ಚಲಿಸುವ ವಾಹನದ ಮೇಲೆ ಬಿದ್ದ ಮರ
ಹುಲಿಕಲ್ ಘಾಟಿಯಲ್ಲಿ ನಡೆದ ಘಟನೆ
Team Udayavani, Jun 15, 2019, 11:14 AM IST
ಸಿದ್ದಾಪುರ: ಮಾಸ್ತಿಕಟ್ಟೆಯಿಂದ ಹೊಸಂಗಡಿ ಕಡೆಗೆ ಘಾಟಿಯ ರಸ್ತೆಯಲ್ಲಿ ಚಲಿಸುತ್ತಿದ್ದ ಬೊಲೆರೋ ವಾಹನದ ಮೇಲೆ ಮರ ಬಿದ್ದು, ವಾಹನ ಜಖಂಗೊಂಡ ಘಟನೆಯು ಶುಕ್ರವಾರ ಸಂಜೆ ನಡೆದಿದೆ.
ಹೊಸಂಗಡಿ ಕೆಪಿಸಿಯ ಕಚೇರಿಗೆ ಗುತ್ತಿಗೆ ಆಧಾರದ ಮೇಲೆ ಬಾಡಿಗೆ ನೀಡಿದ ಬೊಲೆರೋ ವಾಹನವು ಮಾಸ್ತಿಕಟ್ಟೆಯ ಕೆಪಿಸಿ ಕಚೇರಿಯಿಂದ ಹೊಸಂಗಡಿ ಕಡೆಗೆ ಬರುವಾಗ ಈ ಘಟನೆ ನಡೆದಿದೆ. ವಾಹನದಲ್ಲಿ ಚಾಲಕ ಮತ್ತು ಇಬ್ಬರು ಕೆಪಿಸಿ ಅಧಿಕಾರಿಗಳು ಪ್ರಯಾಣಿಸುತ್ತಿದ್ದರು. ಯಾರಿಗೂ ಅಪಾಯವಾಗಿಲ್ಲ. ಸುಮಾರು ಅರ್ಧ ತಾಸು ಕಾಲ ಹೆದ್ದಾರಿ ಬಂದ್ ಆಗಿದ್ದು, ಇತರ ವಾಹನ ಸವಾರರು ಮರ ತೆರವು ಕಾರ್ಯದಲ್ಲಿ ಪಾಲ್ಗೊಂಡರು.
ತೊಂಬಟ್ಟು: ಮನೆಗೆ ಸಿಡಿಲು ಬಡಿದು ಹಾನಿ
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಗುರುವಾರ ಮಧ್ಯರಾತ್ರಿ ಸುರಿದ ಭಾರೀ ಗಾಳಿ ಮಸಂದರ್ಭ ಅಮಾಸೆಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಂಬಟ್ಟು ರತ್ನಾವತಿ ಶೆಟ್ಟಿ ಅವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅಪಾರ ನಷ್ಟ ಸಂಭವಿಸಿದೆ.
ಮನೆಯಲ್ಲಿ ರತ್ನಾವತಿ ಶೆಟ್ಟಿ ಸಹಿತ ನಾಲ್ಕು ಜನ ವಾಸವಾಗಿದ್ದರು. ಘಟನೆ ಸಂದರ್ಭ ಎಲ್ಲರೂ ನಿದ್ದೆಯಲ್ಲಿದ್ದರು. ಮನೆಯವರು ಸಿಡಿಲಿನ ಆಘಾತಕ್ಕೆ ಒಳಗಾಗಿದ್ದಾರೆ. ಸೂರಪ್ಪ ಶೆಟ್ಟಿ (82) ಅವರ ಕೈಗೆ ಸಿಡಿಲಿನ ಶಾಕ್ ತಾಗಿದೆ. ಮನೆಯ ವಿದ್ಯುತ್ ಉಪಕರಣಗಳು, ಯುಪಿಎಸ್ ಮತ್ತು ಐಬಿಎಸ್ ವಿದ್ಯುತ್ ಬೇಲಿಯ ಬ್ಯಾಟರಿಗಳು ಸುಟ್ಟು ಹೋಗಿವೆ. ಸ್ಥಳಕ್ಕೆ ಉಳ್ಳೂರು-ಮಚ್ಚಟ್ಟು ಗ್ರಾಮ ಕರಣಿಕರು ಮತ್ತು ಇತರ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