ಅಕ್ಷರದಾಹ ನೀಗಿಸಲು ಆರಂಭವಾದ ಶಾಲೆ ಈಗ 108ರ ಹೊಸ್ತಿಲಲ್ಲಿ

ಊರ ಹಿರಿಯರ ಆಸಕ್ತಿಯಲ್ಲಿ ಬೆಳೆದ ಬೆಳುವಾಯಿ ಮೈನ್‌ ಶಾಲೆ

Team Udayavani, Nov 13, 2019, 5:03 AM IST

q-30

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1911 ಶಾಲೆ ಆರಂಭ
56 ವಿದ್ಯಾರ್ಥಿಗಳಿಂದ ಆರಂಭವಾದ ಶಾಲೆ

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169 ಹಾದುಹೋಗುವ ಬೆಳುವಾಯಿ-ಕೆಸರ್‌ಗದ್ದೆಯಲ್ಲಿರುವ ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ 1911-12ನೇ ಸಾಲಿನಲ್ಲಿ ಕಿರಿಯ ಪ್ರಾಥಮಿಕ ಶಾಲೆಯಾಗಿ ಪ್ರಾರಂಭಗೊಂಡಿತ್ತು. ಬೆಳುವಾಯಿ ಪೆಲಕುಂಜ ಮನೆ ಬಾಲಯ್ಯ ಹೆಗ್ಡೆ ಅವರ ಮುಂದಾಳತ್ವದಲ್ಲಿ ಕೆಸರ್‌ಗದ್ದೆಯ ಗೋವಿಂದ ಪ್ರಭು, ನಾಗಪ್ಪ ಶೆಣೈ, ಊರ ಹತ್ತು ಸಮಸ್ತರ ಸಹಕಾರದೊಂದಿಗೆ ಈ ಶಾಲೆ ಸ್ಥಾಪನೆಯಾಗಿತ್ತು.

ಬೆಳುವಾಯಿ ಪರಿಸರದ ಶಾಂತಿನಗರ, ನಡಿಗುಡ್ಡೆ, ಗೋಲಾರ, ಬೆಳುವಾಯಿ, ಮೂಡುಮಾರ್ನಾಡು ಪರಿಸರದಲ್ಲಿ ಪ್ರಾಥಮಿಕ ಶಾಲೆಗಳಿಲ್ಲದ ಆ ದಿನಗಳಲ್ಲಿ 56 ಮಕ್ಕಳೊಂದಿಗೆ ಶಾಲೆ ಪ್ರಾರಂಭವಾದಾಗ ಮಾರ್ನಾಡು ಮಂಜುನಾಥ ಅವರು ಮುಖ್ಯೋಪಾಧ್ಯಾಯರಾಗಿದ್ದರು ಎಂದು ಅವರ ಶಿಷ್ಯ, 95ರ ಇಳಿವಯಸ್ಸಿನಲ್ಲಿರುವ ಮೊಶ¡ಪ್ಪ ಡಾಂಗೆ ನೆನಪಿಸುತ್ತಾರೆ.ಅನಂತರ ಪದ್ಮಯ್ಯ ಹೆಗ್ಡೆ, ಶಂಕರ ರಾವ್‌, ಶೇಖರ ಶೆಟ್ಟಿ, ಮಾಧವ ಶೆಣೈ, ಸದಾಶಿವ ಅಡಿಗ, ಸುಮತಿ ಯು., ಸನ್ನು ಆರ್‌., ಸರಸ್ವತಿ ಎಂ. ಫಣಿರಾಜ್‌ ಮುಖ್ಯೋಪಾಧ್ಯಾಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ರಾಜಶ್ರೀ ನಾಯಕ್‌ ಮುಖ್ಯೋಪಾಧ್ಯಾಯರಾಗಿ ಸೇವಾ ನಿರತರಾಗಿದ್ದು 10 ಮಂದಿನ ಶಿಕ್ಷಕರಿದ್ದು 263 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಸುವ್ಯವಸ್ಥಿತ ಮೂಲಸೌಲಭ್ಯಗಳು
1.02 ಎಕ್ರೆ ಜಾಗವನ್ನು ಹೊಂದಿರುವ ಶಾಲೆಯಲ್ಲಿ ವಿದ್ಯುತ್ಛಕ್ತಿ, ಬೋರ್‌ವೆಲ್‌, ಶೌಚಾಲಯ, ಕಂಪ್ಯೂಟರ್‌ ವ್ಯವಸ್ಥೆ ಇದೆ. ಸ್ಮಾರ್ಟ್‌ ಕ್ಲಾಸ್‌ ಮೂಲಕ ಬೋಧಿಸುವ ವಿಷಯಗಳನ್ನು ಮನದಟ್ಟು ಮಾಡಲಾಗುತ್ತಿದೆ. ಮೆಂದಾ ಫೌಂಡೇಶನ್‌ನವರು ಎಲ್‌ಇಡಿ ಟಿವಿಯನ್ನು ಒದಗಿಸಲಾಗಿದೆ. 1997-98ರಲ್ಲಿ ಮಾದರಿ ಶಾಲೆಯಾಗಿ ಭಡ್ತಿ ಹೊಂದಿತು. 2010-11ರಲ್ಲಿ ಉನ್ನತೀಕರಿಸಲ್ಪಟ್ಟು 8ನೇ ತರಗತಿ ಪ್ರಾರಂಭವಾಯಿತು. 2012-13ರಲ್ಲಿ 6ನೇ ತರಗತಿಯಿಂದ ಆಂಗ್ಲ ಮಾಧ್ಯಮ ಹಾಗೂ ಶೈಕ್ಷಣಿಕ ವರ್ಷದಿಂದ 1ನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ನಡೆಸಲು ಸರಕಾರದಿಂದ ಅನುಮತಿ ದೊರೆತ್ತಿದ್ದು, ಎಲ್‌ಕೆಜಿ ತರಗತಿ ಆರಂಭಿಸಲಾಗಿದೆ.

