ಪಾಪದ ವಿರುದ್ಧ ಜಯಗಳಿಸಿದ ಭರವಸೆಯ ನವೀಕರಣವೇ ಪುನರುತ್ಥಾನದ ಸ್ಮರಣೆ


Team Udayavani, Apr 21, 2019, 6:30 AM IST

papada-virudda

ಪ್ರವಾದಿ ಏಸು ಕ್ರಿಸ್ತರು ಶಿಲುಬೆಗೇರಿದ ಮೂರನೇ ದಿನಕ್ಕೆ ಪುನರುತ್ಥಾನಗೊಂಡ ದಿನವನ್ನು ಈಸ್ಟರ್‌ ಹಬ್ಬವನ್ನಾಗಿ ಜಗತ್ತಿನಾದ್ಯಂತ ಆಚರಿಸಲಾಗುತ್ತದೆ. ಪಾಪಿಗಳ ಪಾಪವನ್ನು ಕ್ಷಮಿಸಿ, ಪ್ರೀತಿ, ಔದಾರ್ಯ ಮತ್ತು ದಯ ಕರುಣಿಸಬೇಕು ಎಂಬುದು ಈ ಹಬ್ಬದ ಸಂದೇಶ.

ಮಂಗಳೂರು: ಶಿಲುಬೆ ಗೇರಿಸಿದ ಯೇಸು ಕ್ರಿಸ್ತರು ತೃತೀಯ ದಿನ ಸಮಾಧಿಯಿಂದ ಪುನರುತ್ಥಾನಗೊಂಡ ಹಬ್ಬದ ಆಚರಣೆಯೇ ಈಸ್ಟರ್‌. “ಓರ್ವ ವ್ಯಕ್ತಿ ನಮ್ಮ ಪಾಪಗಳಿಗಾಗಿ ಯಾತನೆಯನ್ನು ಅನುಭವಿಸಿ, ಸಾವನ್ನಪ್ಪಿ ತೃತೀಯ ದಿನ ಪುನರುತ್ತಾನಗೊಳ್ಳುತ್ತಾನೆ’ ಎಂಬುದಾಗಿ ಪ್ರವಾದಿಗಳು ನುಡಿದ ಭವಿಷ್ಯ ನಿಜವಾದ ದಿನವೇ ಈಸ್ಟರ್‌ ಎನ್ನುವುದು ಕ್ರೈಸ್ತರ ನಂಬಿಕೆ.
ಯೇಸು ಕ್ರಿಸ್ತರ ಪುನರುತ್ಥಾನವನ್ನು ಸ್ಮರಿಸುವುದೆಂದರೆ ಪಾಪದ ವಿರುದ್ಧ ಜಯ ಸಾಧಿಸಿದ ಬಗ್ಗೆ ಭರವಸೆಯನ್ನು ನವೀಕರಿಸುವುದು ಎಂದರ್ಥ.

ಬೈಬಲಿನ ಹೊಸ ಒಡಂಬಡಿಕೆಯ ಪ್ರಕಾರ ಯೇಸು ಕ್ರಿಸ್ತರು ಶಿಲುಬೆಯಲ್ಲಿ ಮರಣಿಸಿದ ಬಳಿಕ 3ನೇ ದಿನ ಈಸ್ಟರ್‌ ಬರುತ್ತದೆ.

ಒಂದು ತಿಂಗಳ ಅವಧಿಯ ವ್ರತಾಚರಣೆ ಬಳಿಕ ಈಸ್ಟರ್‌ ಆಚರಣೆ ನಡೆಯುತ್ತದೆ. ವಿಭೂತಿ ಬುಧವಾರ ಆರಂಭವಾಗುವ ವ್ರತಾಚರಣೆ ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ದಿನವನ್ನಾಗಿ ಆಚರಿಸುವ ಶುಭ ಶುಕ್ರವಾರದಂದು ಕೊನೆಗೊಳ್ಳುತ್ತದೆ. ಈಸ್ಟರ್‌ ಆಚರಿಸಲಾಗುವ ಕೊನೆಯ ವಾರವನ್ನು ಪವಿತ್ರ ವಾರ (ಸಪ್ತಾಹ) ಅಥವಾ ಯಾತನೆಯ ವಾರ (ಪ್ಯಾಶನ್‌ ವೀಕ್‌) ಎಂದು ಸಂಬೋಧಿಸಲಾಗುತ್ತಿದೆ. ಯೇಸು ಕ್ರಿಸ್ತರು ಜೆರುಸಲೆಂ ಪಟ್ಟಣಕ್ಕೆ ವೈಭವದಿಂದ ಪ್ರವೇಶಿಸುವ ದಿನ ಅರ್ಥಾತ್‌ ಗರಿಗಳ ರವಿವಾರ ಈ ಸಪ್ತಾಹ ಆರಂಭವಾಗುತ್ತದೆ.

