ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಶೀಘ್ರ ಬರಲಿದೆ ಸ್ವೈಪಿಂಗ್‌ ಮೆಶಿನ್‌

ಇನ್ನು ಎದುರಾಗದು ಚಿಲ್ಲರೆ ಸಮಸ್ಯೆ; ಎಲ್ಲೆಡೆ ಬಳಸಬಹುದಾದ ಕಾಮನ್‌ ಮೊಬಿಲಿಟಿ ಕಾರ್ಡ್‌ಗೂ ಚಿಂತನೆ

Team Udayavani, Nov 11, 2019, 5:15 AM IST

KSRTC-S

ಮಂಗಳೂರು: ಕೆಎಸ್ಸಾರ್ಟಿಸಿ ಡಿಜಿಟಲ್‌ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವತ್ತ ದಿಟ್ಟ ಹೆಜ್ಜೆ ಯಿಡುತ್ತಿದ್ದು, ಶೀಘ್ರವೇ ದೂರ ಪ್ರಯಾಣದ ಬಸ್‌ಗಳಲ್ಲಿ ಸ್ವೈಪಿಂಗ್‌ ಮೆಶಿನ್‌ ಬರಲಿದೆ. ಇದರಿಂದ ಕ್ಯಾಶ್‌ಲೆಸ್‌ ಪ್ರಯಾಣ ಸಾಧ್ಯವಾಗಲಿದೆ.

ಪ್ರಯಾಣಿಕರು ಮತ್ತು ನಿರ್ವಾಹಕರ ನಡುವೆ ಚಿಲ್ಲರೆ ಸಮಸ್ಯೆ ತೀರಾ ಸಾಮಾನ್ಯವಾಗಿದೆ. ಕೆಲ ವೊಂದು ಈ ಕುರಿತಾದ ಜಗಳ ತಾರಕಕ್ಕೆ ಏರಿದ್ದೂ ಇದೆ. ಅದೇ ಸಂದರ್ಭ ಇದು ಇತರ ಪ್ರಯಾಣಿಕರಿಗೆ ಕಿರಿಕಿರಿಯೂ ಆಗುತ್ತದೆ. ಇದಕ್ಕೆಲ್ಲ ಪರಿಹಾರ ಎಂಬಂತೆ ಸ್ವೈಪಿಂಗ್‌ ಯಂತ್ರ ಅಳವಡಿಸಿಕೊಳ್ಳಲು ಕೆಎಸ್ಸಾರ್ಟಿಸಿ ಚಿಂತಿಸಿದೆ.

ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌ ಸ್ವೈಪ್‌ ವ್ಯವಸ್ಥೆಯನ್ನು ಪರಿಚಯಿಸಲಿದೆ. ಮೊದಲಿಗೆ ದೂರ ಪ್ರಯಾಣದ ವೋಲ್ವೊ, ಐರಾವತ, ಹೊರ ರಾಜ್ಯಗಳಿಗೆ ತೆರಳುವ ಬಸ್‌ಗಳಲ್ಲಿ ಮತ್ತು ಘಟಕಗಳ ಟಿಕೆಟ್‌ ಕೌಂಟರ್‌ಗಳಲ್ಲಿ ಸ್ಪೈಪ್‌ ಮೆಶಿನ್‌ ಅಳವಡಿಸುವ ಬಗ್ಗೆ ಚರ್ಚೆ ನಡೆಯು ತ್ತಿದೆ. ನಿಗಮ ಮಟ್ಟದಲ್ಲಿ ಈಗಾಗಲೇ ರೂಪು ರೇಷೆ ತಯಾರಾಗಿದ್ದು, ಮುಂಬರುವ ನಿಗಮ ಮಟ್ಟದ ಸಭೆಯಲ್ಲಿ ಪ್ರಸ್ತಾವಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೆಎಸ್ಸಾರ್ಟಿಸಿ ಮೂಲಗಳು ತಿಳಿಸಿವೆ.

