ಅಂಗನವಾಡಿ ಕಾರ್ಯಕರ್ತೆಯರ ಕೈ ಸೇರಿಲ್ಲ ಸ್ಮಾರ್ಟ್ಫೋನ್
Team Udayavani, Feb 7, 2020, 6:25 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಕೆಲಸದ ಒತ್ತಡ ಕಡಿಮೆಗೊಳಿಸುವುದು ಮತ್ತು ಪಾರದರ್ಶಕ ವ್ಯವಸ್ಥೆ ಜಾರಿಗಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸರಕಾರ ನೀಡಲುದ್ದೇಶಿಸಿದ್ದ ಸ್ಮಾರ್ಟ್ ಫೋನ್ ಇನ್ನೂ ಅವರ ಕೈ ಸೇರಿಲ್ಲ. ಒತ್ತಡ ನಿವಾರಣೆಯಾಗುವ ನಿರೀಕ್ಷೆಯಲ್ಲಿದ್ದ ಅವರು ನಿರಾಶೆಗೊಳಗಾಗಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರು ಸರಕಾರದ ಎಲ್ಲ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಶ್ರಮಿಸುತ್ತಾರೆ. ಇದ ರೊಂದಿಗೆ ಅಂಗನವಾಡಿಗೆ ಬರುವ ಮಕ್ಕಳಿಗೆ ಕಲಿಸುವ ಹೊಣೆಗಾರಿಕೆ ಇದ್ದೇ ಇರುತ್ತದೆ. ಆದ್ದರಿಂದ ದಿನವಿಡೀ ಅವರಿಗೆ ಕೆಲಸದ ಒತ್ತಡವಿರುತ್ತದೆ.
ಈ ಹಿನ್ನೆಲೆಯಲ್ಲಿ ಕಾರ್ಯಕರ್ತೆ ಯರು “ಸ್ನೇಹ’ ಆ್ಯಪ್ ಆಧಾರಿತವಾಗಿ ಆನ್ಲೈನ್ ಮೂಲಕವೇ ಎಲ್ಲ ಕೆಲಸಗಳನ್ನು ನಿಭಾಯಿಸಬೇಕೆನ್ನುವ ನಿಟ್ಟಿನಲ್ಲಿ ಮುಂದಿನ ಎರಡು ವಾರದೊಳಗೆ ಸ್ಮಾರ್ಟ್ ಫೋನ್ ನೀಡಲಾಗುವುದು ಎಂದು ಕಳೆದ ಜನವರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹೇಳಿದ್ದರು. ಆದರೆ ಒಂದು ತಿಂಗಳಾ ದರೂ ಸ್ಮಾರ್ಟ್ಫೋನ್ ಅಂಗನವಾಡಿ ಕಾರ್ಯಕರ್ತೆಯರ ಕೈ ಸೇರಿಲ್ಲ.
ಈ ಕುರಿತು ಪ್ರತಿಕ್ರಿಯಿಸಿರುವ ಇಲಾಖೆಯ ದ.ಕ. ಜಿಲ್ಲಾ ಉಪನಿರ್ದೇಶಕ ಉಸ್ಮಾನ್ ಅವರು, “ಸ್ಮಾರ್ಟ್ಫೋನ್ ನೀಡುವ ಚಿಂತನೆ ಇರುವುದು ಹೌದು, ಆದರೆ ಯಾವಾಗ ಸಿಗಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