ನೀರು ಸಂಗ್ರಹಕ್ಕಾಗಿ ಕೆಲಸಕ್ಕೆ ರಜೆ ಹಾಕುವ ಪರಿಸ್ಥಿತಿ…!


Team Udayavani, May 18, 2019, 6:00 AM IST

21

ಮಹಾನಗರ: ನಗರದಲ್ಲಿ ಕುಡಿಯುವ ನೀರು ಪೂರೈಕೆ ಸಮಸ್ಯೆಯಾದರೆ ಸಾರ್ವಜನಿಕರಿಗೆ ಮುಖ್ಯವಾಗಿ ಉದ್ಯೋಗಸ್ಥ ಕುಟುಂಬಗಳಿಗೆ ವಿತರಣೆಯಾಗುವ ನೀರನ್ನು ಸಂಗ್ರಹಿಸುವ ಚಿಂತೆ. ಇದರಿಂದಾಗಿ ಬಹಳಷ್ಟು ಕುಟುಂಬಗಳಿಗೆ ಕೆಲಸಕ್ಕೆ ರಜೆ ಮಾಡಿ ನೀರು ಸಂಗ್ರಹಿಸುವ ಪರಿಸ್ಥಿತಿ ಎದುರಾಗಿದೆ.

ನಗರದಲ್ಲಿ ಸದ್ಯ ನೀರು ರೇಷನಿಂಗ್‌ ಜಾರಿಯಲ್ಲಿದೆ. ಇದರಂತೆ ಮೂರು ದಿನ ನೀರು ಸ್ಥಗಿತ ಮಾಡಿ ನಾಲ್ಕು ದಿನ ನೀರು ಪೂರೈಕೆ ಮಾಡಲಾಗುತ್ತದೆ. ನೀರು ಪೂರೈಸುವ ನಾಲ್ಕು ದಿನಗಳ ಅವಧಿಯಲ್ಲಿ ದಿನವಿಡೀ ನೀರು ಬರುವುದಿಲ್ಲ. ಪ್ರತಿಯೊಂದು ಪ್ರದೇಶಕ್ಕೂ ಗಂಟೆಯ ಆಧಾರದಲ್ಲಿ ನೀರು ನೀಡಲಾಗುತ್ತದೆ. ಆಯಾಯ ಪ್ರದೇಶಗಳ ಜನರು ಈ ಅವಧಿಯಲ್ಲಿ ನೀರು ಸಂಗ್ರಹಿಸಿಡಬೇಕು.

ತುಂಬೆಯಿಂದ ನಗರದ ನೀರು ಸಂಗ್ರಹ ಸ್ಥಾವರಗಳಿಗೆ ಸರಬರಾಜು ಆರಂಭಗೊಂಡಾಗ ವಾಲ್ವ್ಮೆನ್‌ಗಳು ತಮ್ಮ ಪಂಪ್‌ಹೌಸ್‌ ವ್ಯಾಪ್ತಿಯ ನೀರು ವಿತರಣೆ ಮಾರ್ಗದ ಪ್ರದೇಶಗಳಿಗೆ ವಿತರಣೆ ಆರಂಭಿಸುತ್ತಾರೆ. ಒಂದು ಪ್ರದೇಶದ ವಾಲ್ವ್ಗಳನ್ನು ಒಪನ್‌ ಮಾಡಿ ಒಂದು ಅಥವಾ ಎರಡು ತಾಸು ನೀರು ನೀಡಿ ಬಂದ್‌ ಮಾಡುತ್ತಾರೆ. ಇನ್ನೊಂದು ಪ್ರದೇಶದ ವಾಲ್ವ್ ಒಪನ್‌ ಮಾಡಿ ಅಲ್ಲಿಗೆ ಅದೇ ರೀತಿ ನೀರು ನೀಡುತ್ತಾರೆ. ಎರಡು ದಿನಗಳಿಗೊಮ್ಮೆ ನೀರು ಪೂರೈಕೆಯಾಗುವ ಪ್ರದೇಶಗಳಿಗೆ ಇದೇ ವ್ಯವಸ್ಥೆ ಮುಂದುವರಿಯುತ್ತದೆ. ಮೂರು ದಿನ ಸ್ಥಗಿತದ ಬಳಿಕ ಬೆಳಗ್ಗೆ 6 ಗಂಟೆಗೆ ನೀರು ವಿತರಣೆ ಆರಂಭವಾಗುತ್ತದೆ ಎಂದು ಪ್ರಕಟನೆ ಹೇಳುತ್ತದೆಯಾದರೂ ಹೆಚ್ಚಿನ ಪ್ರದೇಶಗಳಿಗೆ ನೀರು ಬರುವಾಗ ರಾತ್ರಿಯಾಗುತ್ತದೆ.

