ದ.ಕ.:ಪ್ರಸ್ತುತ ನೀರಿದೆ; ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಸೂಚನೆ


Team Udayavani, Feb 18, 2017, 3:45 AM IST

rai-soochane.jpg

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ನೀರಿನ ಸಮಸ್ಯೆ ಎದುರಾಗಿಲ್ಲವಾದರೂ ಮುಂಬರುವ ದಿನದಲ್ಲಿ ಯಾವುದೇ ಸಮಸ್ಯೆ ಉದ್ಭವಿಸದ ಹಾಗೆ ಮುನ್ನೆಚ್ಚರಿಕೆ ಕ್ರಮಗಳನ್ನು ದ.ಕ. ಜಿಲ್ಲಾಡಳಿತ ಕೈಗೊಳ್ಳಬೇಕು ಹಾಗೂ ಕುಡಿಯುವ ನೀರಿಗಾಗಿ ಹೊಸದಾಗಿ ಕೈಗೊಳ್ಳುವ ಎಲ್ಲ ರೀತಿಯ ಕಾಮಗಾರಿಗಳನ್ನು ತುರ್ತು ನೆಲೆಯಲ್ಲಿ ಹಮ್ಮಿಕೊಳ್ಳಬೇಕು ಎಂದು ಸಚಿವ ಬಿ. ರಮಾನಾಥ ರೈ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಮಂಗಳೂರು ಹಾಗೂ ಬಂಟ್ವಾಳ ತಾಲೂಕು ಬರಪೀಡಿತ ತಾಲೂಕು ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಅಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ಶುಕ್ರವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಭಾಗವಹಿಸಿ ಅವರು ಅಧಿಕಾರಿಗಳಿಗೆ ಸಲಹೆ, ಸೂಚನೆ ನೀಡಿದರು. 

ಯಾವುದೇ ವರ್ಷದಲ್ಲಿ ಕಂಡುಕೇಳರಿಯದ ರೀತಿ ದ.ಕ. ಜಿಲ್ಲೆಯ ಎರಡು ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿದೆ. ಹೀಗಾಗಿ ಈ ಎರಡು ತಾಲೂಕು ಮತ್ತು ಅದರ ಜತೆಗೆ ಉಳಿದ ತಾಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಇತರ ವ್ಯವಸ್ಥೆಗಳನ್ನು ಅಧಿಕಾರಿಗಳು ತುರ್ತು ನೆಲೆಯಲ್ಲಿ  ಕೈಗೊಳ್ಳಬೇಕು. ಇದರಲ್ಲಿ ಯಾವುದೇ ಲೋಪಗಳಾಗಬಾರದು ಎಂದರು.

ಸದ್ಯಕ್ಕೆ ಮಂಗಳೂರಿಗೆ ನೀರಿನ ಕೊರತೆಯಿಲ್ಲ ದ.ಕ. ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್‌ ಮಾತನಾಡಿ, ಮಂಗಳೂರು ಮಹಾನಗರ ಪಾಲಿಕೆಗೆ ಸರಬರಾಜಾಗುವ ತುಂಬೆ ಡ್ಯಾಂನಲ್ಲಿ ಈಗ 5 ಮೀಟರ್‌ ನೀರು ನಿಲುಗಡೆ ಆದ ಕಾರಣ 7.65 ಎಂಸಿಎಂ ಒಟ್ಟು ಲಭ್ಯತೆ ಇದೆ. ಒಳಹರಿವು ಕೂಡ ಇದೆ. ಪ್ರತೀ ದಿನ ಇಲ್ಲಿಂದ 160 ಎಂಎಲ್‌ಡಿ ನೀರು ಪಂಪಿಂಗ್‌ ಮಾಡಧಿಲಾಗುತ್ತಿದೆ. ಈಗಿನ ಅಂದಾಜಿನ ಪ್ರಕಾರ ಸದ್ಯಕ್ಕೆ ನೀರಿನ ಕೊರತೆ ಎದುರಾಗದು. ಆದರೆ ಒಳಹರಿವು ಕಡಿಮೆ ಆದರೆ ಮುಂದೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಉಳಿದಂತೆ ಎರಡು ತಾಲೂಕುಗಳ ಇತರ ಭಾಗದಲ್ಲಿ ನೀರಿನ ಸಮಸ್ಯೆ ಎದುರಾಗಿಲ್ಲ ಎಂದರು.

