ಜೀವನ ಮೌಲ್ಯದಿಂದ ಭವಿಷ್ಯ ಉಜ್ವಲ : ಡಾ| ವೀರೇಂದ್ರ ಹೆಗ್ಗಡೆ
Team Udayavani, Apr 20, 2019, 6:00 AM IST
ಬೆಳ್ತಂಗಡಿ: ವಿದ್ಯಾರ್ಥಿಗಳು ಬದುಕಿನಲ್ಲಿ ಉತ್ತಮ ಜೀವನ ಮೌಲ್ಯ ಅಳವಡಿಸಿಕೊಂಡು ಆದರ್ಶ ಪ್ರಜೆಯಾಗಿ, ಜವಾಬ್ದಾರಿಯುತ ನಾಗರಿಕನಾಗಿ ತನ್ನ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಉಜಿರೆಯ ರತ್ಮಮಾನಸದ 2018-19ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ ಪೂರೈಸಿದ 27 ವಿದ್ಯಾರ್ಥಿಗಳು ಭೇಟಿ ಮಾಡಿದ ಸಂದರ್ಭ ಅವರು ವಿದ್ಯಾರ್ಥಿಗಳಿಗೆ ಅರ್ಹತಾಪತ್ರ ವಿತರಿಸಿ ಶುಭಹಾರೈಸಿದರು. ಅಂಕ ಗಳಿಕೆಯೊಂದೇ ಮೂಲ ಗುರಿಯಾಗದೆ ಸವಾಲುಗಳನ್ನು ಎದುರಿಸಿ ಜೀವನ ಶಿಕ್ಷಣದ ಉದಾತ್ತ ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.
ಈ ವೇಳೆ ರತ್ನಮಾನಸದಲ್ಲಿ ಮೂರು ವರ್ಷಗಳಲ್ಲಿ ಕಲಿತ ಜೀವನ ಶಿಕ್ಷಣದ ಅನುಭವವನ್ನು ವಿದ್ಯಾರ್ಥಿಗಳು ಹಂಚಿಕೊಂಡರು. ರತ್ನಮಾನಸದ ಪಾಲಕ ಕೃಷ್ಣ ಶೆಟ್ಟಿ, ಶಿಕ್ಷಕ ರವಿಚಂದ್ರ ಹಾಗೂ ಮಕ್ಕಳ ಹೆತ್ತವರು ಉಪಸ್ಥಿತರಿದ್ದರು.
ರತ್ನಮಾನಸದಲ್ಲಿ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ| ಎಸ್. ಪ್ರಭಾಕರ ಮತ್ತು ಕಾರ್ಯದರ್ಶಿ ಡಾ| ಬಿ. ಯಶೋವರ್ಮ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ರತ್ನಮಾನಸದಿಂದ ವಿದ್ಯಾರ್ಥಿಗಳಿಗೆ ವಿದಾಯಕೋರಿ, ರತ್ನಮಾನಸದ ಹಿರಿಯ ವಿದ್ಯಾರ್ಥಿಗಳ ಸಂಘಕ್ಕೆ ಅವರನ್ನು ಸೇರ್ಪಡೆಗೊಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