ಲಾಜಿಸ್ಟಿಕ್‌ ಪಾರ್ಕ್‌ ಬದಲು ಮತ್ತೆ ಟ್ರಕ್‌ ಟರ್ಮಿನಲ್‌ಗೆ ಪ್ರಸ್ತಾವ

ಎನ್‌ಎಂಪಿಟಿಯಿಂದ 12.5 ಎಕ್ರೆ ಏರ್‌ ಸರ್ವೆ, ರ್ಯಸಾಧ್ಯತೆ ಬಗ್ಗೆ ಪರಿಶೀಲನೆ

Team Udayavani, Oct 15, 2019, 5:00 AM IST

l-24

ಪಣಂಬೂರು: ಬಂದರು ನಗರಿ ಮಂಗಳೂರಿನಲ್ಲಿ ಅಗತ್ಯವಾಗಿ ಬೇಕಾದ ಟ್ರಕ್‌ ಟರ್ಮಿನಲ್‌ ನಿರ್ಮಾಣಕ್ಕೆ ಬದಲು ಲಾಜಿಸ್ಟಿಕ್‌ ಪಾರ್ಕ್‌ ನಿರ್ಮಿ ಸುವುದಾಗಿ ಸರಕಾರ ಭರವಸೆ ನೀಡಿದ್ದರೂ ಇದುವರೆಗೂ ಯಾವುದೇ ಪ್ರಗತಿ ಕಾಣು ವಲ್ಲಿ ವಿಫಲವಾಗಿದೆ. ಕಳೆದ ವರ್ಷ ಆಗಿನ ಬೃಹತ್‌ ಕೈಗಾರಿಕೆ ಸಚಿವರಾಗಿದ್ದ ಕೆ.ಜೆ. ಜಾರ್ಜ್‌ ಈ ಯೋಜನೆ ಅನುಷ್ಠಾನಕ್ಕೆ ಸಮ್ಮತಿಸಿದ್ದರು. ಬಂದರು, ಕೈಗಾರಿಕೆ ಪ್ರದೇಶಗಳ ವ್ಯಾಪ್ತಿಯಲ್ಲಿ ಭಾರೀ ಗಾತ್ರದ ಲಾರಿಗಳ ಓಡಾಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ ಕಾರ ನಿರ್ಧಾರ ತಳೆದಿತ್ತು. ಆದರೆ ಈಗ ಮತ್ತೆ ಟ್ರಕ್‌ ಟರ್ಮಿನಲ್‌ ನಿರ್ಮಾಣಕ್ಕೆ ಒಲವು ವ್ಯಕ್ತವಾಗಿದೆ.

ಈಗಾಗಲೆ ನವಮಂಗಳೂರು ಬಂದರು ಮಂಡಳಿ 12.5 ಎಕ್ರೆ ಭೂಮಿಯ ಏರ್‌ ಸರ್ವೆ ಪೂರ್ಣಗೊಂಡಿದೆ. ಸುಮಾರು 600 ಟ್ರಕ್‌ ನಿಲುಗಡೆಯ ವ್ಯವಸ್ಥೆ ಇರಲಿದೆ.

ನೂತನ ಟ್ರಕ್‌ ಟರ್ಮಿನಲ್‌ನಲ್ಲಿ ವಿಶ್ರಾಂತಿ ಕೊಠಡಿ, ಶೌಚಾಲಯ, ನೀರಿನ ಸೌಲಭ್ಯ, ಸಣ್ಣ ಪ್ರಮಾಣದ ದುರಸ್ತಿ ಕೇಂದ್ರದ ವ್ಯವಸ್ಥೆಗಳು, ತುರ್ತು ಸೇವೆಗಳು ಒಳಗೊಳ್ಳುತ್ತವೆ.
ಇದರಿಂದ ಹಲವಾರು ಜನರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗಾವಕಾಶ ಲಭಿಸಲಿದೆ.