ಶಾಲಾವರಣದಲ್ಲಿ ಸ್ವತ್ಛತೆಗೆ ಆದ್ಯತೆ ನೀಡಲಾಗಿದೆ. ಆವರಣದೊಳಗೆ ಅಡಿಕೆ ಸಸಿ, ತರಕಾರಿಗಳನ್ನು ಬೆಳೆಸಲಾಗುತ್ತಿದೆ. 2014-15ರಲ್ಲಿ ಪರಿಸರ ಮಿತ್ರ ಶಾಲಾ ಕಾರ್ಯಕ್ರಮದನ್ವಯ “ಹಳದಿ ಶಾಲೆ’ ಪ್ರಶಸ್ತಿ ಲಭಿಸಿದೆ.

ಹಳೆ ವಿದ್ಯಾರ್ಥಿಗಳು
ಡಾ| ಎಸ್‌.ಕೆ. ಶೆಣೈ ಬೆಂಗಳೂರು, ಚಾರ್ಟರ್ಡ್‌ ಅಕೌಂಟೆಂಟ್‌ ಎನ್‌.ಕೆ. ಅಮೀನ್‌, ನವಿ ಮುಂಬಯಿ, ಸುನಂದಾ ಮಾಧವ ಪ್ರಭು ಚಾರಿಟೆಬಲ್‌ ಟ್ರಸ್ಟ್‌ ಪ್ರವರ್ತಕ ವಿಶ್ವನಾಥ ಪ್ರಭು, ಡಾ| ರಮೇಶ್‌ ಮೂಡುಬಿದಿರೆ, ವಕೀಲ ರಾಜೇಶ್‌ ಸುವರ್ಣ ಈ ಶಾಲೆಯ ಸಾಧಕ ಹಳೆವಿದ್ಯಾರ್ಥಿಗಳಾಗಿದ್ದಾರೆ

ಪ್ರಶಸ್ತಿ, ಪುರಸ್ಕಾರ
ಶಾಲಾ ಹಳೆವಿದ್ಯಾರ್ಥಿ ಫಣಿರಾಜ ಎಂ. ಅವರು ಇದೇ ಶಾಲೆಯ ಮುಖ್ಯಶಿಕ್ಷಕರಾಗಿ 13 ವರ್ಷ ಸೇವೆ ಸಲ್ಲಿಸಿದ್ದು ಶಾಲಾ ಮೂಲಸೌಕರ್ಯಗಳನ್ನು ಹೊಂದಿಸಿಕೊಳ್ಳುವಲ್ಲಿ , ಎರಡು ಕೊಠಡಿಗಳ ಶತಮಾನೋತ್ಸವ ಸೌಧ ನಿರ್ಮಾಣ, ಶತಮಾನೋತ್ಸವ ನಡೆಸುವಲ್ಲಿ ಸಂಘಟನ ಚತುರತೆ ತೋರಿದ್ದಾರೆ. ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯೂ ಲಭಿಸಿದೆ. ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯ ಪೂಜಾ ಕುಣಿತದಲ್ಲಿ ಜಿಲ್ಲಾ ಮಟ್ಟದಲ್ಲಿ ಹ್ಯಾಟ್ರಿಕ್‌ ಸಾಧನೆ, ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಗಳಿಸಿದ್ದು ಕ್ರೀಡೆಗಳಲ್ಲೂ ಉತ್ತಮ ಸಾಧನೆ ತೋರಿದ್ದಾರೆ.

ಉತ್ತಮ ಗುಣಮಟ್ಟದ ಶಿಕ್ಷಣದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಸಮಗ್ರ ಶಿಕ್ಷಣದಿಂದ ಸಮಗ್ರ ಅಭಿವೃದ್ಧಿ ಸಾಧ್ಯ ಎಂಬುದಕ್ಕೆ ಈ ಶಾಲೆ ಸಾಕ್ಷಿಯಾಗಿದೆ
-ರಾಜಶ್ರೀ ನಾಯಕ್‌,ಪದವೀಧರ ಮುಖ್ಯೋಪಾಧ್ಯಾಯಿನಿ

ಒಳ್ಳೇ ಕಲಿಸುತ್ತಿದ್ರು. ಮಂಜುನಾಥ, ಪದ್ಮಯ್ಯ ಹೆಗ್ಡೆ, ಪುತ್ತಿಗೆ ಸೋಮನಾಥ ಭಟ್‌, ಮತ್ತೆ ಸುಬ್ರಾಯ ಮಾಸ್ತರ ಪಾಠ ಇಂದಿಗೂ ನೆನಪು. ಸ್ಕೂಲ್‌ಡೇಗೆ ನಾಟಕ ಕಲಿಸ್ತಾ ಇದ್ರು.
-ಮೊಶಪ್ಪ ಡಾಂಗೆ, ಹಳೆ ವಿದ್ಯಾರ್ಥಿ.

- ಧನಂಜಯ ಮೂಡುಬಿದಿರೆ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.