ರಸ್ತೆಗೆ ಬಿದ್ದ ಮರ ತೆರವು ನೆಪದಲ್ಲಿ  ಸುಲಿಗೆ: ಆರೋಪ 


Team Udayavani, Mar 21, 2018, 3:12 PM IST

21-March-6.jpg

ಉಪ್ಪಿನಂಗಡಿ: ಸೋಮವಾರ ಸಂಜೆ ಗಾಳಿ-ಮಳೆಗೆ ಪೆರಿಯಶಾಂತಿ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದಿದ್ದ ಮರವನ್ನು ತೆರವು ಮಾಡಿದ ತಂಡವೊಂದು, ಬಳಿಕ ವಾಹನ ಮಾಲಕರು ಹಾಗೂ ಚಾಲಕರಿಂದ ಬಲವಂತವಾಗಿ ಹಣ ವಸೂಲಿ ಮಾಡಿದ್ದಾರೆ ಎನ್ನಲಾದ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಪರ್ಕ ಸಾಧಿಸುವ ಪೆರಿಯಶಾಂತಿ ರಸ್ತೆ ಬದಿಯಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿರುವ ಕೆಲವರು ಯಂತ್ರದ ಸಹಾಯದಿಂದ ಮರ ಕತ್ತರಿಸಿ, ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದ್ದರು. ಅರಣ್ಯ ಇಲಾಖೆ ಮಾಡಬೇಕಾದ ಕೆಲಸವನ್ನು ಇವರು ಮಾಡಿದ್ದು ಶ್ಲಾಘನೀಯವಾದರೂ, ಇದನ್ನೇ ಮುಂದಿಟ್ಟುಕೊಂಡು ವಾಹನಗಳ ಮಾಲಕರಿಂದ ಹಣ ವಸೂಲಿ ಮಾಡಿದ್ದಾರೆ. ವಾಹನಗಳ ಗಾತ್ರವನ್ನು ಅನುಸರಿಸಿ ದರ ನಿಗದಿ ಮಾಡಿದ್ದಾರೆ. ಯಾತ್ರಾರ್ಥಿಗಳನ್ನೇ ಹೆಚ್ಚು ಗುರಿಯಾಗಿಸಿಕೊಂಡಿದ್ದರು ಎಂಬ ಆರೋಪ ವ್ಯಕ್ತವಾಗಿದೆ. ವ್ಯಕ್ತಿಯೊಬ್ಬರು ಹಣ ವಸೂಲಿಯ ದೃಶ್ಯಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ನ್ಯಾಯ ಕೇಳಿದ ಹಿನ್ನೆಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.

ಸುಲಿಗೆ ನಿತ್ಯ ನಿರಂತರ
ಕಾಡು ಪ್ರದೇಶವಾಗಿರುವ ಪೆರಿಯಶಾಂತಿ ರಸ್ತೆಯ ಇಕ್ಕೆಲಗಳಲ್ಲಿ ಹಣ್ಣು ವ್ಯಾಪಾರದ ಸೋಗಿನಲ್ಲಿ ಠಿಕಾಣಿ ಹೂಡಿರುವ ಈ ವ್ಯಕ್ತಿಗಳು ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬರುವ ಯಾತ್ರಿಕರನ್ನು ಶೋಷಣೆ ಮಾಡುವ ದೂರುಗಳು ಕೇಳಿ ಬರುತ್ತಲೇ ಇವೆ. ದುಬಾರಿ ದರ ವಸೂಲಿ, ಪ್ರತಿಭಟಿಸಿದರೆ ಗುಂಪುಗೂಡಿ ಬೆದರಿಸುವುದು ಇತ್ಯಾದಿಗಳನ್ನು ಮಾಡುತ್ತಾರೆ. ಅಪಾಯಕ್ಕೆ ಅಂಜಿ ಯಾತ್ರಾರ್ಥಿಗಳು ಕೇಳಿದಷ್ಟು ಹಣ ಕೊಟ್ಟು ಜಾಗ ಖಾಲಿ ಮಾಡುತ್ತಾರೆ. ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ದಂಪತಿಗಳು, ಪ್ರೇಮಿಗಳಿಗೆ ಈ ರಸ್ತೆ ಅಪಾಯಕಾರಿಯಾಗಿದೆ. ಆದರೆ, ಬೆರಳೆಣಿಕೆ ಪ್ರಕರಣಗಳಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.

ವಾಹನಗಳ ಮಾಲಕರಿಂದ ಕೆಲವರು ಹಣ ವಸೂಲಿ ಮಾಡಿರುವ ಕುರಿತು ಉಪ್ಪಿನಂಗಡಿ ಪಿಎಸ್‌ಐ ನಂದಕುಮಾರ್‌ ಅವರನ್ನು ಪ್ರಶ್ನಿಸಿದಾಗ, ಯಾತ್ರಿಗಳಿಂದ ಹಣ ದೋಚಿದ ಪ್ರಕರಣ ಗಮನಕ್ಕೆ ಬಂದೊಡನೆ ಸ್ಥಳಕ್ಕೆ ತೆರಳಿದ್ದೇವೆ. ಈ ವೇಳೆ ದುಷ್ಕರ್ಮಿಗಳು ಪರಾರಿಯಾಗಿದ್ದು, ಸೂಕ್ತ ನಿಗಾ ವಹಿಸಲಾಗಿದೆ. ಪೆರಿಯಶಾಂತಿ ಭಾಗದಲ್ಲಿ ನಾನಾ ಕಾರಣಕ್ಕೆ ಯಾತ್ರಾರ್ಥಿಗಳನ್ನು ದೋಚುತ್ತಿರುವ ವಿಚಾರವೂ ಪೊಲೀಸರ ಗಮನಕ್ಕೆ ಬಂದಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಆರೋಪಿಗಳನ್ನು ಬಂಧಿಸಿ
ಪೆರಿಯಶಾಂತಿ ರಸ್ತೆಯಲ್ಲಿ ವ್ಯಾಪಾರದ ನೆಪದಲ್ಲಿ ಸುಲಿಗೆ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಕಾರಣ ಇಂತಹ ಘಟನೆ ಸಂಭವಿಸಿದೆ. ಪಂಚಾಯತ್‌ ಅನುಮತಿ ಪತ್ರವನ್ನು ಗ್ರಾಹಕರಿಗೆ ಕಾಣುವಂತೆ ಪ್ರದರ್ಶಿಸುವುದು, ಬಿಲ್‌ ನೀಡಿಕೆ ಕಡ್ಡಾಯಗೊಳಿಸಿದರೆ ಸುಲಿಗೆ ನಿಯಂತ್ರಣಕ್ಕೆ ಬಂದೀತು. ಪೊಲೀಸ್‌ ಸಹಾಯವಾಣಿ ಸಂಖ್ಯೆಯನ್ನು ಫ‌ಲಕಗಳಲ್ಲಿ ರಸ್ತೆಯುದ್ದಕ್ಕೂ ಅಳವಡಿಸಬೇಕು. ನೀಡಿದ ದೂರಿಗೆ ಪ್ರಾಮಾಣಿಕ ಕ್ರಮ ಕೈಗೊಳ್ಳುವಂತಾಗಬೇಕು. ಸೋಮವಾರದ ಘಟನೆಯ ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸಿ, ಆರೋಪಿಗಳನ್ನು ಬಂಧಿಸಬೇಕು.
– ಮಹೇಶ್‌ ಬಜತ್ತೂರು
ಸಾಮಾಜಿಕ ಮುಂದಾಳು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.