ವೇಗಮಿತಿ ಲೆಕ್ಕಕ್ಕಿಲ್ಲ! ಆತಂಕ ಸೃಷ್ಟಿಸುತ್ತಿವೆ ಮಂಗಳೂರು ಸರಣಿ ರಸ್ತೆ ಅಪಘಾತಗಳು

ರಸ್ತೆಗೆ ತೀರಾ ಪಕ್ಕದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬಾರದು

Team Udayavani, Mar 17, 2023, 3:25 PM IST

ವೇಗಮಿತಿ ಲೆಕ್ಕಕ್ಕಿಲ್ಲ! ಆತಂಕ ಸೃಷ್ಟಿಸುತ್ತಿವೆ ಮಂಗಳೂರು ಸರಣಿ ರಸ್ತೆ ಅಪಘಾತಗಳು

ಮಹಾನಗರ: ಮಂಗಳೂರು ನಗರದಲ್ಲಿ ಅಪಘಾತಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು, ಆತಂಕ ಮೂಡಿಸಿದೆ. ಭೀಕರ ಅಪಘಾತಗಳು ಸರಣಿಯಂತೆ ಸಂಭವಿಸುತ್ತಿವೆ. ಒಂದೆಡೆ ಸವಾರರು/ ಚಾಲಕರು ಸಂಚಾರ ನಿಯಮ ಪಾಲನೆ ಮಾಡದಿರುವುದು, ಇನ್ನೊಂದೆಡೆ ಸಂಚಾರ ನಿಯಮ ಪಾಲನೆ ಮಾಡದವರ ಬಗ್ಗೆ ಪೊಲೀಸರು ನಿಗಾ ಕಡಿಮೆಗೊಳಿಸಿರುವುದು ಕಂಡುಬರುತ್ತಿದೆ ಎಂದು ನಗರದ ನಾಗರಿಕರು ದೂರಿದ್ದಾರೆ.

ಅತೀವೇಗ, ಓವರ್‌ಟೇಕ್‌ ಭರಾಟೆ, ಮದ್ಯಸೇವಿಸಿ ವಾಹನ ಚಾಲನೆ, ದ್ವಿಚಕ್ರ ವಾಹನಗಳಲ್ಲಿ ಹೆಲ್ಮೆಟ್‌ ರಹಿತ ಸಂಚಾರ ಸಾಮಾನ್ಯ ಎಂಬಂತಾಗಿದೆ. ಹಗಲಿನ ವೇಳೆಯೇ ಸಂಚಾರ ನಿಯಮ ಉಲ್ಲಂಘನೆ ವ್ಯಾಪಕವಾಗಿ ನಡೆಯುತ್ತಿದೆ. ರಾತ್ರಿ 8 ಗಂಟೆಯ ಅನಂತರ ಉಲ್ಲಂಘನೆ ತೀರಾ ಸಾಮಾನ್ಯ ಎನ್ನುವಷ್ಟರ ಮಟ್ಟಿಗೆ ಇದೆ. ರಸ್ತೆಗಳು ಉತ್ತಮಗೊಳ್ಳುತ್ತಿದ್ದರೂ ಅಪಘಾತಗಳ ಸಂಖ್ಯೆ ಹೆಚ್ಚುತ್ತಿವೆ.

ಅಪಘಾತಗಳ ಸರಣಿ
ಫೆ. 21ರಂದು ಬಿಜೈನಲ್ಲಿ ಆಟೋರಿಕ್ಷಾಕ್ಕೆ ಬೈಕ್‌ ಢಿಕ್ಕಿಯಾಗಿ ವಿದ್ಯಾರ್ಥಿ ಮೃತಪಟ್ಟಿದ್ದ. ಆತ ಹೆಲ್ಮೆಟ್‌ ಧರಿಸಿರಲಿಲ್ಲ. ಮಾ. 12ರಂದು ಕೋಡಿಕಲ್‌ ಕ್ರಾಸ್‌ ಬಳಿ ರಾ.ಹೆದ್ದಾರಿ 66ರಲ್ಲಿ ಕಾರು ಢಿಕ್ಕಿಯಾಗಿ ಸ್ಕೂಟರ್‌ ಸವಾರ ಮೃತಪಟ್ಟಿದ್ದರು.

ಕಾರು ಚಾಲಕ ಮದ್ಯಸೇವನೆ ಮಾಡಿದ್ದ. ಮಾ. 13ರಂದು ಲೇಡಿಹಿಲ್‌ನಲ್ಲಿ ವಿದ್ಯುತ್‌ ಕಂಬಕ್ಕೆ ಸ್ಕೂಟರ್‌ ಢಿಕ್ಕಿಯಾಗಿ ಸವಾರ ಮೃತಪಟ್ಟು ಸಹಸವಾರ ಗಾಯ ಗೊಂಡಿದ್ದರು. ಓವರ್‌ಟೇಕ್‌ನಿಂದಾಗಿ ಅಪಘಾತ ಸಂಭವಿಸಿತ್ತು. ಕಳೆದ ವರ್ಷದ ಅ. 12ರಂದು ನಂತೂರು ಜಂಕ್ಷನ್‌ನಲ್ಲಿ ಸ್ಕೂಟರ್‌ಗ ಬಸ್‌ ಢಿಕ್ಕಿಯಾಗಿ ಸ್ಕೂಟರ್‌ ಸವಾರ ಮೃತಪಟ್ಟಿದ್ದರು. ಅ. 14ರಂದು ಆಕಾಶಭವನದಲ್ಲಿ ಆಮ್ನಿ ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದರು.

