ಪೇಟೆ ಬೀದಿಗಳಲ್ಲಿ ಕುಣಿಯುವ ಹುಲಿಗಳ ಅಬ್ಬರ!


Team Udayavani, Sep 23, 2017, 5:53 PM IST

23Udi-4.jpg

ಆಲಂಕಾರು : ತಾಸೆದ ಪೆಟ್ಟಿಗೆ ಢೋಲಿನ ಸಾಥ್‌ನೊಂದಿಗೆ ನಾಡಿನ ಹುಲಿಗಳು ಪೇಟೆಗೆ ಧಾವಿಸುತ್ತಿವೆ.ಹುಲಿ, ಕರಡಿ, ಸಿಂಹ ಸಹಿತ ಹಲವು ವೇಷಗಳು ನವರಾತ್ರಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಲಿವೆ. ಈ ಮೂಲಕ ಪರಂಪರೆಯನ್ನು ಜೀವಂತವಾಗಿ ಇರಿಸಿಕೊಳ್ಳುವ ಪ್ರಯತ್ನವೂ ನಡೆದಿದೆ.

ವಿನಾಶದ ಅಂಚಿನಲ್ಲಿರುವ ಕಾಡು ಪ್ರಾಣಿಗಳ ವೇಷವನ್ನು ಧರಿಸಿ ಜನರಲ್ಲಿ ಜಾಗೃತಿ ಮೂಡಿಸುವುದಲ್ಲದೆ, ಯಕ್ಷಗಾನ, ಯಮ, ನಾರದ, ಋಷಿ, ನಪ್ಪು ಬಾಲೆ ಮುಂತಾದ ವೇಷಗಳನ್ನೂ ಧರಿಸಿ ಒತ್ತಡದಲ್ಲಿರುವವರಿಗೆ ಒಂದಿಷ್ಟು ಖುಷಿ ನೀಡುವುದು ಈ ಕಲಾವಿದರ ಉದ್ದೇಶ.

ಗ್ರಾಮೀಣ ಕಲಾವಿದರು
ಗ್ರಾಮೀಣ ಪ್ರತಿಭೆಗಳಿಗೆ ಇದೊಂದು ಸೂಕ್ತ ವೇದಿಕೆಯಾಗಿ ಮಾರ್ಪಟ್ಟಿದೆ. ಕೆಲವರು ಇದನ್ನು ಧಾರ್ಮಿಕ ಕಟ್ಟು ಪಾಡಿನ ಆಚರಣೆಯಾಗಿ ಬಳಸಿದರೆ, ಮತ್ತೆ ಕೆಲವರು ಹರಕೆಯ ರೂಪದಲ್ಲಿ ತಮ್ಮ ಸೇವೆ ಮಾಡುತ್ತಾರೆ. 

ವಿವಿಧ ವೇಷಗಳು
ಹುಲಿ, ಕರಡಿ, ಸಿಂಹ ಪ್ರಮುಖ ಗುಂಪು ವೇಷಗಳಾದರೆ, ಬೇಟೆಗಾರ, ಪೈಂಟರ್‌, ಬೇಲಿ ಹಾಕುವವರು, ಗಾರೆ ಕೆಲಸಗಾರರಾಗಿ, ನಪ್ಪುಬಾಲೆ, ಯಕ್ಷಗಾನ, ಯಮ, ನಾರದ, ಋಷಿ- ಹೀಗೆ ಹತ್ತು ಹಲವು ಒಂಟಿ ವೇಷ ಧರಿಸಿ ದುರ್ಗೆಯ ಆರಾಧನೆ ಮಾಡುವ ವಾಡಿಕೆಯಿದೆ. 

