“ಚರಿತ್ರೆಯ ಸತ್ಯಾಂಶಗಳು ತಿರುಚಲ್ಪಟ್ಟಿವೆ’
Team Udayavani, Aug 17, 2017, 7:20 AM IST
ವಿಟ್ಲ : ದೇಶದ ಸ್ವಾತಂತ್ರ್ಯ ಚರಿತ್ರೆಯ ಸತ್ಯಾಂಶಗಳನ್ನು ತಿರುಚಲಾಗಿದೆ. ಕೇವಲ ಅಹಿಂಸೆ, ಅಸಹಕಾರಕ್ಕೆ ಮಣಿದು ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡಿಲ್ಲ. ಅಪ್ಪಟ ದೇಶಪ್ರೇಮಿಗಳ ನಿರಂತರ ಹೋರಾಟ, ತ್ಯಾಗ, ಬಲಿದಾನ ಬ್ರಿಟಿಷ್ ಆಡಳಿತವನ್ನು ಅಸ್ಥಿರಗೊಳಿಸಿತು. ಒಡೆದು ಆಳುವ ನೀತಿಯಿಂದ ದೇಶ ಕಬಳಿಸಿದ ಇಂಗ್ಲಿಷರು, ದೇಶ ವಿಭಜಿಸಿ ಸ್ವಾತಂತ್ರ್ಯ ನೀಡಿ ವಿಷಬೀಜ ಬಿತ್ತಿದ ಕಾರಣವೇ ಇಂದಿಗೂ ನೆರೆಹೊರೆಯ ರಾಷ್ಟ್ರಗಳಿಂದ ಹಿಂಸೆ, ಅಶಾಂತಿ ತಲೆದೋರಿದೆ ಎಂದು ರಾಜ್ಯ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಾಜಿ ಉಪಾಧ್ಯಕ್ಷ ರೋಹಿಣಾಕ್ಷ ಶಿರ್ಲಾಲು ಹೇಳಿದರು.
ಅವರು ವಿಟ್ಲದಲ್ಲಿ ಸೋಮವಾರ ರಾತ್ರಿ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಂಗವಾಗಿ ರಾಷ್ಟ್ರ ಜಾಗƒತಿ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ದೇಜಪ್ಪ ಪೂಜಾರಿ ನಿಡ್ಯ ಅಧ್ಯಕ್ಷತೆ ವಹಿಸಿದ್ದರು. ಕೃಷ್ಣಪ್ಪ ಕಲ್ಲಡ್ಕ ಉಪಸ್ಥಿತರಿದ್ದರು. ಚರಣ್ ದೇಶಭಕ್ತಿಗೀತೆ ಹಾಡಿದರು. ಪದ್ಮನಾಭ ಕಟ್ಟೆ ಸ್ವಾಗತಿಸಿದರು. ಜಗದೀಶ ಪಾಣೆಮಜಲು ವಂದಿಸಿದರು. ಹರೀಶ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಆರಂಭಿಸಿ ಪ್ರಮುಖ ಬೀದಿಗಳಲ್ಲಿ ಪಂಜಿನ ಮೆರವಣಿಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್