ಟ್ರಕ್‌ ಟರ್ಮಿನಲ್‌ಗೆ ಏರ್‌ ಸರ್ವೆ
ಟ್ರಕ್‌ ಟರ್ಮಿನಲ್‌ ನಿರ್ಮಾಣಕ್ಕೆ ಎನ್‌ಎಂಪಿಟಿ ಭೂಮಿ ನೀಡಲು ತಾತ್ವಿಕವಾಗಿ ಒಪ್ಪಿದ್ದು ಬೈಕಂಪಾಡಿ ಬಳಿ ಭೂಮಿಯ ಏರ್‌ಸರ್ವೆ ಮಾಡಲಾಗಿದೆ. ಇತ್ತೀಚೆಗೆ ರಾಜ್ಯ ಸರಕಾರದ ಕೈಗಾರಿಕಾ ಕಾರ್ಯದರ್ಶಿ ಗೌರವ್‌ ಗುಪ್ತಾ ಹಾಗೂ ಕೈಗಾರಿಕಾ ಆಯುಕ್ತ ಕುಂಞನ್‌ ಕೃಷ್ಣ ಅವರು ಎನ್‌ಎಂಪಿಟಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ವೇಳೆ ಎನ್‌ಎಂಪಿಟಿ ಕೈಗೊಂಡ ಕಾರ್ಯದ ಬಗ್ಗೆ ಮಾಹಿತಿ ನೀಡಲಾಗಿದೆ.

ಎಪಿಎಂಸಿ ಯಾರ್ಡ್‌ನಲ್ಲಿ ನಿರ್ಮಾಣಕ್ಕೆ ಅಕ್ಷೇಪ ಎಪಿಎಂಸಿ ಯಾರ್ಡ್‌ನಲ್ಲಿ ಎಕ್ರೆಗಟ್ಟಲೆ ಜಾಗವಿದ್ದರೂ ಈ ಭಾಗದಲ್ಲಿ ನಿರ್ಮಾಣಕ್ಕೆ ಆಕ್ಷೇಪ ಎತ್ತಿದೆ. ಇನ್ನು ಖಾಸಗೀ ಸಹಭಾಗಿತ್ವದ ಬದಲು ಎನ್‌ಎಂಪಿಟಿ ಅ ಧೀನದಲ್ಲಿರುವ ಜಾಗದಲ್ಲಿ ಮಾಡಲು ಕನಿಷ್ಟ 10 ಎಕ್ರೆ ಭೂಮಿ ನೀಡುವಂತೆ ಸರಕಾರ ಬಂದರು ಮಂಡಳಿಯೊಂದಿಗೆ ಮಾತುಕತೆಯನ್ನು ಈಗಾಗಲೇ ನಡೆಸಲಾಗಿದ್ದು ಒಪ್ಪಿಕೊಂಡಿದೆ. ಸರಾಸರಿ ಐದು ಸಾವಿರಕ್ಕೂ ಮಿಕ್ಕೂ ಟ್ರಕ್‌ಗಳು ಮಂಗಳೂರು ಬಂದರಿನಲ್ಲಿ ವಿವಿಧ ಸರಕುಗಳ ನಿರ್ವಹಣೆಯಲ್ಲಿ ನಿರತವಾಗಿದೆ. ಇದರ ನಡುವೆ ಕೈಗಾರಿಕಾ ಪ್ರದೇಶಕ್ಕೂ ಸರಕು ಹೇರಿಕೊಂಡು ನೂರಾರು ಘನ ಲಾರಿಗಳು ಓಡಾಟ ನಡೆಸುತ್ತವೆ. ವಿಶ್ರಾಂತಿಗೆ ಸೂಕ್ತ ಜಾಗವಿಲ್ಲದ ಪರಿಣಾಮ ಬೈಕಂಪಾಡಿ, ಕುಳಾಯಿ, ಪಣಂಬೂರು ಮತ್ತಿತರೆಡೆ ಲಾರಿಗಳು ರಸ್ತೆ ಬದಿ ಆಶ್ರಯ ಪಡೆಯುವಂತಾಗಿದೆ. ಈಗ ವಿಶೇಷ ಆರ್ಥಿಕ ವಲಯದ ಬೇಡಿಕೆಯನ್ನು ಪರಿಗಣಿಸಿ ಸರಕಾರ ದೊಡ್ಡ ಪ್ರಮಾಣದ ಟರ್ಮಿನಲ್‌ ನಿರ್ಮಾಣ ಅಗತ್ಯವಾಗಿದೆ. ಇದರಿಂದ ಹೆದ್ದಾರಿ 66ರ ಉದ್ದಕ್ಕೂ ಲಾರಿಗಳ ನಿಲುಗಡೆ ಸಮಸ್ಯೆ ತಪ್ಪಲಿದೆ.

