“ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅನನ್ಯ
Team Udayavani, Aug 7, 2017, 6:40 AM IST
ಬೆಳ್ತಂಗಡಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿಸಿ ರೂಪಿಸುವ, ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅನನ್ಯವಾದುದು. ಮಹಿಳೆಯರು ತಮ್ಮ Ó ಾಮರ್ಥ್ಯ ಅರಿತುಕೊಂಡು ಸಾಮಾಜಿಕ ಸೇವಾ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಮಾಜದ ಹಾಗೂ ದೇಶದ ಬೆಳವಣಿಗೆಗೆ ಕೊಡುಗೆಯನ್ನು ನೀಡಬಹುದು ಎಂದು ಪುತ್ತೂರಿನ ಖ್ಯಾತ ವೈದ್ಯೆ ಹಾಗೂ ಮನಃಶಾಸ್ತ್ರಜ್ಞೆ ಡಾ| ಸುಲೇಖಾ ವರದರಾಜ್ ಹೇಳಿದರು.
ಅವರು ಲಾಯಿಲಾದ ಶ್ರೀ ಸುಬ್ರಹ್ಮಣ್ಯ ಸಭಾ ಭವನದಲ್ಲಿ ನಡೆದ ಬೆಳ್ತಂಗಡಿ ರೋಟರಿಯ ಆ್ಯನ್ಸ್ ಕ್ಲಬ್ನ 2017-18ನೇ ಸಾಲಿನ ಪದಾ ಧಿಕಾರಿಗಳ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ವೈಷ್ಣವಿ ಎಂ. ಪ್ರಭು ಅಧ್ಯಕ್ಷರಾಗಿ ಹಾಗೂ ಶೆ„ಲಾ ಎಸ್. ಕಾಮತ್ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ ಗಾಯತ್ರಿ ಶ್ರೀಧರ್, ಪಲ್ಲವಿ ತುಳುಪುಳೆ, ಡಾ| ಸುಶ್ಮಾ ಡೋಂಗ್ರೆ, ಜಂಟಿ ಕಾರ್ಯದರ್ಶಿಯಾಗಿ ಭಾರತಿ ಅಮರನಾಥ್ ಪ್ರಸಾದ್, ಖಜಾಂಚಿಯಾಗಿ ಡಾ| ದೀಪಾಲಿ ಡೋಂಗ್ರೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜಶ್ರೀ ಡಿ. ರಾವ್ , ಕ್ರೀಡಾ ಕಾರ್ಯದರ್ಶಿಯಾಗಿ ಪ್ರಶಾಂತಿ ಪಿ. ಪ್ರಭು ಹಾಗೂ ಸಲಹಾ ಮಂಡಳಿ ಸದಸ್ಯೆಯರಾಗಿ ಸರಸ್ವತಿ ಆರ್. ಭಟ್, ಪ್ರಭಾ ಪಿ. ಬಾಳಿಗ, ಡಾ| ಭಾರತಿ ಗೋಪಾಲಕೃಷ್ಣ ಅ ಧಿಕಾರ ಸ್ವೀಕರಿಸಿದರು. ಆನ್ಸ್ ಕ್ಲಬ್ ನಿರ್ಗಮನ ಅಧ್ಯಕ್ಷೆ ಡಾ| ಆಶಾ ರಾಘವೇಂದ್ರ ವಂದಿಸಿದರು. ನಿರ್ಗಮನ ಕಾರ್ಯದರ್ಶಿ ರಶ್ಮಿ ಭಿಡೆ ಕಳೆದ ಸಾಲಿನ ಚಟುವಟಿಕೆಗಳ ವರದಿ ನೀಡಿದರು.
ಪ್ರತಿಭಾನ್ವಿತ ಪುಟಾಣಿ ಮಾಸ್ಟರ್ ನರೇಶ್ ಪೈ, ಚೆಸ್ ಆಟದಲ್ಲಿ ಅತ್ಯುನ್ನತ ಪರಿಣತಿ ಸಾ ಧಿಸಿ ಮುಂದು
ವರಿಯುತ್ತಿರುವ ಈಶಾ ಶರ್ಮ ಹಾಗೂ ಉಜಿರೆಯ ಸ್ನೇಹಕಿರಣ ನರ್ಸರಿ ಶಾಲೆ ಅಧ್ಯಾಪಕಿ ಜಾನೆಟ್ ಮೊರಾಸ್ ಅವರನ್ನು ಸಮ್ಮಾನಿಸಲಾಯಿತು. ರಾಜಶ್ರೀ ರಾವ್ ಅವರು ಕೊಡಮಾಡಿದ 25,000 ರೂ. ವಿದ್ಯಾರ್ಥಿ ವೇತನವನ್ನು ಬೆಳ್ತಂಗಡಿಯ ವಾಣಿ ವಿದ್ಯಾ ಸಂಸ್ಥೆಗೆ ನೀಡಲಾಯಿತು. ಸುನಿಲ್ ಶೆಣೆ„ ಕೊಡಮಾಡಿದ 10,000 ರೂ. ವಿದ್ಯಾರ್ಥಿ ವೇತನವನ್ನು ಲಾಯಿಲಾ ಗ್ರಾಮದ ದ.ಕ.ಜಿ.ಪಂ.ಹಿ. ಪ್ರಾ. ಶಾಲೆಯ 1ನೇ ತರಗತಿಯ ವಿದ್ಯಾರ್ಥಿನಿ ಹೇಮಲತಾ ಅವರಿಗೆ ನೀಡಲಾಯಿತು.
ಬೆಳ್ತಂಗಡಿ ರೋಟರಿ ಕ್ಲಬ್ನ ಅಧ್ಯಕ್ಷ ಡಾ| ಸುಧಿಧೀರ್ ಪ್ರಭು ನೂತನ ತಂಡಕ್ಕೆ ಪದಪ್ರದಾನ ಮಾಡಿದರು. ಮನೋರಮಾ ಭಟ್ ಹಾಗೂ ಲಿಲ್ಲಿ ಆ್ಯಂಟೊನಿ ಕಾರ್ಯಕ್ರಮ ನಿರ್ವಹಿಸಿ, ಕಾರ್ಯದರ್ಶಿ ಶೆ„ಲಾ ಎಸ್. ಕಾಮತ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