ತೀರಾ ಹದಗೆಟ್ಟಿದೆ ಪ್ರಾಥಮಿಕ ಆರೋಗ್ಯ ಕೇಂದ್ರ ರಸ್ತೆ

ಸಂಪೂರ್ಣ ಕಿತ್ತು ಹೋಗಿದೆ ಡಾಮರು

Team Udayavani, Apr 26, 2019, 5:55 AM IST

28

ಸಂಪಾಜೆ ಆರೋಗ್ಯ ಕೇಂದ್ರಕ್ಕೆ ತೆರಳುವ ರಸ್ತೆ ತೀರಾ ಹದಗೆಟ್ಟಿರುವುದು.

ಅರಂತೋಡು: ಕೊಡಗು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳುವ ತೆರಳುವ ರಸ್ತೆಯ ಸ್ಥಿತಿ ತೀರಾ ಹದಗೆಟ್ಟಿದ್ದು, ವಾಹನಗಳಿಗೆ ಮಾತ್ರವಲ್ಲದೆ ಪಾದಚಾರಿಗಳೂ ನಡೆದಾಡಲು ಕಷ್ಟಪಡುವ ಸ್ಥಿತಿಗೆ ಬಂದು ತಲುಪಿದೆ. ಸಂಪಾಜೆ ಪ್ರಾಥಮಿಕ ಆರೋಗ್ಯದ ವ್ಯಾಪ್ತಿಗೆ ಸೇರಿದ ರಸ್ತೆಯ ಡಾಮರು ಸಂಪೂರ್ಣ ಕಿತ್ತು ಹೋಗಿದೆ. ಆಸ್ಪತ್ರೆಗೆ ವಾಹನದಲ್ಲಿ ತೆರಳುವ ರೋಗಿಗಳ ಗೋಳು ಹೇಳ ತೀರದಾಗಿದೆ. ರೋಗಿಗಳು ವಾಹನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿದರೆ ಇಲ್ಲಿನ ಗುಂಡಿಗಳಲ್ಲಿ ವಾಹನಗಳು ಜಂಪ್‌ ಮೇಲೆ ಜಂಪ್‌ ಹೊಡೆಯುತ್ತವೆ. ಈ ಕಾರಣದಿಂದ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ.

ನಿರ್ವಹಣೆ ಖಾಸಗಿ ಸಂಸ್ಥೆಗೆ!
ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ಕಳೆದ ಎರಡು ಮೂರು ತಿಂಗಳ ಹಿಂದೆ ಸಿಬಂದಿ ಕೊರತೆಯಿಂದ ಸಮಸ್ಯೆಗೆ ಸಿಲುಕಿತ್ತು. ಇದರಿಂದ ಹೆಚ್ಚಿನ ರೋಗಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳದೆ ಇತರ ಆರೋಗ್ಯ ಕೇಂದ್ರ ಹಾಗೂ ಖಾಸಗಿ ಆಸ್ಪತ್ರೆಗೆ ತೆರಳುತ್ತಿದ್ದರು. ಕಳೆದ ಮೂರು ತಿಂಗಳಿನಿಂದ ಈ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೂರು ವರ್ಷಗಳ ತನಕ ಉದ್ಭವ ಎನ್ನುವ ಖಾಸಗಿ ಸಂಸ್ಥೆಗೆ ನಿರ್ವಹಣೆ ಮಾಡಲು ಉಸ್ತುವಾರಿ ನೀಡಲಾಗಿದೆ. ಇದರಿಂದ ಖಾಲಿ ಇದ್ದ ಎಲ್ಲ ಹುದ್ದೆಗಳನ್ನು ಸಂಸ್ಥೆ ತಾತ್ಕಾಲಿಕ ನೆಲೆಯಲ್ಲಿ ಭರ್ತಿ ಮಾಡಿಕೊಂಡಿದೆ. ಇದರಿಂದ ರೋಗಿಗಳಿಗೆ ಉತ್ತಮ ಸೇವೆ ನೀಡುತ್ತಿದ್ದಾರೆ.
ದಿನಕ್ಕೆ ಸರಾಸರಿ 40 ಮಂದಿ ರೋಗಿಗಳು ಹೊರರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಾರಕ್ಕೆ ಒಂದು ಬಾರಿ ಹಾಗೂ ಉಪಕೇಂದ್ರದಲ್ಲಿ ತಿಂಗಳಿಗೆ ಒಂದು ಬಾರಿ ಲಸಿಕೆ ಹಾಕಲಾಗುತ್ತಿದೆ.

ವಸತಿಗೃಹ ದುರಸ್ತಿ
ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎ.ಎನ್‌.ಎಮ್‌. ವಸತಿಗೃಹ ನಾದರಸ್ತಿಯಲ್ಲಿದೆ. ಇದರ ದುರಸ್ತಿ ಕಾರ್ಯ ಈಗ ಆರಂಭಗೊಂಡಿದೆ. ಇದೀಗ ಆಸ್ಪತ್ರೆಯಲ್ಲಿ ದಿನದ 24 ಗಂಟೆಗಳ ಆರೋಗ್ಯ ಸೇವೆ ಲಭ್ಯವಾಗುತ್ತಿದ್ದು, ಸಿಬಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಸತಿಗೃಹದಲ್ಲಿ ಉಳಿದುಕೊಳ್ಳುತ್ತಿದ್ದಾರೆ.

ಗಮನಕ್ಕೆ ತರಲಾಗಿದೆ
ಎ.ಎನ್‌.ಎಮ್‌. ವಸತಿಗೃಹದ ದುರಸ್ತಿ ಕಾರ್ಯ ಆರಂಭಗೊಂಡಿದೆ. ಮೇಲ್ಛಾವಣಿ ಕೆಲಸ ನಡೆದು ಬಣ್ಣ ಬಳಿಯಲಾಗುತ್ತಿದೆ. ಇಲ್ಲಿನ ರಸ್ತೆ ಮಾತ್ರ ದುರಸ್ತಿ ಆಗಿಲ್ಲ. ಈ ಸಮಸ್ಯೆಯ ಬಗ್ಗೆ ಗ್ರಾಮ ಪಂಚಾಯತ್‌ನ ಗಮನಕ್ಕೆ ತಂದು ಜಿಲ್ಲಾ ಪಂಚಾಯತ್‌ನಲ್ಲಿ ಮಾತನಾಡುತ್ತೇವೆ.
– ಡಾ| ವಿನುಫ್ ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ

ಅನುದಾನ ಬಿಡುಗಡೆ
ಪ್ರಾಥಮಿಕ ಆರೋಗ್ಯ ಕೇಂದ್ರದ ರಸ್ತೆ ಹದಗೆಟ್ಟಿರುವ ಬಗ್ಗೆ ತಿಳಿದಿದೆ. ಈ ರಸ್ತೆಯ ಅಭಿವೃದ್ಧಿಗೆ ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಕೆಲಸ ಆರಂಭವಾಗಲಿದೆ.
– ಕುಮಾರ್‌ ಚಿದಾರ್‌ ಅಧ್ಯಕ್ಷರು, ಕೊಡಗು-ಸಂಪಾಜೆ ಗ್ರಾ.ಪಂ.

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.