ಸರಕಾರದಿಂದ ಸಹಕಾರ
ಬೈಕಂಪಾಡಿಯಲ್ಲಿ ಟ್ರಕ್‌ ಟರ್ಮಿನಲ್‌ ನಿರ್ಮಾಣಕ್ಕೆ ಎನ್‌ಎಂಪಿಟಿ ಜಾಗ ಗುರುತಿಸಿದ್ದು ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಸಹಕಾರದಲ್ಲಿ ನಿರ್ಮಿಸುವ ಯೋಜನೆಯಿದೆ. ಈಗಾಗಲೇ ಈ ಬಗ್ಗೆ ಎನ್‌ಎಂಪಿಟಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದೆ. ಅಲ್ಲಿರುವ ಜಾಗದಲ್ಲಿ ಟ್ರಕ್‌ ಟರ್ಮಿನಲ್‌ನ್ನು ಅವರೇ ನಿರ್ವಹಣೆ ಮಾಡುವುದಿದ್ದರೆ ರಾಜ್ಯ ಸರಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ.
 - ಗೋಕುಲ್‌ ದಾಸ್‌ ನಾಯಕ್‌,  ಜಂಟಿ ನಿರ್ದೇಶಕರು, ಸಣ್ಣ ಕೈಗಾರಿಕೆ ಇಲಾಖೆ ದ.ಕ.

ಶೀಘ್ರ ಕ್ರಮಕ್ಕೆ ಆಗ್ರಹ
ದೇವರಾಜ ಅರಸು ಟ್ರಕ್‌ ಟರ್ಮಿನಲ್‌ಗೆ 12.5 ಎಕ್ರೆ ಪ್ರದೇಶದಲ್ಲಿ ನಿರ್ಮಾಣಕ್ಕೆ ಎನ್‌ಎಂಪಿಟಿಯು ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಬಳಿ ಇರುವ ತನ್ನ ಜಾಗದಲ್ಲಿ ಏರ್‌ಸರ್ವೆ ಮಾಡಿದೆ. ಇದು ಆರಂಭಿಕ ಹಂತದಲ್ಲಿದೆ. ಸಣ್ಣ ಕೈಗಾರಿಕಾ ಸಂಘ ಬೈಕಂಪಾಡಿ ವತಿಯಿಂದ ನಾವು ಇದರ ನಿರ್ಮಾಣಕ್ಕೆ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ನೀಡಿದ್ದೇವೆ.ಇದಲ್ಲದೆ ಮಂಗಳೂರು ಬೆಂಗಳೂರು ಟ್ರಾನ್ಸ್‌ಫೋರ್ಟ್‌ ವ್ಯವಸ್ಥೆ ಬಲಪಡಿಸಲೂ ಮನವಿ ಮಾಡಿದ್ದೇವೆ.
 -ಅಜಿತ್‌ ಕಾಮತ್‌, ಅಧ್ಯಕ್ಷರು ಸಣ್ಣ ಕೈಗಾರಿಕಾ ಸಂಘ

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.