ದೇವಸ್ಥಾನಗಳಿಗೆ ಭಕ್ತಿಯಿಂದ ಹೋಗಬೇಕು
Team Udayavani, Feb 14, 2019, 1:20 AM IST
ಮಂಗಳೂರು: ದೇವಸ್ಥಾನಗಳಿಗೆ ಪ್ರೀತಿ-ಭಕ್ತಿಯಿಂದ ಹೋಗಬೇಕೇ ವಿನಾ ವ್ಯಾಪಾರದ ದೃಷ್ಟಿಯಿಂದ ಹೋಗಬಾರದು ಎಂದು ಪೊಳಲಿಯ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ ಅವರು ಹೇಳಿದರು.
ಕುಲಶೇಖರದ ಶ್ರೀ ವೀರನಾರಾ ಯಣ ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರೆ ಕುಂಭ ಮಹೋತ್ಸವದಲ್ಲಿ ಮಂಗಳವಾರ ದಂದು ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು, ಆಚಾರ,ವಿಚಾರ, ಸಂಸ್ಕೃತಿಯನ್ನು ಪ್ರತಿಯೊ ಬ್ಬರೂ ಪಾಲನೆ ಮಾಡಬೇಕು ಎಂದರು.
ಪಾಲಿಕೆ ಮೇಯರ್ ಭಾಸ್ಕರ್ ಕೆ. ಮಾತನಾಡಿ, ಮನುಷ್ಯರು ಪರಸ್ಪರ ಪ್ರೀತಿ ವಿಶ್ವಾಸದಿಂದ ಇದ್ದರೆ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯ. ದೇವರಿಗೆ ನಮಿಸಿದಾಗ ಕಷ್ಟಗಳು ದೂರವಾಗುತ್ತವೆ. ಹಿರಿಯರು ಪಾಲಿಸಿಕೊಂಡು ಬಂದ ಸಂಸ್ಕೃತಿ, ಪರಂಪರೆಯನ್ನು ಇಂದಿನ ಮಕ್ಕಳಿಗೆ ತಿಳಿಯಪಡಿಸಬೇಕಾದ ಜವಾಬ್ದಾರಿ ಪೋಷಕರ ಮೇಲಿದೆ ಎಂದರು.
ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನ ಆಡಳಿತ ಮೊಕ್ತೇಸರ ಪುರುಷೋತ್ತಮ ಕುಲಾಲ್ ಕಲಾºವಿ ಪ್ರಾಸ್ತಾವಿಕ ಮಾತನಾಡಿದರು.
ಉಪ್ಪಿನಂಗಡಿಯ ನಿವೃತ್ತ ಬಿಎಸ್ಎಫ್ ಕಮಾಂಡೆಂಟ್ ಡಿ. ಚಂದಪ್ಪ ಮೂಲ್ಯ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್, ನಿವೃತ್ತ ಯೋಧ ಗೋಪಾಲ ಬೋಳೂರು ಉರ್ವ, ಪೆರ್ಡೂರಿನ ಕುಲಾಲ ಸಂಘ ಗೌರವಾಧ್ಯಕ್ಷ ರಾಮ ಕುಲಾಲ್ ಪಕ್ಕಾಲು, ಅದ್ಯಪಾಡಿಯ ಕುಲಾಲ ಸಂಘದ ಅಧ್ಯಕ್ಷ ಸುಂದರ ಎಸ್. ಬಂಗೇರ ಅದ್ಯಪಾಡಿ, ಕಾರ್ಪೊರೇಶನ್ ಬ್ಯಾಂಕ್ ಪ್ರ,ಕಚೇರಿಯ ಜನರಲ್ ಮ್ಯಾನೇಜರ್ ಇ.ಎಸ್. ನಾಗರಾಜ ಉಡುಪ, ಶ್ರೀ ವೀರನಾರಾಯಣ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಭವಾನಿಶಂಕರ್ ಮರೋಳಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಮೋದರ ಎ., ಮಾತೃ ಮಂಡಳಿ ಅಧ್ಯಕ್ಷೆ ಕೆ.ಸಿ. ಲೀಲಾವತಿ, ಮಮತಾ ಅಣ್ಣಯ್ಯ ಕುಲಾಲ್ ಮುಂತಾದವರು ಇದ್ದರು.
ಪಾಶ್ಚಿಮಾತ್ಯರ ಒಳ್ಳೆಯತನ, ವೈಜ್ಞಾನಿಕ, ತಾಂತ್ರಿಕ ಬೆಳವಣಿಗೆಯನ್ನು ಅನುಸರಿಸುವ ಜತೆಗೆ ನಮ್ಮ ಸಂಸ್ಕೃತಿಯನ್ನು ಬೆಳೆಸಬೇಕಿದೆ. ಭಗವಂತನ ಸಾಕ್ಷಾತ್ಕಾರಕ್ಕಾಗಿ ಕೆಲಸ ಮಾಡಬೇಕು. ಗುರಿ ಮುಟ್ಟಲು ಭಗವಂತನನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸಬೇಕು ಎಂದು ಸ್ವಾಮಿ ಚೈತನ್ಯಾನಂದ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು