ಕಿ.ಮೀ. ದೂರ ನೀರು ಹೊತ್ತೂಯ್ಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾಲೆತ್ತೂರು ಕಂಗಾಲು
ಮಾಣಿಲ ಗ್ರಾಮದಲ್ಲಿ 2 ದಿನಗಳಿಗೊಮ್ಮೆ ನೀರು ತಲುಪುತ್ತಿದೆ. ಪರಸ್ಪರ ಹೊಂದಾಣಿಕೆ ಮೂಲಕ ನೀರಿನ ಸಮಸ್ಯೆ ಬಿಗಡಾಯಿಸದಂತೆ ನಿಭಾಯಿಸಲಾಗು ತ್ತಿದೆ. ಪೆರುವಾಯಿ ಸ್ಥಿತಿಯೂ ಭಿನ್ನವಾಗಿಲ್ಲ. ಸಾಲೆತ್ತೂರು ಗ್ರಾಮದಲ್ಲಿ ನೀರೂ ಇಲ್ಲ, ವಿದ್ಯುತ್‌ ಕೂಡಾ ಇಲ್ಲ.

ಕೊಳ್ನಾಡಿನಲ್ಲಿ 2 ಹೊಸ ಕೊಳವೆ ಬಾವಿ
ಕೊಳ್ನಾಡು ಗ್ರಾಮದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು ಸ್ಥಳೀಯ ಕೊಳವೆಬಾವಿ ಇನ್ನಿತರ ನೀರಿನ ಯೋಜನೆಗಳ ಮೂಲಕ ನೀರು ಸಮರ್ಪಕವಾಗಿ ಪೂರೈಸಲಾಗುತ್ತಿದೆ. ಗಂಭೀರ ಸಮಸ್ಯೆಯಿಲ್ಲ. 2 ಹೊಸ ಕೊಳವೆಬಾವಿಗಳನ್ನು ನಿರ್ಮಿಸಲಾಗಿದೆ. ಪ್ರತಿದಿನವೂ ನೀರು ಒದಗಿಸ ಲಾಗುತ್ತದೆ. ಪಂಪ್‌ ಕೆಟ್ಟುಹೋದರೆ/ವಿದ್ಯುತ್‌ ಕಡಿತ ದಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಸ್ತವ್ಯಸ್ತಗೊಂಡಾಗ ಸಮಸ್ಯೆ ಉಂಟಾಗುತ್ತದೆ ಹೊರತು ಸದ್ಯ ನೀರಿನ ಅಭಾವವಿಲ್ಲ.

ಇತರ ಕಡೆ ಸಮಸ್ಯೆ ಇದೆ
ಪುಣಚ, ವಿಟ್ಲಮುಟ್ನೂರು, ಅಳಿಕೆ, ವಿಟ್ಲಪಟ್ನೂರು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿದೆ. ಮಳೆಗಾಗಿ ಎಲ್ಲೆಡೆ ಪ್ರಾರ್ಥನೆ ಆರಂಭವಾಗಿದೆ. ನೀರಿಲ್ಲದೇ ಗಂಭೀರ ಸ್ಥಿತಿ ನಿರ್ಮಾಣವಾಗಿದೆ. ಅಕ್ಕಪಕ್ಕದಲ್ಲಿ ನೀರಿನ ಮೂಲ ಹೊಂದಿದವರು ಸ್ವಲ್ಪ ಮಟ್ಟಿಗೆ ನೀರಿನ ಸಮಸ್ಯೆಯನ್ನು ನಿಭಾಯಿಸುತ್ತಿದ್ದಾರೆ.

ಕೃಷಿ ಕಷ್ಟ
ಕೃಷಿಗೂ ನೀರು ಇಲ್ಲದಾಗಿದೆ. ಗಂಟೆಗಟ್ಟಲೆ ಹಾರಾ ಡುತ್ತಿದ ಸ್ಪ್ರಿಂಕ್ಲರ್‌ಗಳು ಅವಧಿಯನ್ನು ಕಡಿತಗೊಳಿಸಿವೆ. ಅಡಿಕೆ, ತೆಂಗು, ಬಾಳೆಗಳು ಕೆಂಪಗಾಗಿವೆ.

 ಎಲ್ಲರೂ ನೀರನ್ನು ಹಿತಮಿತವಾಗಿ ಬಳಸಬೇಕು
ಪಶ್ಚಿಮ ಘಟ್ಟದಲ್ಲಿ ಮರ ಕಡಿದ ಪರಿಣಾಮ, ನೇತ್ರಾವತಿ ನದಿ ತಿರುಗುವ ಯೋಜನೆಗಳನ್ನು ರೂಪಿಸಿದ ಪರಿಣಾಮ ಏನೆಂಬುದನ್ನು ಈಗ ಅರ್ಥೈಸುವುದಕ್ಕೆ ಸಾಧ್ಯವಾಗುತ್ತದೆ. ಪ್ರತಿಯೊಬ್ಬರೂ ಗಿಡ ನೆಟ್ಟು, ಬೆಳೆಸಬೇಕು. ನೀರಿಂಗಿಸುವ ಯೋಜನೆಯನ್ನು ಜಾರಿಗೊಳಿಸ ಬೇಕು. ಎಲ್ಲರೂ ನೀರನ್ನು ಹಿತಮಿತವಾಗಿ ಬಳಸಬೇಕು. ಇತರರಿಗೆ ಉಪಕರಿಸಬೇಕು.
 - ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ

 ಕೇಪುವಿಗೆ ಟ್ಯಾಂಕರ್‌ ನೀರು ಅನಿವಾರ್ಯ
ಕೇಪು ಗ್ರಾಮದ ನೀರ್ಕಜೆ, ಕುಕ್ಕೆಬೆಟ್ಟು, ಕುದ್ದುಪದವು, ಕುಂಡಕೋಳಿ, ಅಡ್ಯನಡ್ಕ ಮೊದಲಾದೆಡೆ ಎರಡು ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿದೆ. ಕೊಳವೆಬಾವಿಗಳಲ್ಲಿ ನೀರಿಲ್ಲ. ಹೊಸ ಎರಡು ಕೊಳವೆಬಾವಿಗಳೂ ಪ್ರಯೋಜನವಾಗಿಲ್ಲ. ಮಳೆ ತಡವಾದರೆ ಟ್ಯಾಂಕರ್‌ ನೀರು ಅನಿವಾರ್ಯ. ಆದರೆ ನೀರು ಪೂರೈಕೆಗೆ ಟ್ಯಾಂಕರ್‌ ದೊರಕುವುದು ಕಷ್ಟವಾಗಿದೆ. ಬಿಲ್‌ ಪಾವತಿ ವ್ಯವಸ್ಥೆಯೂ ಸಂದಿಗ್ಧ ಸ್ಥಿತಿಯನ್ನು ಉಂಟುಮಾಡುತ್ತದೆ.
– ತಾರಾನಾಥ ಆಳ್ವ ಕುಕ್ಕೆಬೆಟ್ಟು
ಕೇಪು ಗ್ರಾ.ಪಂ. ಅಧ್ಯಕ್ಷರು

 ಕೊಳವೆಬಾವಿಯಲ್ಲಿ ನೀರು ಕಡಿಮೆ
ಕುಡಿಯುವುದಕ್ಕೆ ಈಗ ನೀರಿದೆ. ಮಳೆ ಶೀಘ್ರದಲ್ಲಿ ಬರದಿದ್ದಲ್ಲಿ ಕಷ್ಟಪಡಬೇಕಾಗುತ್ತದೆ. ಕೊಳವೆಬಾವಿಯಲ್ಲಿ ನೀರು ಕಡಿಮೆಯಾಗಿದೆ. ಅಡಿಕೆ, ತೆಂಗಿನ ಮರಗಳು ಬಾಡಿ ಹೋಗಿವೆ.
– ಪಶುಪತಿ ಭಟ್‌, ಬಾಳೆಕೋಡಿ, ಕನ್ಯಾನ

 ಬಾವಿಗಳು ಕಡಿಮೆ
ವಿಟ್ಲ ಪ.ಪಂ. ವ್ಯಾಪ್ತಿಯ ಆವೆತ್ತಿಕಲ್ಲು ಒಕ್ಕೆತ್ತೂರು ಮಾಡ ಸುತ್ತಮುತ್ತ ಬಾವಿಗಳು ಕಡಿಮೆಯಿದೆ. ಎಲ್ಲರೂ ಪಂ. ನೀರನ್ನೇ ಅವಲಂಬಿಸಿದ್ದಾರೆ. ಸದ್ಯಕ್ಕೆ ನೀರು ಬರುತ್ತಿದೆ. ಆದರೆ ಹಲವರು ನೀರಿನ ಸಮಸ್ಯೆ ಅನುಭವಿಸುತ್ತಿದ್ದಾರೆ. ವಿದ್ಯುತ್‌ ಕಡಿತ, ಪಂಪ್‌ ಕೆಟ್ಟುಹೋದಾಗ ಶೋಚನೀಯ ಸ್ಥಿತಿಯಿದೆ.
– ಸಿ.ಕೆ. ಗೌಡ, ವಿಟ್ಲ

ನಿವಾಸಿಗಳ ಬೇಡಿಕೆಗಳು
·  ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
·  ವಿದ್ಯುತ್‌ ಕಡಿತದ ಸಮಸ್ಯೆಯನ್ನು ನಿವಾರಿಸಬೇಕು.
·  ಸಾರ್ವಜನಿಕ ಕೆರೆಗಳ ಹೂಳೆತ್ತಬೇಕು.
·  ಗ್ರಾಮಗಳಲ್ಲಿ ಮಳೆಗಾಲದಲ್ಲಿ ನೀರಿಂಗಿಸಲು ಕ್ರಮ ಕೈಗೊಳ್ಳಬೇಕು.

ಉದಯವಾಣಿ ಆಗ್ರಹ
ವಿಟ್ಲ ಪ.ಪಂ. ಅಥವಾ ವಿಟ್ಲ ಹೋಬಳಿ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಪ್ರಯತ್ನ ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಆಗಬೇಕು. ಕೊಳವೆಬಾವಿಗಳಲ್ಲಿ ನೀರಿನ ಮಟ್ಟ ಕುಸಿದಿರುವುದರಿಂದ ಬಾವಿ, ಕೆರೆ, ಅಣೆಕಟ್ಟೆಗಳನ್ನು ಹೆಚ್ಚು ಕಡೆಗಳಲ್ಲಿ ನಿರ್ಮಿಸಬೇಕು. ನೀರಿನ ಸಮಸ್ಯೆ ಜಾಸ್ತಿ ಇರುವ ಪ್ರದೇಶಕ್ಕೆ ನೀರಿನ ಯೋಜನೆಗಳನ್ನು ಅನುಷ್ಠಾನಿಸಬೇಕು. ಪ್ರತಿಯೊಬ್ಬರೂ ನೀರನ್ನು ಮಿತವಾಗಿ ಬಳಸುವ ಬಗ್ಗೆ ಜಾಗೃತರಾಗಬೇಕು.

-  ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.