ಹೆದ್ದಾರಿಗೆ ಬಿದ್ದ ಮರ: ಸಚಿವರ ವಾಹನಕ್ಕೆ ತಡೆ
Team Udayavani, Jul 11, 2018, 2:21 PM IST
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ರಾ.ಹೆ. 75ರಲ್ಲಿ ಬರುವ ಪೆರಿಯಶಾಂತಿ ಬಳಿಯ ಲಾವತ್ತಡ್ಕದಲ್ಲಿ ಮಂಗಳವಾರ ಸಾಯಂಕಾಲ ಹೆದ್ದಾರಿಗೆ ಮರವೊಂದು ಬಿದ್ದ ಪರಿಣಾಮ ಅದೇ ದಾರಿಯಾಗಿ ಬೆಂಗಳೂರಿನತ್ತ ಸಾಗುತ್ತಿದ್ದ ವಿಧಾನಸಭಾಧ್ಯಕ್ಷರು, ಸಚಿವರು, ವಿಧಾನ ಪರಿಷತ್ ಸದಸ್ಯರ ಸಂಚಾರಕ್ಕೆ ತಡೆಯುಂಟಾಯಿತು.
ಮಂಗಳವಾರ ನಿಧನ ಹೊಂದಿದ ಮಾಜಿ ಸಚಿವ ಬಿ.ಎ. ಮೊಹಿದೀನ್ ಅವರ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವಿಧಾನ ಸಭಾಧ್ಯಕ್ಷ ರಮೇಶ್ ಕುಮಾರ್, ಸಚಿವ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರು ಬೆಂಗಳೂರಿನಿಂದ ಶಿರಾಡಿ ಘಾಟಿ ಮಾರ್ಗವಾಗಿ ಸಂಚರಿಸುತ್ತಿದ್ದರು. ರಸ್ತೆ ತಡೆಯಿಂದಾಗಿ ಸ್ವಲ್ಪ ಕಾಲ ಅಲ್ಲೇ ಉಳಿದ ಅವರು ಬಳಿಕ ಇಚ್ಲಂಪಾಡಿಯಲ್ಲಿ ಕಚ್ಚಾರಸ್ತೆಯ ಮೂಲಕ ಸಂಚರಿಸಿ ಪ್ರಯಾಣ ಮುಂದುವರಿಸಿದರು.
ಅರಣ್ಯ ಇಲಾಖಾ ಸಿಬಂದಿ ತುರ್ತು ಕಾರ್ಯಾಚರಣೆ ನಡೆಸಿ ಬಿದ್ದ ಮರವನ್ನು ತೆರವುಗೊಳಿಸಿದರು.
ಶಿರಾಡಿ: ಗಣ್ಯರಿಗೆ ಮುಕ್ತ !
ಕಾಂಕ್ರೀಟ್ ಕಾಮಗಾರಿ ಕಾರಣಕ್ಕೆ ಶಿರಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಸ್ಥಳೀಯರಿಗೆ ಕೂಡ ಈ ರಸ್ತೆಯನ್ನು ಬಳಸಲು ಅವಕಾಶ ನೀಡಲಾಗದು ಎಂದು ಕಟ್ಟಪ್ಪಣೆ ಮಾಡಲಾಗಿತ್ತು. ಆದರೆ ಮಂಗಳವಾರ ಸಚಿವರಾದಿಯಾಗಿ ರಾಜಕಾರಣಿಗಳು ಈ ರಸ್ತೆಯಲ್ಲಿ ಸಂಚರಿಸುವುದರೊಂದಿಗೆ ನಿಷೇಧ ಕೇವಲ ಸಾಮಾನ್ಯ ಜನರಿಗೆ ಮಾತ್ರ ಎನ್ನುವುದು ಜಗಜ್ಜಾಹೀರಾಯಿತು.
ಈ ಹಿಂದೆಯೂ ಕಾಮಗಾರಿ ನಡೆಯುತ್ತಿದ್ದ ವೇಳೆ ಅಧಿಕಾರಿಗಳಿಗೆ ಹಾಗೂ ರಾಜಕಾರಣಿಗಳಿಗೆ ಮುಕ್ತ ಸಂಚಾರ ಪ್ರಾಪ್ತವಾಗಿತ್ತಾದರೂ ಅದೆಲ್ಲವೂ ಗೌಪ್ಯವಾಗಿತ್ತು. ಇಂದು ರಸ್ತೆಗೆ ಮರ ಬಿದ್ದು ಸಂಚಾರ ಸ್ಥಗಿತಗೊಂಡ ಕಾರಣ ಪ್ರಭಾವಿಗಳ ವಾಹನ ಸಂಚಾರ ನಿರಾತಂಕವಾಗಿದೆ ಎನ್ನುವುದು ಜನಸಾಮಾನ್ಯರಿಗೆ ತಿಳಿಯಿತು. ಪ್ರಭಾವಿಗಳ ವಾಹನ ಸಂಚಾರದಿಂದ ಕಾಮಗಾರಿಯ ಗುಣಮಟ್ಟಕ್ಕೆ ಯಾವುದೇ ತೊಂದರೆಯಾಗಲಾರದೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
ಶಿರಾಡಿ ಘಾಟಿ ರಸ್ತೆ ತೆರೆದಿಲ್ಲ : ಡಿ.ಸಿ.
ಮಂಗಳೂರು: ಶಿರಾಡಿ ಘಾಟಿ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ ಎಂಬ ಸಂದೇಶ ರವಾನೆಯಾಗುತ್ತಿದ್ದು, ಇದು ಸುಳ್ಳು, ವದಂತಿ ಮಾತ್ರ. ರಸ್ತೆ ಕಾಮಗಾರಿ ಸಂಪೂರ್ಣವಾಗದ ಹಿನ್ನೆಲೆಯಲ್ಲಿ ಶಿರಾಡಿ ಘಾಟಿ ರಸ್ತೆ ಸಂಚಾರಕ್ಕೆ ಮುಕ್ತವಾಗಿಲ್ಲ ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಚಿವ ಬಿ.ಎ. ಮೊಹಿದೀನ್ ಅವರ ಪಾರ್ಥಿವ ಶರೀರ ಹಾಗೂ ಅವರೊಂದಿಗೆ ಮೂವರು ಸಚಿವರು ಇದ್ದ ಹಿನ್ನೆಲೆಯಲ್ಲಿ ಅವರ ವಾಹನ ಶಿರಾಡಿ ಘಾಟಿ ರಸ್ತೆಯಲ್ಲಿ ಆಗಮಿಸಿದೆ. ಅದನ್ನು ಹೊರತು ಪಡಿಸಿ ಇನ್ಯಾವುದೇ ವಾಹನಗಳನ್ನು ಆ ರಸ್ತೆಯಲ್ಲಿ ಬಿಡುತ್ತಿಲ್ಲ. ಜು. 15ರ ವೇಳೆಗೆ ಕಾಮಗಾರಿ ಪೂರ್ಣಗೊಂಡು ರಸ್ತೆ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