ಪ್ರಸ್ತುತ ಉದ್ಯೋಗಸ್ಥ ಕುಟುಂಬಗಳಿಗೆ ಎದುರಾಗಿರುವ ಸಮಸ್ಯೆ ಎಂದರೆ ತಮ್ಮ ಪ್ರದೇಶಕ್ಕೆ ಯಾವಾಗ ನೀರು ಬರುತ್ತದೆ ಎಂಬುದನ್ನು ಕಾಯುವುದು. ದಿನದ ಯಾವುದೇ ಹೊತ್ತಿನಲ್ಲೂ ನೀರು ಬರಬಹುದು.

ಕೆಲಸಕ್ಕೆ ರಜೆ
ನೀರಿನ ಪ್ರಶರ್‌ ಇಲ್ಲದಿರುವುದರಿಂದ ಒವರ್‌ ಹೆಡ್‌ ಟ್ಯಾಂಕಿಗಳಿಗೆ ನೀರು ಹೋಗುವುದಿಲ್ಲ. ಅದುದರಿಂದ ಡ್ರಮ್‌ಗಳಲ್ಲಿ, ಬಕೇಟು ಇತ್ಯಾದಿಗಳಲ್ಲಿ ಸಂಗ್ರಹಿಸಿಡಬೇಕಾಗುತ್ತದೆ. ಗಂಡ ಹೆಂಡತಿ ಇಬ್ಬರೇ ಇರುವ ಮತ್ತು ಇಬ್ಬರೂ ಉದ್ಯೋಗದಲ್ಲಿರುವ ಮನೆಗಳಲ್ಲಿ ಹಗಲು ಹೊತ್ತು ಅಂದರೆ ಸಾಮಾನ್ಯವಾಗಿ ಬೆಳಗ್ಗೆ 8.30ರಿಂದ ಸಂಜೆ 6 ಗಂಟೆಯ ಅವಧಿಯಲ್ಲಿ ನೀರು ಬಂದರೆ ಆ ವೇಳೆ ಅವರು ಕಚೇರಿಗಳಲ್ಲಿ ಅಥವಾ ಕೆಲಸದ ತಾಣಗಳಲ್ಲಿರುವುದರಿಂದ ಅದನ್ನು ಸಂಗ್ರಹಿಸಿಡಲು ಸಾಧ್ಯವಾಗುವುದಿಲ್ಲ. ಸಂಗ್ರಹಿಸಿಡದಿದ್ದರೆ ಮತ್ತೆ ಮೂರು ದಿನ ನೀರು ಇರುವುದಿಲ್ಲ. ಆದುದರಿಂದ ಗಂಡ ಅಥವಾ ಹೆಂಡತಿಯ ಪೈಕಿ ಯಾರಾದರೊಬ್ಬರು ನೀರು ಹಿಡಿದಿಡಲು ಕೆಲಸಕ್ಕೆ ರಜೆ ಮಾಡಲೇ ಬೇಕು.

ಟ್ಯಾಂಕರ್‌ ನೀರಿನಲ್ಲೂ ಇದೇ ಸಮಸ್ಯೆ
ನೀರು ಪೂರೈಕೆ ಅವಧಿಯಲ್ಲೂ ನೀರು ಹೋಗದ ಎತ್ತರದ ಪ್ರದೇಶಗಳು ಸಹಿತ ಕೆಲವು ಪ್ರದೇಶಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ. ಇಲ್ಲೂ ಟ್ಯಾಂಕರ್‌ಗಳು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯೊಳಗೆ ನೀರು ಸರಬರಾಜು ಮಾಡುತ್ತವೆ. ಈ ಅವಧಿಯಲ್ಲಿ ಉದ್ಯೋಗಸ್ಥ ಕುಟುಂಬಗಳ ಸದಸ್ಯರು ಕಚೇರಿಯಲ್ಲಿರುತ್ತಾರೆ. ಅದುದರಿಂದ ಈ ನೀರು ಅವರಿಗೆ ಪ್ರಯೋಜನಕ್ಕೆ ಬರುವುದಿಲ್ಲ.

ಸಮಸ್ಯೆಗೆ ಪರಿಹಾರ ಎಂದರೆ ಬೆಳಗಿನ ಜಾವದಿಂದ ಆರಂಭಿಸಿ 8 ಗಂಟೆಯವರೆಗೆ ಹಾಗೂ ಸಂಜೆ 6 ಗಂಟೆಯಿಂದ ರಾತ್ರಿವರೆಗೆ ನೀರು ಪೂರೈಕೆಯಾದರೆ ಉದ್ಯೋಗಸ್ಥ ಕುಟುಂಬಗಳಿಗೂ ನೀರು ಲಭ್ಯವಾಗುತ್ತದೆ. ಒಟ್ಟಾರೆಯಾಗಿ ನೀರಿನ ಸರಬರಾಜು ವೇಳಾಪಟ್ಟಿಯಲ್ಲಿ ಸಣ್ಣ ಬದಲಾವಣೆ ಮಾಡಿದರೆ ಸಮಸ್ಯೆ ಪರಿಹರಿಸಲು ಸಾಧ್ಯ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.