ಯೇಸು ಕ್ರಿಸ್ತರ ಕೊನೆಯ ಭೋಜನದ ದಿನ “ಪವಿತ್ರ ಗುರುವಾರ’, ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ದಿನ “ಶುಭ ಶುಕ್ರವಾರ’ (ಗುಡ್‌ಫ್ರೈಡೆ), ಈಸ್ಟರ್‌ ಜಾಗರಣೆಯ ದಿನ “ಸ್ತೋತ್ರ ಅರ್ಪಣೆಯ ಶನಿವಾರ’ ಮತ್ತು ಕೊನೆಯದಾಗಿ ಈಸ್ಟರ್‌ ರವಿವಾರ ಆಚರಿಸಲಾಗುತ್ತಿದೆ.

ಶಿಲುಬೆಗೇರಿಸುವ ಮುಂಚಿನ ದಿನ ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ಪಸ್ಕ ಹಬ್ಬದ ಭೋಜನವನ್ನು ಸೇವಿಸಿದ್ದರು. ಇದನ್ನು ಯೇಸು ಕ್ರಿಸ್ತರ ಕೊನೆಯ ಭೋಜನ ಎನ್ನುತ್ತಾರೆ.

ಪಸ್ಕ ಹಬ್ಬದ ಭೋಜನದ ವೇಳೆ ಯೇಸು ಕ್ರಿಸ್ತರು ತಾನು ಮುರಿದ ರೊಟ್ಟಿಯು (ಬ್ರೆಡ್‌) ತನ್ನ ದೇಹದ ಸಂಕೇತವಾಗಿದೆ ಮತ್ತು ಪಾತ್ರೆಗೆ ಸುರಿದ ದ್ರಾಕ್ಷಾ ರಸವು (ವೈನ್‌) ತನ್ನ ರಕ್ತ ಆಗಿದ್ದು, ಲೋಕದ ಜನರ ಪಾಪಗಳ ವಿಮೋಚನೆಯ ಸಂಕೇತವಾಗಿದೆ ಎಂಬುದಾಗಿ ತನ್ನ ಶಿಷ್ಯರಿಗೆ ಹೇಳಿದ್ದರು ಎಂದು ಬೈಬಲ್‌ ತಿಳಿಸುತ್ತದೆ. ಹಾಗಾಗಿ ಯೇಸು ಕ್ರಿಸ್ತರು ಜನರ ಪಾಪ ವಿಮೋಚನೆಗಾಗಿ ತಮ್ಮ ಪ್ರಾಣವನ್ನು ಅರ್ಪಿಸಿದರು ಎನ್ನುವುದು ಕ್ರೈಸ್ತರ ನಂಬಿಕೆ.

ಯೇಸು ಕ್ರಿಸ್ತರು ಮರಣದಿಂದ ಜೀವಿತದ ಕಡೆಗೆ ದಾಟಿದರು. ಅದೇ ರೀತಿ ಯೇಸು ಕ್ರಿಸ್ತರ ಮೇಲೆ ವಿಶ್ವಾಸ ಇರಿಸಿ ಅವರ ಅನುಯಾಯಿಗಳಾದ ಕ್ರೈಸ್ತರು ಕತ್ತಲೆಯಿಂದ ಬೆಳಕಿಗೆ, ಅಸತ್ಯದಿಂದ ಸತ್ಯದೆಡೆಗೆ, ಪಾಪದ ಕೂಪದಿಂದ ದೇವರ ಕೃಪೆಗೆ ಪಾತ್ರರಾಗುತ್ತಾರೆ ಎನ್ನುವುದರ ಆಚರಣೆಯೇ ಈಸ್ಟರ್‌. ಇದನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತದೆ.

ಧಾರ್ಮಿಕವಾಗಿ ಹೆಚ್ಚಿನ ಮಹತ್ವ
ಯೇಸು ಕ್ರಿಸ್ತರು ದೇವರ ಪುತ್ರ ಎನ್ನುವುದು ಕ್ರೈಸ್ತರ ನಂಬಿಕೆ. ಯೇಸು ಕ್ರಿಸ್ತರ ಜನನದ ಹಬ್ಬ ಕ್ರಿಸ್ಮಸ್‌, ಪುನರುತ್ಥಾನದ ಹಬ್ಬ ಈಸ್ಟರ್‌ ಕ್ರೈಸ್ತರ ಪ್ರಮುಖ ಎರಡು ಹಬ್ಬಗಳು. ಕ್ರಿಸ್ಮಸ್‌ ಆಚರಣೆಯ ಸಂದರ್ಭ ಇರುವ ಸಡಗರ, ಸಂಭ್ರಮ ಈಸ್ಟರ್‌ ಸಂದರ್ಭ ಇರುವುದಿಲ್ಲ; ಆದರೆ ಈ ಹಬ್ಬದ ಸಂದರ್ಭದಲ್ಲಿ ಧಾರ್ಮಿಕವಾಗಿ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಬೇಸಗೆ ಕಾಲದಲ್ಲಿ ಆಚರಿಸಲಾಗುತ್ತಿರುವುದರಿಂದ ಮನೆಯ ಕುಟುಂಬಗಳ ಬಹುತೇಕ ಸದಸ್ಯರು ಹಾಜರಿರುತ್ತಾರೆ.

ಸಂದೇಶ
ಯೇಸುಸ್ವಾಮಿಯ ಪುನರುತ್ಥಾನವು ಈ ವಿಶ್ವದ ಚರಿತ್ರೆಯಲ್ಲೇ ನಡೆದ ಅತ್ಯದ್ಭುತ ಘಟನೆ. ಈ ಮೂಲಕ, ಪ್ರತಿ ಮಾನವನಿಗೂ ಅನಂತ ಜೀವದ ನಿರೀಕ್ಷೆ ದೊರಕಿದೆ.

ನಮ್ಮ ಜೀವನದ ಕಷ್ಟ, ಸಾವು, ಅರ್ಥರಹಿತವಲ್ಲ, ಬದಲಾಗಿ ದೇವರು ತಮ್ಮ ಯೋಜನೆಗಳನ್ನು ನಮ್ಮಲ್ಲಿ ಕಾರ್ಯಗತಗೊಳಿಸುವ ಗಾಢ ಅರ್ಥವನ್ನು ಈಸ್ಟರ್‌ ಒಳಗೊಂಡಿವೆ. ಕಷ್ಟಗಳಿಂದ ವಿಚಲಿತರಾದರೂ, ದೇವರಲ್ಲಿ ಅಚಲ ವಿಶ್ವಾಸವಿಟ್ಟರೆ, ಜೀವನದಲ್ಲಿ ಕಷ್ಟಗಳ ಕತ್ತಲೆ ಕಳೆದು, ಬೆಳಕು ಮೂಡುವುದು ನಿಶ್ಚಿತ.

ಮಾನವ ಜನಾಂಗದ ಮೇಲೆ ದಯೆ ತೋರುವ ಈಸ್ಟರ್‌ ಹಬ್ಬವನ್ನು ಆಚರಿಸೋಣ. ಈ ಹಬ್ಬ ನಮ್ಮೆಲ್ಲರನ್ನು ಕತ್ತಲೆಯಿಂದ ಬೆಳಕಿಗೆ, ಅಸತ್ಯದಿಂದ ಸತ್ಯದೆಡೆಗೆ ದಾಟಿಸಿ ಚಿರಂಜೀವಿಯಾಗಿಸಲಿ. ಎಲ್ಲರಿಗೂ ನಾನು ಪಾಸ್ಖ ಹಬ್ಬದ ಶುಭಾಶಯಗಳನ್ನು ಕೋರುತ್ತೇನೆ.

– ಪ|ಪೂ|ಜೆರಾಲ್ಡ್‌ ಲೋಬೊ ಉಡುಪಿಯ ಧರ್ಮಾಧ್ಯಕ್ಷರು

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.