‘ಜೀವ ರಕಣೆಯ ಹೊಣೆ ವಹಿಸಿಕೊಳ್ಳುವುದು ಶ್ಲಾಘನೀಯ’


Team Udayavani, Nov 20, 2017, 3:01 PM IST

20-Nov-12.jpg

ಕೊಂಬೆಟ್ಟು : ರಕ್ತದಾನ ಅತ್ಯಂತ ಮಹತ್ವದ ದಾನ. ಕಷ್ಟದಲ್ಲಿರುವವರ ಜೀವ ರಕ್ಷಣೆಯ ಹೊಣೆ ತೆಗೆದುಕೊಳ್ಳುವುದು ಅತ್ಯಂತ ಶ್ಲಾಘನೀಯ ಕೆಲಸ ಎಂದು ಮಂಗಳೂರು ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜಿನ ಅಸೋಸಿಯೇಟ್‌ ಪ್ರೊಫೆಸರ್‌ ಡಾ| ಕೆ. ರಾಜೇಶ್ವರ ಅವರು ಹೇಳಿದರು.

ಕೊಂಬೆಟ್ಟು ಮರಾಠಿ ಸಮಾಜ ಸೇವಾ ಸಂಘ, ಮರಾಠಿ ಯುವ ವೇದಿಕೆ, ಮರಾಠಿ ಮಹಿಳಾ ವೇದಿಕೆ ಸಂಯುಕ್ತಾಶ್ರಯದಲ್ಲಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಿಡ್‌ ಬ್ಯಾಂಕ್‌ ಮತ್ತು ಮರಾಠಿ ವಿದ್ಯಾರ್ಥಿ ವೇದಿಕೆ ಹಾಗೂ ಮರಾಠಿ ಗ್ರಾಮ ಸಮಿತಿಗಳ ಸಹಕಾರದೊಂದಿಗೆ ರವಿವಾರ ಕೊಂಬೆಟ್ಟು ಸಮಾಜ ಮಂದಿರದಲ್ಲಿ ಆಯೋಜಿಸಿದ 3ನೇ ವರ್ಷದ ರಕ್ತದಾನ ಶಿಬಿರ ಮತ್ತು ಆರೋಗ್ಯ ಮಾಹಿತಿ ಕಾರ್ಯಾಗಾರವನ್ನು ಅವರು ಉದ್ಘಾಟಿಸಿದರು.

ಜೀವ ರಕ್ಷಕರಾಗಿ
ಒಬ್ಬ ವ್ಯಕ್ತಿಯು ಜೀವನ್ಮರಣದ ನಡುವೆ ಹೋರಾಟ ಮಾಡಿದಾಗ ರಕ್ತದ ಆವಶ್ಯಕತೆ ಬಹಳಷ್ಟಿರುತ್ತದೆ. ಈ ಸಂದರ್ಭ ರಕ್ತದಾನ ಮಾಡುವ ಮೂಲಕ ಜೀವ ರಕ್ಷಕರಾಗಿ ಕೆಲಸ ಮಾಡಬೇಕಾಗಿದೆ ಎಂದರು. ಸಹಕಾರ ಮನೋಭಾವ ಇದ್ದಾಗ ಮಾತ್ರ ಮನುಷ್ಯ ಜೀವನಕ್ಕೆ ಅರ್ಥ ಬರುತ್ತದೆ ಎಂದರು.

ಸೂಕ್ಷ್ಮತೆ ಇರಬೇಕು
ಮನುಷ್ಯನನ್ನು ಹಲವಾರು ರೋಗಗಳು ಆವರಿಸುತ್ತವೆ. ಆದರೆ ನಾವು ಅದನ್ನು ತಿರಸ್ಕಾರ ಮಾಡುವ ಪ್ರಮೇಯವೇ ಹೆಚ್ಚು. ರೋಗದ ಸೂಕ್ಷ್ಮತೆ ನಮ್ಮಲ್ಲಿರಬೇಕು. ಆಗ ಆರಂಭಿಕ ಹಂತದಲ್ಲಿಯೇ ಯಾವ ಕಾಯಿಲೆಯನ್ನಾದರೂ ಗುಣಪಡಿಸಲು ಸಾಧ್ಯವಿದೆ. ಕಳೆದ 3 ವರ್ಷಗಳಿಂದ ಮರಾಠಿ ಸಮಾಜ ಸೇವಾ ಸಂಘದ ನೇತೃತ್ವವದಲ್ಲಿ ರಕ್ತದಾನ ಶಿಬಿರ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ ಮಾಡುತ್ತಿರುವುದು ಅತ್ಯುತ್ತಮವಾಗಿದೆ ಎಂದರು.

ಸ್ತ್ರೀ ರೋಗ ತಜ್ಞೆ ಡಾ| ಜಯಶ್ರೀ ಆರ್‌. ಪೆರುವಾಜೆ ಆರೋಗ್ಯ ಮಾಹಿತಿ ನೀಡಿದರು. ರೋಟರಿ ಕ್ಯಾಂಪ್ಕೋ ಬ್ಲಿಡ್‌ ಬ್ಯಾಂಕ್‌ ವೈದ್ಯಾಧಿಕಾರಿ ಡಾ| ರಾಮಚಂದ್ರ ಭಟ್‌, ಮರಾಠಿ ಮಹಿಳಾ ವೇದಿಕೆ ಉಪಾಧ್ಯಕ್ಷೆ ಲಕ್ಷ್ಮೀ, ಮರಾಠಿ ಯುವ ವೇದಿಕೆಯ ಅಧ್ಯಕ್ಷ ಅಶೋಕ ನಾಯ್ಕ ಸೊರಕೆ, ವಿದ್ಯಾರ್ಥಿ ವೇದಿಕೆಯ ಅಧ್ಯಕ್ಷ ಅನಂತೇಶ್ವರ ಉಪಸ್ಥಿತರಿದ್ದರು.

ಮರಾಠಿ ಮಹಿಳಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಚೇತನಾ ಪರ್ಲಡ್ಕ ಸ್ವಾಗತಿಸಿದರು. ಮರಾಠಿ ಯುವ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಶ್ಯಾಮ್‌ ಶ್ರವಣ್‌ ಅವರು ಪ್ರಸ್ತಾವನೆಗೈದರು. ಯುವ ವೇದಿಕೆಯ ಮಾಜಿ ಅಧ್ಯಕ್ಷ ಗಿರೀಶ್‌ ನಾಯ್ಕ ಸೊರಕೆ ಅವರು ವಂದಿಸಿ, ದೀಪ್ತಿ ಅವರು ಕಾರ್ಯಕ್ರಮ ನಿರ್ವಹಿಸಿದರು.

ಒಗ್ಗಟ್ಟಿನಲ್ಲಿ ಬಲ
ಅಧ್ಯಕ್ಷತೆ ವಹಿಸಿದ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಯು.ಕೆ. ನಾಯ್ಕ ಮಾತನಾಡಿ, ಹಲವು ಕೈಗಳು ಸೇರಿದಾಗ ಮಾತ್ರ ಉತ್ತಮ ಕೆಲಸಗಳನ್ನು ಮಾಡಲು ಸಾಧ್ಯ. ಒಗ್ಗಟ್ಟು, ಸಹೃದಯತೆಯಿಂದ ಸಂಘಟನೆ, ಸಮುದಾಯ ಹೆಚ್ಚು ಬಲಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.