ಇಟಿಎಂ ಅಳವಡಿಕೆ
ನಿಗಮದ ಎಲ್ಲ ಬಸ್‌ ನಿರ್ವಾಹಕರ ವಿದ್ಯುನ್ಮಾನ ಟಿಕೆಟಿಂಗ್‌ ಯಂತ್ರ (ಇಟಿಎಂ)ಗಳನ್ನೂ ಡಿಜಿಟಲ್‌ ಆಗಿ ಉನ್ನತೀಕರಿಸಲಾಗುತ್ತದೆ. ಈ ವ್ಯವಸ್ಥೆ ಯನ್ನು “ಜಿಪಿಆರ್‌ಎಸ್‌ ಎನೇಬಲ್ಡ್‌ ಜಿಪಿಎಸ್‌ ಮ್ಯಾನೇಜಿಂಗ್‌ ಸಿಸ್ಟಮ್‌’ ಎಂದು ಕರೆಯ ಲಾಗುತ್ತದೆ. ಇಟಿಎಂ ಒಳಗೆ ಸಿಮ್‌ ಮಾದರಿಯ ಸಣ್ಣ ಚಿಪ್‌ ಅಳವಡಿಸಲಾಗುತ್ತದೆ. ಟಿಕೆಟ್‌ ಹಣ ಎಷ್ಟು ಸಂಗ್ರಹವಾಗುತ್ತಿದೆ ಎಂಬ ನೇರ ಮಾಹಿತಿ ಈ ಮೂಲಕ ಲಭ್ಯವಾಗಲಿದೆ. ವಿಭಾಗ ಕಚೇರಿಗಳಲ್ಲಿ, ಪ್ರಧಾನ ಕಚೇರಿಗಳಲ್ಲಿ ಅಧಿಕಾರಿಗಳು ನಿಖರ ಲೆಕ್ಕಾಚಾರ ಪಡೆಯಲು ಇದರಿಂದ ಸಾಧ್ಯವಾಗಲಿದೆ.

2004ರಿಂದ ಇಟಿಎಂ
2004ರಿಂದ ನಿಗಮದ ಎಲ್ಲ ಬಸ್‌ಗಳಲ್ಲಿ ಇಟಿಎಂ ಮೂಲಕವೇ ಟಿಕೆಟ್‌ ನೀಡಲಾಗುತ್ತಿದೆ. ಈಗ ಕರಾರು ಅವಧಿ ಪೂರ್ಣ ಗೊಳಿಸಿದ ಇಟಿಎಂಗಳನ್ನು ಅಪ್‌ಗ್ರೇಡ್ ಮಾಡಲಾಗುತ್ತಿದೆ.2 ಸಾವಿರ ಬಸ್‌ಗಳಿಗೆ ವಿಟಿಎಂಎಸ್‌ ಕೆಎಸ್ಸಾರ್ಟಿಸಿಯಲ್ಲಿ ಈಗಾಗಲೇ 84 ಘಟಕ ಗಳಿದ್ದು, 17 ವಿಭಾಗಗಳಿವೆ. ಮಂಗಳೂರು, ಪುತ್ತೂರು, ಮೈಸೂರು ಗ್ರಾಮಾಂತರ, ರಾಮನಗರ ವಿಭಾಗಗಳ ಒಟ್ಟು 2 ಸಾವಿರ ಬಸ್‌ಗಳಲ್ಲಿ ಮೊದಲನೇ ಹಂತವಾಗಿ ವೆಹಿಕಲ್‌ ಟ್ರ್ಯಾಕಿಂಗ್‌ ಆ್ಯಂಡ್‌ ಮಾನಿಟರಿಂಗ್‌ ಸಿಸ್ಟಂ (ವಿಟಿಎಂಎಸ್‌) ಅಳವಡಿಸಲಾಗಿದೆ.