ಅ. 17ರಂದು ಲಾಲ್‌ಬಾಗ್‌ ಜಂಕ್ಷನ್‌ನಲ್ಲಿ ಸ್ಕೂಟರ್‌ಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿದ್ದ ಬಾಲಕ ಮೃತಪಟ್ಟಿದ್ದ. ವೇಗಮಿತಿ 40 ಕಿ.ಮೀ. ನಿಗದಿಗೊಳಿಸಿ ನಗರದಲ್ಲಿ ವಾಹನಗಳ ಓಡಾಟಕ್ಕೆ ಇರುವ ವೇಗ ಮಿತಿ ನಿಯಮವೂ ಪಾಲನೆಯಾಗುತ್ತಿಲ್ಲ. ವೇಗಮಿತಿ ಇದೆ ಎಂಬುದು ಹೆಚ್ಚಿನ ಚಾಲಕರಿಗೆ ಅರಿವಿಲ್ಲ. ವೇಗಮಿತಿಯ ಸೂಚನ ಫ‌ಲಕ ಅಳವಡಿಸಿಲ್ಲ. ವೇಗಮಿತಿ ನಿಯಮ ಉಲ್ಲಂಘಿಸಿದರೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ನಗರದ ಮುಖ್ಯ
ರಸ್ತೆಗೆ ವೇಗಮಿತಿ 40 ಕಿ.ಮೀ. ಇಟ್ಟು ನಗರದ ಇತರ ರಸ್ತೆಗಳ ವೇಗಮಿತಿಯನ್ನು ಅದಕ್ಕಿಂತಲೂ ಕಡಿಮೆಗೊಳಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಟಿ ವ್ಯಾಪ್ತಿ ಯಲ್ಲಿ 60 ಕಿ.ಮೀ.ಗೆ ಮಿತಿಗೊಳಿಸಬೇಕು ಎಂದು ರಸ್ತೆ ಸುರಕ್ಷತ ಸಮಿತಿ ಸದಸ್ಯ ಗೋಪಾಲಕೃಷ್ಣ ಭಟ್‌ ತಿಳಿಸಿದ್ದಾರೆ.

ಸುಗಮ ಸಂಚಾರಕ್ಕೆ ಸಲಹೆ
ಸಂಚಾರ ನಿಯಮ ಉಲ್ಲಂ ಸುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ವೇಗಮಿತಿ ನಿಯಮ ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಬೇಕು. ಅಗತ್ಯವಿರುವಲ್ಲಿ ಬೀದಿ ದೀಪದ ವ್ಯವಸ್ಥೆ ಮಾಡಬೇಕು. ರಸ್ತೆಗೆ ತೀರಾ ಪಕ್ಕದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬಾರದು. ಅಸಮರ್ಪಕ ವಿನ್ಯಾಸ, ಕಾಮಗಾರಿಯ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು.

ರಸ್ತೆ ಸುರಕ್ಷಕ್ಷತಾ ಸಮಿತಿಯ ಸಭೆಗಳನ್ನು ನಿಯಮಿತವಾಗಿ ನಡೆಸಿ ಅಹವಾಲು- ಸಲಹೆ ಆಲಿಸಬೇಕು. ಮುಖ್ಯರಸ್ತೆ ಪ್ರವೇಶಿಸುವಲ್ಲಿ ಒಳರಸ್ತೆಗಳಿಗೆ ಸ್ಪೀಡ್‌ ಬ್ರೇಕರ್‌ ಅಳವಡಿಸಬೇಕು. ಎಲ್ಲ ವಾಹನ ಅಪಘಾತ ಸ್ಥಳಗಳಲ್ಲಿ ಪರಿಶೀಲನೆ ನಡೆಸಿ ಸೂಚನ ಫ‌ಲಕ ಅಳವಡಿಕೆ ಮತ್ತಿತರ ಕ್ರಮ ಕೈಗೊಳ್ಳಬೇಕು.

ಅತೀವೇಗದ ಚಾಲನೆಗೆ ಪ್ರಕರಣ ನಗರದಲ್ಲಿ ವಾಹನಗಳಿಗೆ ವೇಗಮಿತಿ ಇದೆ. ಅತಿಯಾದ ವೇಗದಲ್ಲಿ ವಾಹನ ಚಲಾಯಿಸಿದರೆ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ. ವೇಗಮಿತಿ ನಿಯಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
– ಗೀತಾ ಕುಲಕರ್ಣಿ, ಎಸಿಪಿ,
ಸಂಚಾರ ವಿಭಾಗ, ಮಂಗಳೂರು

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.