ಹೆಚ್ಚಿನ ತಂಡಗಳು ಈಗಿಲ್ಲ
ಹಲವು ವರ್ಷದ ಹಿಂದೆ ನವರಾತ್ರಿ ವೇಷಗಳಿಗೆ ವಿಶೇಷವಾದ ಗೌರವವಿತ್ತು. ಆದರೆ ಇಂದು ಮಹತ್ವ ಕಡಿಮೆಯಾಗಿದೆ. ಟಿ.ವಿ, ಮೊಬೈಲ್‌ಗ‌ಳ ಪ್ರಭಾವದಿಂದಾಗಿ ಜನರೂ ಒಲವು ಕಳೆದುಕೊಂಡಿದ್ದಾರೆ. ಇದಕ್ಕೆ ಪೂರಕವೆಂಬಂತೆ ವೇಷಧಾರಿಗಳ ಸಂಖ್ಯೆಯೂ ಕಡಿಮೆಯಾಗಿದೆ. ಇಂದು ವೇಷಧಾರಿಗಳು ದಿನಕ್ಕೆ 2000 ರೂ.ಗಳಿಗೂ ಹೆಚ್ಚು ಸಂಬಳದ ಬೇಡಿಕೆ ಯಿಡುತ್ತಿದ್ದಾರೆ. 

ಒಂದು ಹುಲಿ ಅಥವಾ ಕರಡಿ ವೇಷದ ತಂಡದಲ್ಲಿ 7ಮಂದಿ ಅಗತ್ಯವಿದ್ದು, ದಿನಕ್ಕೆ 14 ಸಾವಿರ ರೂ. ಸಂಬಳ ಭರಿಸಬೇಕು. ಊಟ-ತಿಂಡಿ ಖರ್ಚು, ಪ್ರಯಾಣ ವೆಚ್ಚ ಸೇರಿಸಿದರೆ 20 ಸಾವಿರ ರೂ.ಗಳಿಗೂ ಅಧಿಕ ಖರ್ಚು ಇದೆ. ಇಷ್ಟು ಖರ್ಚು ಭರಿಸುವ ಸಾಮರ್ಥ್ಯವಿಲ್ಲದೆ ಹಾಗೂ ದೇಣಿಗೆಯೂ ಸಂಗ್ರಹವಾಗದೆ ತಂಡಗಳು ಕಡಿಮೆಯಾಗುತ್ತಿವೆ ಎಂಬ ಅಭಿಪ್ರಾಯವಿದೆ.

ಹರಕೆ ಸಂದಾಯ
ತಮ್ಮ ಕೃಷಿಗೆ ಕಾಡು ಪ್ರಾಣಿಗಳ ವಿಪರೀತ ಉಪಟಳ, ಆರೋಗ್ಯ ಸಹಿತ ಹಲವು ದೈನಂದಿನ ಹಾಗೂ ವ್ಯಾವಹಾರಿಕ ಸಮಸ್ಯೆಗಳ ಪರಿಹಾರಕ್ಕೆ ಜನರು ದೇವರ ಮೊರೆ ಹೋಗುತ್ತಾರೆ. ನವರಾತ್ರಿಯ ಸಮಯದಲ್ಲಿ ವಿಶೇಷ ವೇಷ ಧರಿಸಿ ತಮ್ಮ ಸಮಸ್ಯೆ ಬಗೆಹರಿಸಿದ ದುರ್ಗೆಗೆ ಹರಕೆ ಸಂದಾಯ ಮಾಡುತ್ತಾರೆ. ವೇಷಧಾರಿಗಳು ಮೊದಲ ದಿವಸ ಬಣ್ಣ ಬಳಿದ ಬಳಿಕ ಕೊನೆಯ ದಿನ ದೇವಸ್ಥಾನದಲ್ಲಿ ಸೇವೆ ನಡೆಸಿಯೇ ಬಣ್ಣ ತೆಗೆಯುತ್ತಾರೆ. ರಾತ್ರಿ ತೆಂಗಿನ ಗರಿಯ ಚಾಪೆ ಮೇಲೆ ಮಲಗಿ, ಮಾಂಸಾಹಾರ-ಮದ್ಯಪಾನವನ್ನೂ ತ್ಯಜಿಸಿ ವ್ರತಾಚರಣೆ ಮಾಡುತ್ತಾರೆ.

ಸದಾನಂದ ಆಲಂಕಾರು

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.