ಬೇಸಗೆ ಕಾಲದಲ್ಲಿ ನೀರಿನ ಸಮಸ್ಯೆ ಎದುರಾಗಬಹುದಾದ ಮಂಗಳೂರು, ಬಂಟ್ವಾಳದ ಸ್ಥಳಗಳನ್ನು ಈಗಾಗಲೇ ಜಿಲ್ಲಾಡಳಿತ ಗುರುತಿಸಿದೆ. ಇದರಂತೆ ಮಂಗಳೂರು ಪಾಲಿಕೆಯ 3 ವಾರ್ಡ್‌ಗಳ 10ರಿಂದ 15 ಮನೆಗಳು, ಉಳ್ಳಾಲ ನಗರಸಭೆಯ 12 ವಾರ್ಡ್‌ಗಳು, ಬಂಟ್ವಾಳ ಪುರಸಭೆಯ 9, ಮೂಲ್ಕಿ ನಗರಸಭೆಯ 17, ಕೋಟೆಕಾರು ನ.ಪಂ.ನ 11 ಹಾಗೂ ವಿಟ್ಲ ನ.ಪಂ.ನ 16(ಭಾಗಶಃ) ವಾರ್ಡ್‌ಗಳನ್ನು ಗುರುತಿಸಲಾಗಿದೆ ಎಂದರು. 

ಅಪರ ಜಿಲ್ಲಾಧಿಕಾರಿ ಕುಮಾರ್‌ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಟ್ಯಾಂಕರ್‌ ಮೂಲಕ ಪೂರೈಸಲು ಪ್ರತೀ ತಾಲೂಕು ಪಂಚಾಯತ್‌ಗೆ 10 ಲಕ್ಷ ರೂ. ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ 5 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಶಾಸಕ ಮೊದಿನ್‌ ಬಾವ ಉಪಸ್ಥಿತರಿದ್ದರು.

ಕುಡಿಯುವ ನೀರು: 933 ಹೊಸ ಕಾಮಗಾರಿ- 19 ಕೋ.ರೂ. ಪ್ರಸ್ತಾವನೆ
ಡಾ| ಎಂ.ಆರ್‌. ರವಿ ಮಾತನಾಡಿ, ಕುಡಿಯುವ ನೀರಿಗೆ ಸಂಬಂಧಪಟ್ಟು ಜಿಲ್ಲೆಯಲ್ಲಿ 933 ಹೊಸ ಕಾಮಗಾರಿಗಳನ್ನು ಮಾಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದರಂತೆ ಮಂಗಳೂರಿನಲ್ಲಿ 280, ಬಂಟ್ವಾಳ 348, ಪುತ್ತೂರು 79, ಸುಳ್ಯ 87 ಹಾಗೂ ಬೆಳ್ತಂಗಡಿಯಲ್ಲಿ 139 ಕಾಮಗಾರಿ ಕೈಗೊಳ್ಳಬಹುದು. ಇದಕ್ಕಾಗಿ ಒಟ್ಟು 19 ಕೋ. ರೂ. ಪ್ರಸ್ತಾವನೆ ಸಿದ್ಧಪಡಿಸಿ ಸರಕಾರಕ್ಕೆ ಕಳುಹಿಸಲಾಗುವುದು. ಬರಪೀಡಿತ ಮಂಗಳೂರು ತಾಲೂಕಿನ 19 ಕೆರೆ ಹಾಗೂ ಬಂಟ್ವಾಳ ತಾಲೂಕಿನ 42 ಕೆರೆಗಳನ್ನು ಒಟ್ಟು 13 ಲಕ್ಷ ರೂ.ಗಳಲ್ಲಿ ಪುನಶ್ಚೇತನ ಕೈಗೊಳ್ಳಲು ನಿರ್ಧರಿಸಧಿಲಾಗಿದೆ ಎಂದರು.

ತುಂಬೆ 6 ಮೀ. ನೀರು ನಿಲುಗಡೆ; ಬಜೆಟ್‌ನಲ್ಲಿ  ಅನುದಾನ ನಿರೀಕ್ಷೆ
ಸಚಿವ ರಮಾನಾಥ ರೈ ಮಾತನಾಡಿ, ತುಂಬೆ ವೆಂಟೆಡ್‌ ಡ್ಯಾಂನಲ್ಲಿ ಈಗಾಗಲೇ 5 ಮೀಟರ್‌ ನೀರು ನಿಲ್ಲಿಸಲಾಗಿದ್ದು, 8 ಮೀಟರ್‌ ವರೆಗೆ ನೀರು ನಿಲ್ಲಿಸಲು ಅವಕಾಶವಿದೆ. ಆದರೆ ನಮ್ಮ ಅಗತ್ಯಕ್ಕೆ ಅನುಗುಣವಾಗಿ 6 ಮೀಟರ್‌ನಷ್ಟು ನೀರು ನಿಲುಗಡೆ ಮಾಡಲು ನಿರ್ಧರಿಸಲಾಗಿದೆ. ಇದರಿಂದ ಮತ್ತೆ ಭೂಮಿ ಮುಳುಗಡೆಯಾಗುವುದರಿಂದ ಮುಂದಿನ ಬಜೆಟ್‌ನಲ್ಲಿ ಇದಕ್ಕಾಗಿ 32 ಕೋ. ರೂ. ಅನುದಾನ ಸಿಗುವ ಸಾಧ್ಯತೆ ಇದೆ. ಇದರ ಪ್ರಕಟನೆ ಆದ ಬಳಿಕ 6 ಮೀಟರ್‌ ನೀರು ನಿಲುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು. 

ಗ್ರಾಮಕ್ಕೊಂದು ವೆಂಟೆಡ್‌ ಡ್ಯಾಂ…!
ದ.ಕ. ಜಿ. ಪಂ. ಸಿಇಒ ಡಾ| ಎಂ.ಆರ್‌. ರವಿ ಮಾತನಾಡಿ, 1 ಗ್ರಾಮಕ್ಕೆ ಕನಿಷ್ಠ 1 ವೆಂಟೆಡ್‌ ಡ್ಯಾಂ ಸೌಲಭ್ಯ ನೀಡುವ ಮೂಲಕ ಆ ಗ್ರಾಮದಲ್ಲಿ ನೀರಿನ ಸಂಗ್ರಹಕ್ಕೆ ಒತ್ತು ನೀಡುವ ಹೊಸ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಗ್ರಾಮದಲ್ಲಿ ಗರಿಷ್ಠ 5 ವೆಂಟೆಡ್‌ ಡ್ಯಾಂ ಕಟ್ಟಬಹುದು. ನರೇಗಾ ಯೋಜನೆಯಡಿ ಇದರ ಕಾಮಗಾರಿ ನಡೆಸಬೇಕು. 1 ಡ್ಯಾಂಗೆ 2.30 ಲಕ್ಷ ರೂ. ವೆಚ್ಚ ಎಂದು ಮಾದರಿ ಕ್ರಿಯಾಯೋಜನೆಯಲ್ಲಿ ಅಂದಾಜಿಸಲಾಗಿದೆ. ಇದನ್ನು ಸರಕಾರದ ಒಪ್ಪಿಗೆಗಾಗಿ ಕಳುಹಿಸಲಾಗಿದೆ ಎಂದು ಅವರು ತಿಳಿಸಿದರು. 

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.