ಪರಿಹಾರ ಕಾಣದ ವಿದ್ಯಾರ್ಥಿಗಳ ಸಮಸ್ಯೆ

ದಿನಕ್ಕೆ 100 ರೂ. ಕನಿಷ್ಠ ಸಂಭಾವನೆ; ಬದಲಿ ಶಿಕ್ಷಕರಾಗಿ ಬರಲೊಪ್ಪದ ನಿವೃತ್ತರು !

Team Udayavani, Jan 29, 2020, 7:58 AM IST

shu-43

ಮಂಗಳೂರು: ದೀರ್ಘ‌ ರಜೆಯಲ್ಲಿ ತೆರಳುವ ಶಿಕ್ಷಕರ ಸ್ಥಾನವನ್ನು ನಿವೃತ್ತರ ಮೂಲಕ ತುಂಬುವ ಸರಕಾರದ ಯೋಜನೆಗೆ ಉತ್ಸಾಹ ಪೂರ್ಣ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಸರಕಾರ ದಿನಕ್ಕೆ 100 ರೂ.ಗಳ ತೀರಾ ಕನಿಷ್ಠ ಸಂಭಾವನೆ ನಿಗದಿಪಡಿಸಿ ರುವುದೇ ಇದಕ್ಕೆ ಕಾರಣ. ಇದರಿಂದ ವಿದ್ಯಾರ್ಥಿಗಳ ಸಮಸ್ಯೆ ಪರಿಹಾರ ಕಾಣದಾಗಿದೆ.

ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರು ಹೆರಿಗೆ, ಅನಾರೋಗ್ಯ ಮತ್ತಿತರ ಕಾರಣಗಳಿಂದ ದೀರ್ಘ‌ ರಜೆಯಲ್ಲಿ ತೆರಳಿದರೆ ಪಾಠಕ್ಕೆ ತೊಂದರೆಯಾಗದಿರಲೆಂದು ನಿವೃತ್ತ ಶಿಕ್ಷಕರನ್ನು ನೇಮಿಸಲು ಸರಕಾರ ಅವಕಾಶ ಕಲ್ಪಿಸಿದೆ. ಆದರೆ ಸಂಭಾವನೆ ತೀರಾ ಕಡಿಮೆ ಎಂಬ ಕಾರಣಕ್ಕೆ ನಿವೃತ್ತರು ಮನಸ್ಸು ಮಾಡುತ್ತಿಲ್ಲ. ಇದರಿಂದಾಗಿ ಬಿಡುಗಡೆಯಾದ ಅನುದಾನವೂ ಖರ್ಚಾಗದೆ ಬೊಕ್ಕಸಕ್ಕೆ ಮರಳುತ್ತಿದೆ.

3 ಲಕ್ಷ ರೂ. ಅನುದಾನ
ಯೋಜನೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಮುಖಾಂತರ ಸರಕಾರ ವಾರ್ಷಿಕ ಗರಿಷ್ಠ 3 ಲಕ್ಷ ರೂ. ಬಿಡುಗಡೆ ಮಾಡುತ್ತದೆ. ಸರಕಾರದ 100 ರೂ.ನೊಂದಿಗೆ ಎಸ್‌ಡಿಎಂಸಿ ಮತ್ತು ಮೇಲುಸ್ತುವಾರಿ ಸಮಿತಿಯವರು, ಊರ ದಾನಿಗಳು ಸೇರಿ ಹಣ ಒಟ್ಟು ಮಾಡಿ ದಿನಕ್ಕೆ 500 ರೂ. ವೇತನ ನೀಡಿರುವ ಉದಾಹರಣೆ ಕೆಲವೆಡೆ ಇದೆ. ಆದರೆ ಬಹುತೇಕ ಶಾಲೆಗಳಲ್ಲಿ ಹೀಗಿಲ್ಲ. ಹೀಗಾಗಿ ಕೆಲವು ಜಿಲ್ಲೆಗಳಲ್ಲಿ ಸರಕಾರದ ಅನುದಾನ ಅರ್ಧದಷ್ಟು ಖರ್ಚಾದರೆ, ಇನ್ನುಳಿದ ಕಡೆ ಸರಕಾರಕ್ಕೆ ವಾಪಸಾಗುತ್ತಿದೆ.
ದ.ಕ., ಉಡುಪಿಗೆ 5.45 ಲಕ್ಷ ರೂ. 2019-20ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಸುಮಾರು 5.45 ಲಕ್ಷ ರೂ. ಬಿಡುಗಡೆಯಾಗಿದೆ. ಇದರಲಿಲ್ಲ ದ.ಕ. ಜಿಲ್ಲೆಗೆ 2.45 ಲಕ್ಷ ರೂ., ಉಡುಪಿಗೆ ಸುಮಾರು 3 ಲಕ್ಷ ರೂ. ಇದರಲ್ಲಿ ಬಹುತೇಕ ಮೊತ್ತ ಬಳಕೆಯಾಗಿಲ್ಲವಾದ್ದರಿಂದ ಹಿಂದಿರುಗಿಸಲಾಗಿದೆ ಎಂದು ಉಭಯ ಜಿಲ್ಲೆಗಳ ಶಿಕ್ಷಣ ಇಲಾಖಾಧಿಕಾರಿಗಳು ಹೇಳಿದ್ದಾರೆ.

ನಿವೃತ್ತ ಶಿಕ್ಷಕರನ್ನು ನೇಮಿಸುವುದಕ್ಕೆ ಉಡುಪಿ ಜಿಲ್ಲೆಗೆ 3 ಲಕ್ಷ ರೂ. ಬಿಡುಗಡೆಯಾಗಿದೆ. ಕೆಲವು ಶಾಲೆಗಳಲ್ಲಿ ಎಸ್‌ಡಿಎಂಸಿ, ಊರವರು ಸೇರಿ ಹಣ ಹೊಂದಿಸಿ ನಿವೃತ್ತರನ್ನು ನೇಮಕ ಮಾಡಿಕೊಂಡಿದ್ದಾರೆ. ಈ ವರ್ಷ ಇಲ್ಲಿಯ ವರೆಗೆ 1.5 ಲಕ್ಷ ರೂ. ಖರ್ಚಾಗಿದೆ.
-ಶೇಷಶಯನ ಕಾರಿಂಜ, ಉಡುಪಿ ಡಿಡಿಪಿಐ

ದಿನಕ್ಕೆ 100 ರೂ. ಸಂಭಾವನೆ ಪಡೆದು ಕೆಲಸ ಮಾಡಲು ನಿವೃತ್ತ ಶಿಕ್ಷಕರು ಒಪ್ಪುತ್ತಿಲ್ಲ. ಆದರೆ ನಿವೃತ್ತಿಯ ಅಂಚಿನಲ್ಲಿರುವ ಶಿಕ್ಷಕರನ್ನು ಅದೇ ಸಂಬಳದಲ್ಲಿ ಕೆಲವು ತಿಂಗಳ ಕಾಲ ಮುಂದುವರಿಸಲು ಅವಕಾಶವಿದೆ.
-ಮಲ್ಲೇಸ್ವಾಮಿ, ದ.ಕ. ಡಿಡಿಪಿಐ

 ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.