ಕಾಮನ್‌ ಮೊಬಿಲಿಟಿ ಕಾರ್ಡ್‌
ಒಂದು ಕಡೆಯಲ್ಲಿ ಸ್ವೈಪಿಂಗ್‌ ಮೆಶಿನ್‌ ಅಳವಡಿಸಲು ನಿರ್ಧರಿಸಿದರೆ, ಇನ್ನೊಂದೆಡೆ ಕಾಮನ್‌ ಮೊಬಿಲಿಟಿ ಕಾರ್ಡ್‌ ಜಾರಿಗೊಳಿಸುವ ಪ್ರಯತ್ನವೂ ಸಾಗುತ್ತಿದೆ. ಕೆಎಸ್ಸಾರ್ಟಿಸಿಯಿಂದ ನೀಡಲಾಗುವ ಎಟಿಎಂ ಮಾದರಿಯ ಕಾರ್ಡನ್ನು ರೀಚಾರ್ಜ್‌ ಮಾಡಿದರೆ ಅದನ್ನು ವಿವಿಧೆಡೆ ಬಳಸಲು ಅನುಕೂಲವಾಗಲಿದೆ.

ನಿರ್ದಿಷ್ಟ ಬ್ಯಾಂಕ್‌ ಜತೆ ಕೆಎಸ್ಸಾರ್ಟಿಸಿ ಒಪ್ಪಂದ ಮಾಡಿಕೊಂಡು ಇದನ್ನು ಜಾರಿಗೆ ತರಲಿದೆ. ಇದೊಂದು ಬಹೂಪ ಯೋಗಿ ಕಾರ್ಡ್‌ ಆಗಿರಲಿದೆ. ಕೆಎಸ್ಸಾರ್ಟಿಸಿ ಬಸ್‌ ಮಾತ್ರವಲ್ಲದೆ ಇದೇ ಕಾರ್ಡ್‌ ಬಳಸಿ ಬಿಎಂಟಿಸಿ, ನಮ್ಮ ಮೆಟ್ರೋಗಳಲ್ಲಿಯೂ ಬಳಸಲು ಅವಕಾಶ ನೀಡಲಿದೆ. ಮಾತ್ರವಲ್ಲದೆ ಬ್ಯಾಂಕ್‌ ಜತೆ ಒಪ್ಪಂದ ಮಾಡಿಕೊಂಡಿರುವುದರಿಂದ ಈ ಕಾರ್ಡ್‌ ಅನ್ನು ಶಾಪಿಂಗ್‌ಗೆ ಕೂಡ ಬಳಸಬಹುದು. ಇದಕ್ಕೆ ಮೊಬೈಲ್‌ ರೀಚಾರ್ಜ್‌ ರೀತಿ ಹಣ ತುಂಬ ಬಹುದು. ಎಲ್ಲ ಕೆಎಸ್ಸಾರ್ಟಿಸಿ ಕಚೇರಿಗಳಲ್ಲಿಯೂ ಈ ಕಾರ್ಡ್‌ಗೆ ಹಣ ತುಂಬುವುದಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಸ್ವೈಪಿಂಗ್‌ ಮೆಶಿನ್‌ ಅಳವಡಿಸುವ ಕುರಿತು ಚರ್ಚೆ ನಡೆದಿದೆ. ಮೊದಲಾಗಿ ದೂರ ಪ್ರಯಾಣದ ಬಸ್‌ಗಳಲ್ಲಿ ಇದನ್ನು ಅಳವಡಿಸಲಾಗುತ್ತದೆ. ಇದರಿಂದ ಚಿಲ್ಲರೆ ಸಮಸ್ಯೆ ನಿವಾರಣೆಯಾಗಲಿವೆ. ಇದು ಅಲ್ಲದೆ ಕಾಮನ್‌ ಮೊಬಿಲಿಟಿ ಕಾರ್ಡ್‌ ಸಹಿತ ಇತರ ಹಲವಾರು ಉಪಕ್ರಮಗಳೂ ಶೀಘ್ರ ಜಾರಿಗೆ ಬರಲಿದೆ.
– ಶಿವಯೋಗಿ ಕಳಸದ್‌, ನಿರ್ದೇಶಕರು, ಕೆಎಸ್ಸಾರ್ಟಿಸಿ

- ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.